ಬಿಜೆಪಿ ಮಾದರಿಯಲ್ಲೇ ಕಾಂಗ್ರೆಸ್‌ ರಣತಂತ್ರ

ಪ್ರತಿ ಕ್ಷೇತ್ರಕೆ ಅನ್ಯ ರಾಜ್ಯದ 15 ಜನರ ತಂಡ ಭೇಟಿ | ವಾರಕ್ಕೊಂದು ಟಾಸ್ಕ್‌, ರಾಹುಲ್‌ ದಿನಕ್ಕೊಂದು ಸಭೆ

Team Udayavani, Mar 17, 2023, 4:25 PM IST

cong flag

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಮೂಲಕ ಪುನಶ್ಚೇತನ ಕಂಡುಕೊಳ್ಳುವ ತವಕದಲ್ಲಿರುವ ಕಾಂಗ್ರೆಸ್‌ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ಚುನಾವಣೆ ಘೋಷಣೆ ಯಾಗುವ ಮೊದಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 15 ಜನರ ತಂಡವನ್ನು ಅನ್ಯ ರಾಜ್ಯಗಳಿಂದ ಕರೆತಂದಿದೆ. ಈ ಹಿಂದೆ ಬಿಜೆಪಿ ಪರವಾಗಿ ದೇಶದ ವಿವಿಧ ರಾಜ್ಯಗಳ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಬಂದು ಕ್ಷೇತ್ರಗಳಲ್ಲಿ ನೆಲೆ ನಿಂತು ಚುನಾವಣೆ ನಡೆಸುತ್ತಿದ್ದರು. ಚುನಾ ವಣೆಗಾಗಿಯೇತಿಂಗಳು, 15 ದಿನಗಳ ಕಾಲ ಮನೆ ಬಿಟ್ಟುಬಂದು ಕೆಲಸ ಮಾಡುವ ವಿಸ್ತಾರಕರ ತಂಡ ಬಿಜೆಪಿಯಲ್ಲಿತ್ತು.

ಈಗ ಕಾಂಗ್ರೆಸ್‌ ಕೂಡ ಇಂಥದ್ದೇ ಪ್ರಯೋಗಕ್ಕೆ ಮುಂದಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 15 ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ದೇಶದ ವಿವಿಧ ರಾಜ್ಯಗಳಾದ ಪಂಜಾಬ್‌, ಛತ್ತೀಸ್‌ಘಡ, ರಾಜಸ್ಥಾನ, ದೆಹಲಿ, ಹರಿಯಾಣ ಮತ್ತಿತರೆಡೆಗಳಿಂದ ಬಂದು ನೆಲೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೂ ಈ ಪಡೆ ಬಂದಿದ್ದು, ಮೊದಲ ಹಂತದಲ್ಲಿ ಬೂತ್‌ಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸ್ಥಳೀಯ ಮುಖಂಡರ ಬಂಡವಾಳ ಬಯಲು: ಚುನಾವಣೆ ಉದ್ದೇಶದಿಂದಲೇ ಮೂರು ವರ್ಷಗಳಿಂದ ಬೂತ್‌ ಮಟ್ಟ ದಲ್ಲಿ ಕಾರ್ಯಕರ್ತರ ಪಡೆ ಕಟ್ಟಬೇಕು.

ಬೂತ್‌ ಕಮಿಟಿ ರಚನೆ ಮಾಡಬೇಕು ಎಂಬ ಸೂಚನೆಯನ್ನು ಕಾಂಗ್ರೆಸ್‌ ಹೈಕ ಮಾಂಡ್‌ ನೀಡಿತ್ತು. ಇದು ಎಷ್ಟರ ಮಟ್ಟಿಗೆ ಪಾಲನೆಯಾಗಿದೆ ಎನ್ನುವುದನ್ನು ಹೊರ ರಾಜ್ಯಗಳಿಂದ ಬಂದಿರುವ ತಂಡ ಖುದ್ದು ಬೂತ್‌ಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ. ಎಷ್ಟು ಬೂತ್‌ ಕಮಿಟಿ ರಚನೆಯಾಗಿದೆ. ರಚನೆಯಾಗದಿರುವ ಬೂತ್‌ಗಳೆಷ್ಟು ಎಂಬಿತ್ಯಾದಿ ಮಾಹಿತಿಯನ್ನು ಅಂಕಿ-ಸಂಖ್ಯೆ ಸಮೇತ ಪ್ರತಿ ದಿನ ಹೈಕಮಾಂಡ್‌ಗೆ ರವಾನಿಸುತ್ತಿದೆ. ಇದ ರಿಂದ ಇಷ್ಟು ದಿನ ಪಕ್ಷದ ಕೆಲಸವನ್ನು ಸರಿಯಾಗಿ ನಿಭಾಯಿ ಸದ ಸ್ಥಳೀಯ ಮುಖಂಡರಿಗೆ ಪೀಕಲಾಟ ಶುರುವಾಗಿದೆ.

ದಿನಕ್ಕೊಂದು ಮೀಟಿಂಗ್‌, ವಾರಕ್ಕೊಂದು ಟಾಸ್ಕ್: ಹೊರ ರಾಜ್ಯಗಳಿಂದ ಬಂದಿರುವ ತಂಡ ಮೊದಲ ದಿನದಿಂದಲೇ ಕೆಲಸ ಆರಂಭಿಸಿದ್ದು, ಆಯಾ ಕ್ಷೇತ್ರಗಳ ವ್ಯಾಪ್ತಿಯ ಬೂತ್‌ಗಳಿಗೆ ತೆರಳಿ ಅಲ್ಲಿನ ಕಾರ್ಯಕರ್ತರು, ಜನಸಾಮಾನ್ಯರನ್ನು ಮಾತನಾ ಡಿಸಿ ಅಭಿಪ್ರಾಯ ಸಂಗ್ರಹಿಸುವುದು, ಆಡಳಿತ ಪಕ್ಷದ ಕುರಿತು ಜನರಲ್ಲಿರುವ ಅಸಮಾಧಾನವನ್ನು ಗ್ರಹಿಸುವುದು, ಈ ಅಸಮಾಧಾನ ಕಾಂಗ್ರೆಸ್‌ಗೆ ಮತವಾಗಿ ಪರಿವರ್ತನೆಯಾಗಲು ಏನಾಗಬೇಕು ಎನ್ನುವ ಅಂಶಗಳನ್ನು ಪಟ್ಟಿ ಮಾಡುತ್ತಿದೆ. ಈ ಮಾಹಿತಿಗಳನ್ನು ಆಯಾ ದಿನವೇ ಸಂಜೆ ಹೈಕಮಾಂಡ್‌ಗೆ ತಲುಪಿಸಲಿದೆ.

ಖುದ್ದು ರಾಹುಲ್‌ ಗಾಂಧಿ ಅವರಿಗೆ ಈ ಮಾಹಿತಿ ರವಾನೆಯಾಗುತ್ತಿದ್ದು, ಅವರ ಆಪ್ತರ ತಂಡ ಈ ಕಾರ್ಯಾಚರಣೆ ಮಾಡುತ್ತಿದೆ. ಪ್ರತಿ ದಿನ ಸಂಜೆ ಸಭೆ ನಡೆಸಿ ಆಯಾ ದಿನದ ಆಗು-ಹೋಗುಗಳನ್ನು ವರಿಷ್ಠರಿಗೆ ತಲುಪಿಸಲಾಗುತ್ತಿದೆ. ಚುನಾವಣೆ ಗೆಲುವಿನ ದೃಷ್ಟಿಯಿಂದ ಈ ತಂಡಕ್ಕೆ ಪ್ರತಿ ವಾರ ಒಂದೊಂದು ಟಾಸ್ಕ್ ನೀಡಲಾಗುತ್ತಿದೆ. ಅದರನ್ವಯ ವಾರ-ವಾರವೂ ಕಾರ್ಯ ವೈಖರಿ ಬದಲಾಗುತ್ತಲೇ ಇರುತ್ತದೆ.

ಕಾಲಚಕ್ರ ಬದಲಾಗಲೇಬೇಕು
“ಉದಯವಾಣಿ”ಗೆ ಮಾತಿಗೆ ಸಿಕ್ಕ ಈ ತಂಡದ ಛತ್ತೀಸ್‌ಗಡ ಹಾಗೂ ರಾಜಸ್ಥಾನದ ಯುವ ಕಾಂಗ್ರೆಸ್‌ ಮುಖಂಡರು, ಮೇಲೆ ಹೋದದ್ದು ಕೆಳಗೆ ಬರಲೇಬೇಕು. ಇದು ಕಾಲದ ನಿಯಮ. ಅದರಂತೆ ಕಾಂಗ್ರೆಸ್‌ ಮತ್ತೆ ಪುಟಿದೇಳಲು ಕೆಲಸ ಮಾಡುತ್ತಿದೆ. ಕರ್ನಾಟಕ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತಿದ್ದೇವೆ. ಇಂಥದ್ದೇ ಪ್ರಯೋಗವನ್ನು ಹಿಮಾಚಲ ಪ್ರದೇಶದಲ್ಲಿ ಮಾಡಿದ್ದು ಅಲ್ಲಿ ಉತ್ತಮ ಫಲಿತಾಂಶ ಸಿಕ್ಕಿದೆ ಎಂಬ ಮಾಹಿತಿ ಹಂಚಿಕೊಂಡರು.

~ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.