
ಹುಣಸೂರು: ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ
Team Udayavani, Mar 20, 2023, 12:36 PM IST

ಹುಣಸೂರು: ಕಾಂಗ್ರೆಸ್ ಪಕ್ಷ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಮೂಲಕ 2 ಸಾವಿರ ರೂ., 200 ಯುನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಣೆ ಜೊತೆಗೆ ವಸತಿ ನಿರ್ಮಾಣಕ್ಕೆ ನಾಲ್ಕು ಲಕ್ಷ ರೂ. ಅನುದಾನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಘೋಷಣೆ ಮಾಡಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.
ಅವರು ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ಗ್ಯಾರೆಂಟಿ ಕಾರ್ಡ್ ಗಳ ಭಿತ್ತಿ ಪತ್ರಗಳನ್ನು ಆಟೋಗಳಿಗೆ ಅಂಟಿಸುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಕಾರ್ಡ್ಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷದ ಘೋಷಣೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಟ್ಟಿದ್ದ 165 ಭರವಸೆಗಳನ್ನು ಈಡೇರಿಸಲಾಗಿತ್ತು ಎಂದರು.
ಆದ್ದರಿಂದ ಈ ಬಾರಿ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಬಂದಿದೆ. ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದ್ದು, ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷ ಸೇರಿದಂತೆ ನನ್ನ ಮೇಲೆ ಅತಿ ಹೆಚ್ಚು ಪ್ರೀತಿ ವಿಶ್ವಾಸ ನಂಬಿಕೆ ಇಟ್ಟಿದ್ದು ಕಾರ್ಯಕರ್ತರು ಪಕ್ಷದ ಘೋಷಣೆಗಳನ್ನು ಜನರಿಗೆ ತಿಳಿಸಬೇಕೆಂದು ಮನವಿ ಮಾಡಿ ವಿರೋಧ ಪಕ್ಷಗಳ ಟೀಕೆ ಹಾಗೂ ಬೆದರಿಕೆಗಳಿಗೆ ಎದೆಗುಂದದೆ ಧೈರ್ಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ವೇತಾ ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿಕೆ ರಮೇಶ್, ಕಾರ್ಯಾಧ್ಯಕ್ಷ ವಕೀಲ ಪುಟ್ಟರಾಜ್, ನಗರಸಭಾ ಮಾಜಿ ಅಧ್ಯಕ್ಷರುಗಳಾದ ಸೌರಭ ಸಿದ್ದರಾಜ್, ಪರ್ವೀನ್ ತಾಜ್ ಜಾಕೀರ್ ಹುಸೇನ್ ಮಾಜಿ ಉಪಾಧ್ಯಕ್ಷ ದೇವನಾಯಕ, ನಗರಸಭಾ ಸದಸ್ಯರಾದ ಸ್ವಾಮಿ ಗೌಡ, ಮನು, ಮಂಜು ರಂಜಿತಾ ಹರೀಶ್ ವೆನ್ನಿ ತೋಮಸ್, ರಾಘು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್, ಪದ್ಮನಾಭ, ಮನೋಜ್ ಇತರರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Piriyapatna ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೆ.ವೆಂಕಟೇಶ್

Kabini ಹಿನ್ನೀರಲ್ಲಿ 3.5 ಟನ್ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

ಶಿಕ್ಷಣ, ಆರೋಗ್ಯಕ್ಕೆ ರಾಜ್ಯ ಸರ್ಕಾರ ಒತ್ತು ನೀಡಲಿ: ಎಂಎಲ್ಸಿ ವಿಶ್ವನಾಥ್

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
