Telangana: ಎಡಮತಗಳ ನೆಚ್ಚಿಕೊಂಡ ಕಾಂಗ್ರೆಸ್
Team Udayavani, Nov 25, 2023, 11:54 PM IST
ತೆಲಂಗಾಣದಲ್ಲಿ ಬಿಆರ್ಎಸ್ ಸರಕಾರವನ್ನು ಅಧಿಕಾರದಿಂದ ಕೆಳಕ್ಕಿಳಿಸಲು ಪಣ ತೊಟ್ಟಿರುವ ಕಾಂಗ್ರೆಸ್, ನಲ್ಗೊಂಡಾ, ಖಮ್ಮಾಮ್ನಂಥ ಕೆಲವು ಪ್ರದೇಶಗಳಲ್ಲಿ ಎಡಪಕ್ಷಗಳ ಮತಗಳನ್ನು ತನ್ನತ್ತ ಸೆಳೆಯಲು ಎಲ್ಲ ರೀತಿಯ ಕಸರತ್ತುಗಳನ್ನು ನಡೆಸಿದೆ. ಸಿಪಿಐ ಜತೆ ಬಾಂಧವ್ಯ ಬೆಸೆದು ಒಂದು ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿದೆ. ಆದರೆ ಸಿಪಿಎಂ ಜತೆ ಒಪ್ಪಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ಆ ಪಕ್ಷವು 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದ 115 ಕ್ಷೇತ್ರಗಳಲ್ಲಿ ಯಾರನ್ನು ಬೆಂಬಲಿಸುತ್ತೇವೆ ಎಂದು ಸಿಪಿಎಂ ಅಧಿಕೃತವಾಗಿ ಎಲ್ಲೂ ಘೋಷಿಸಿಲ್ಲ.
ಕಳೆದ ಚುನಾವಣೆಯಲ್ಲಿ ಅವಿಭಜಿತ ನಲ್ಗೊಂಡಾ ಜಿಲ್ಲೆಯಲ್ಲಿ ಬರುವ 12 ಅಸೆಂಬ್ಲಿ ಕ್ಷೇತ್ರಗಳ ಪೈಕಿ 9ರಲ್ಲಿ ಬಿಆರ್ಎಸ್, ಮೂರರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಅನಂತರ ನಡೆದ ಉಪಚುನಾವಣೆಯಲ್ಲಿ ಮತ್ತೆರಡು ಸೀಟುಗಳು ಬಿಆರ್ಎಸ್ ಪಾಲಾಗಿ, ಒಟ್ಟು ಸಂಖ್ಯೆ 11ಕ್ಕೇರಿತ್ತು. ಕೆಸಿಆರ್ ಸರಕಾರದ ಕಲ್ಯಾಣ ಯೋಜನೆ ಗಳಿಂದ ಆಕರ್ಷಿತರಾಗಿ ಎಡಪಕ್ಷದ ಮತಗಳೆಲ್ಲ ಬಿಆರ್ಎಸ್ಗೆ ಶಿಫ್ಟ್ ಆಗಿದ್ದವು. ಈ ಬಾರಿ ಸಿಪಿಐ ಜತೆಗಿನ ಮೈತ್ರಿಯು ನಲ್ಗೊಂಡಾ ಸೇರಿದಂತೆ ಎಡ ಬಾಹುಳ್ಯ ವಿರುವ ಪ್ರದೇಶಗಳಲ್ಲಿ ಆ ಪಕ್ಷದ ಮತಗಳನ್ನು ತನ್ನ ಬುಟ್ಟಿಗೆ ಸೇರಿಸಿಕೊಳ್ಳಲು ನೆರವಾಗಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ನದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ