ಸುಳ್ಳಿನ ಮೇಲೆ ಕಾಂಗ್ರೆಸ್ ಸವಾರಿ: ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 8, 2022, 2:23 AM IST
ಉಡುಪಿ: ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿಷಯದಲ್ಲಿ ಕಾಂಗ್ರೆಸ್ ಸುಳ್ಳಿನ ಮೇಲೆ ಸವಾರಿ ಮಾಡುತ್ತಿದೆ ಎಂದು ಸಮಾಜ ಕಲ್ಯಾಣಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ರಚಿಸಿದ್ದ ಪ್ರೊ| ಬರಗೂರು ರಾಮಚಂದ್ರಪ್ಪನವರ ಸಮಿತಿ ಏನು ಮಾಡಿದೆ ಎಂಬ ಮಾಹಿತಿಯೂ ನಮ್ಮ ಬಳಿಯಿದೆ. ಈಗ ರೋಹಿತ್ ಚಕ್ರತಿರ್ಥರ ಸಮಿತಿ ಏನು ಮಾಡಿದೆ ಎಂಬುದು ಗೊತ್ತಿದೆ. ಹೀಗಾಗಿ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮುಕ್ತ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದರು.
ಪಠ್ಯದಲ್ಲಿ ರಾಷ್ಟ್ರಪ್ರೇಮ ತುಂಬು ವುದು ತಪ್ಪೇ? ಅಸಹಿಷ್ಣುತೆ ಹೆಸರಿಲ್ಲಿ ಪ್ರಶಸ್ತಿ ವಾಪಸ್, ಪಠ್ಯ ವಾಪಸ್ ಎಲ್ಲವೂ ನೋಡಿದ್ದೇವೆ. ಪ್ರಶಸ್ತಿ ಸಿಗದವರೂ ಪ್ರಚಾರಕ್ಕಾಗಿ ವಾಪಸ್ ತಂತ್ರ ಬಳಸಿಕೊಂಡಿದ್ದರು. ಈಗಲೂ ಕೆಲವು ಅದನ್ನೇ ಮಾಡುತ್ತಿದ್ದಾರೆ. ಹಿರಿಯ ಸಾಹಿತಿ ದೇವನೂರ ಮಹದೇವ ಅವರಲ್ಲಿ ಶಿಕ್ಷಣ ಸಚಿವರೇ ಖುದ್ದು ಮಾತಾಡಿದ್ದಾರೆ. ಸಾಹಿತಿಗಳಿಗೆ ನೀಡಬೇಕಾದ ಗೌರವ ನೀಡುತ್ತಿದ್ದೇವೆ. ಅಸಹಿಷ್ಣುತೆ ಹೆಸರಿನಲ್ಲಿ ದಬ್ಟಾಳಿಕೆ, ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.
ಪಿಯುಸಿ ಪಠ್ಯ ಪರಿಷ್ಕರಣೆ ಕೈ ಬಿಟ್ಟಿಲ್ಲ, ಮುಂದೂಡಿದ್ದೇವೆ. ಪಠ್ಯದಲ್ಲಿ ಏನಿರಬೇಕು, ಏನಿರಬಾರದು ಎಂಬು ದನ್ನು ಸರಕಾರವಾಗಿ ನಾವು ನಿರ್ಧರಿಸುತ್ತೇವೆ. ಮಕ್ಕಳಿಗೆ ರಾಷ್ಟ್ರಪ್ರೇಮ ಕಲಿಸುವ ಪಠ್ಯ ಜೋಡಿಸಲಾಗು
ವುದು. ರಾಜಕೀಯ ಕಾರಣಕ್ಕೆ ಪಠ್ಯಪುಸ್ತಕ ಎಂಬ ಭೂತವನ್ನು ಕಾಂಗ್ರೆಸ್ನವರು ಸೃಷ್ಟಿಸುತ್ತಿದ್ದಾರೆ. ಇದರಲ್ಲಿ ಕಾಂಗ್ರೆಸ್ನ ವಿಚಾರ, ಭಾವನೆಯೇನು? ಜನರು ಎಲ್ಲವನ್ನು ನೋಡುತ್ತಿದ್ದಾರೆ ಎಂದರು.
ಆರೆಸ್ಸೆಸ್ ವಿರುದ್ಧದ ಕಾಂಗ್ರೆಸ್ನ ಟೀಕೆ ಆ ಪಕ್ಷದ ಅಧೋಗತಿಗೆ ಕಾರಣವಾಗಲಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ