ಸಲ್ಮಾನ್ ಖುರ್ಷಿದ್ ವಿರುದ್ಧ ಎರಡು ಪ್ರತ್ಯೇಕ ದೂರು
Team Udayavani, Nov 12, 2021, 5:54 AM IST
ಹೊಸದಿಲ್ಲಿ: ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹವಾಗಿ ಬರೆದ ಹಿನ್ನೆಲೆಯಲ್ಲಿ ವಿವಾದಕ್ಕೀಡಾಗಿರುವ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ವಿರುದ್ಧ ಹೊಸದಿಲ್ಲಿಯ ವಿವೇಕ್ ಗಾರ್ಗ್ ಹಾಗೂ ವಿನೀತ್ ಜಿಂದಾಲ್ ಎಂಬ ಇಬ್ಬರು ವಕೀಲರು, ಎರಡು ಪ್ರತ್ಯೇಕ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿರುವ ಸಲ್ಮಾನ್ ಖುರ್ಷಿದ್ ಪುಸ್ತಕ “ಸನ್ರೈಸ್ ಓವರ್ ಅಯೋಧ್ಯಾ’ದಲ್ಲಿ ಹಿಂದುತ್ವಕ್ಕೆ ಅವಮಾನಕಾರಿಯಾದ ವಾಕ್ಯಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಲಾಗಿದೆ. ಪುಸ್ತಕದಲ್ಲಿರುವ ಈ ಸಾಲುಗಳು, ದೇಶದ್ರೋಹ, ಭಾರತದ ಸಾರ್ವಭೌಮತ್ವವನ್ನು ಬುಡಮೇಲಾಗಿಸುವ ಪಿತೂರಿಯನ್ನು ತೋರಿಸುತ್ತಿದ್ದು, ಈ ಪ್ರಕರಣ ತನಿಖೆಗೆ ಅರ್ಹವಾಗಿದೆ ಎಂದು ವಿವೇಕ್ ಗಾರ್ಗ್ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ನ.18ರಂದು ಈ ಶತಮಾನದ ಅತಿದೀರ್ಘಾವಧಿಯ ಭಾಗಶಃ ಚಂದ್ರಗ್ರಹಣ
ಏನಿದೆ ಪುಸ್ತಕದಲ್ಲಿ?: ರಾಮಜನ್ಮಭೂಮಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನು ಆಧಾರವಾಗಿಟ್ಟುಕೊಂಡು ಖುರ್ಷಿದ್ ಈ ಪುಸ್ತಕ ಬರೆದಿದ್ದು, “ಭಾರತದ ಪುರಾತನ ಋಷಿಮುನಿಗಳು ಹುಟ್ಟುಹಾಕಿದ್ದ ಹಿಂದುತ್ವ ಹಾಗೂ ಸನಾತನ ಧರ್ಮಗಳ ಪರಿಕಲ್ಪನೆಗಳನ್ನು ರಾಜಕೀಯ ಆವಶ್ಯ ಕತೆಗಳಿಗೆ ತಕ್ಕಂತೆ ಬದಲಾಯಿಸಲಾಗಿದೆ. ಹೊಸ ಪರಿಕಲ್ಪನೆಗಳು ಇಸ್ಲಾಂನ ಜೆಹಾದ್ ಸಂಘಟನೆಗಳಾದ ಬೊಕೊ ಹರಾಮ್ ಹಾಗೂ ಐಎಸ್ಐಎಸ್ನ ಸಿದ್ಧಾಂತಗಳನ್ನು ಹೋಲುತ್ತಿವೆ’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ