Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

ಮಂಗಳೂರಿನಲ್ಲಿ ತಟರಕ್ಷಕ ಪಡೆಗೆ ದೇಶದ ಮೊದಲ ತರಬೇತಿ ಶಾಲೆ

Team Udayavani, Sep 23, 2023, 7:00 AM IST

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್‌ ಅಕಾಡೆಮಿ ನಿರ್ಮಾಣ

ಮಂಗಳೂರು: ದೇಶದ ಮೊದಲ ಕೋಸ್ಟ್‌ಗಾರ್ಡ್‌ ತರಬೇತಿ ಅಕಾಡೆಮಿಯ ಸ್ಥಾಪನೆ ಪ್ರಕ್ರಿಯೆ ಮಂಗಳೂರಿನಲ್ಲಿ ಆರಂಭಗೊಂಡಿದೆ. ಕೆಂಜಾರಿನಲ್ಲಿ 158 ಎಕ್ರೆ ಭೂಮಿಯನ್ನು ಇದಕ್ಕಾಗಿ ರಕ್ಷಣ ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದ್ದು, ಸುತ್ತಲೂ ಆವರಣ ಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ಅಕಾಡೆಮಿ ಸ್ಥಾಪನೆಗೆ ತಾತ್ವಿಕವಾಗಿ ಅನುಮೋದನೆ ಪಡೆದ ಬಳಿಕ ಹಂತ ಹಂತವಾಗಿ ಕೆಲಸ ನಡೆಯುತ್ತಿದ್ದು, 2026ರ ವೇಳೆಗೆ ಪೂರ್ಣ ಪ್ರಮಾಣದ ಅಕಾಡೆಮಿ ತಲೆ ಎತ್ತುವ ನಿರೀಕ್ಷೆ ಇದೆ.

ಕೆಂಜಾರು ಸೂಕ್ತ ಸ್ಥಳ
ಅಕಾಡೆಮಿ ಸ್ಥಾಪನೆಗೆ ಸುಮಾರು 1 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಕರಾವಳಿಯಲ್ಲಿ ಅಕಾಡೆಮಿಗೆ ಪೂರಕವಾದ ಭೌಗೊ àಳಿಕ ಲಕ್ಷಣಗಳಿದ್ದು, ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಈಗ ಗುರುತಿಸಲಾದ ಜಾಗವು ಫಲ್ಗುಣಿ ನದಿಯ ಬದಿಯಲ್ಲಿದೆ. ಜತೆಗೆ ಕೋಸ್ಟ್‌ಗಾರ್ಡ್‌ನ ಮೂರನೇ ಜಿಲ್ಲಾ ಪ್ರಧಾನ ಕಚೇರಿ ಕೂಡ ಪಣಂಬೂರಿನಲ್ಲಿದೆ. ಬಂದರು, ವಿಮಾನ ನಿಲ್ದಾಣವೂ ಹತ್ತಿರದಲ್ಲಿದ್ದು, ಅಕಾಡೆಮಿ ಸ್ಥಾಪನೆಗೆ ಸೂಕ್ತ ಸ್ಥಳ.

ವಿಸ್ತೃತ ತರಬೇತಿ ಅವಕಾಶ
ಇಲ್ಲಿ ಆಯ್ಕೆಯಾಗುವ ಅಭ್ಯರ್ಥಿ ಗಳಿಗೆ ನೌಕಾ ತರಬೇತಿ, ಮಾಲಿನ್ಯ ಸ್ಪಂದನೆ, ಶೋಧ ಮತ್ತು ಪತ್ತೆ, ವಿವಿಧ ರೀತಿಯ ಕಾರ್ಯಾಚರಣೆ, ಸಾಗರೋತ್ತರ ನಿಯಮಾವಳಿಗಳು, ಕಡಲ್ಗಳ್ಳರ ನಿಯಂತ್ರಣ ಇತ್ಯಾದಿ ತರಬೇತಿ ನೀಡಲಾಗುವುದು. ಇದಕ್ಕಾಗಿ ಹಲವು ರೀತಿಯ ನೌಕೆಗಳು, ವಿಮಾನಗಳು ಕೂಡ ಬರುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ತರಬೇತಿಗೆ ಅಕಾಡೆಮಿಯೊಳಗೇ 9 ವಿವಿಧ ಸ್ಕೂಲ್‌ಗ‌ಳು ಇರುತ್ತವೆ. ಸುಮಾರು 650ರಷ್ಟು ಪ್ರಶಿಕ್ಷಣಾರ್ಥಿಗಳನ್ನು ಇದಕ್ಕೆ ಆಯ್ಕೆ ಮಾಡಿಕೊಳ್ಳುವ ಅವಕಾಶವಿದ್ದು, ಇದರಲ್ಲಿ ವಿದೇಶಿ ವಿದ್ಯಾರ್ಥಿಗಳೂ ಇರುತ್ತಾರೆ ಎನ್ನುವುದು ವಿಶೇಷ.

ಕೇರಳಕ್ಕೆ ಹೋಗುವುದು ತಪ್ಪಿತ್ತು!
ಕೇರಳದ ಕಣ್ಣೂರು ಜಿಲ್ಲೆಯ ಆಯಿಕಲ್‌ ಸಮೀಪದ ಇರಿನಾವು ಸಮುದ್ರ ತೀರದ ವಳಪಟ್ಟಣಂ ನದಿಯ ಬಳಿ ಸ್ಥಾಪನೆಗೆ ಕೇರಳದಿಂದ ಲಾಬಿ ನಡೆದಿತ್ತು. ಆದರೆ ಕಳೆದ ಅವಧಿಯಲ್ಲಿ ಕೇಂದ್ರದ ರಕ್ಷಣ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್‌ ಅವರು ಭಾರತೀಯ ತಟರಕ್ಷಣ ಪಡೆಯ ಡೈರೆಕ್ಟರ್‌ ಜನರಲ್‌ ಜತೆ 2017ರ ಡಿಸೆಂಬರ್‌ ತಿಂಗಳಲ್ಲಿ ಮಂಗಳೂರಿನ ಕೆಂಜಾರಿಗೆ ಭೇಟಿ ನೀಡಿ ಅಕಾಡೆಮಿ ನಿರ್ಮಾಣಕ್ಕೆ ಗುರುತಿಸಿದ್ದ ಪ್ರದೇಶವನ್ನು ಪರೀಶೀಲಿಸಿದ್ದರು. ಆ ಬಳಿಕ ಸಂಸದ ನಳಿನ್‌ ಕುಮಾರ್‌ ಕಟೀಲು ರಕ್ಷಣ ಸಚಿವರನ್ನು ಭೇಟಿಯಾಗಿದ್ದು, ಅವರೂ ಪೂರಕವಾಗಿ ಸ್ಪಂದಿಸಿ, ಶೀಘ್ರ ಅಕಾಡೆಮಿ ಸ್ಥಾಪಿಸುವ ಭರವಸೆ ನೀಡಿದ್ದರು. ಹೀಗಾಗಿ ಅಕಾಡೆಮಿಯು ಕೇರಳದ ಪಾಲಾಗದೆ
ಮಂಗಳೂರಿಗೇದಕ್ಕಿದೆ.

ಸದ್ಯ ತರಬೇತಿ ಅಕಾಡೆಮಿ ಇಲ್ಲ
1977ರಲ್ಲಿ ಭಾರತೀಯ ಜಲಪ್ರದೇಶದ ರಕ್ಷಣೆಗಾಗಿ ಸ್ಥಾಪನೆ ಗೊಂಡ ಕೋಸ್ಟ್‌ಗಾರ್ಡ್‌ಗೆ ಇದುವರೆಗೆ ಪೂರ್ಣ ಪ್ರಮಾಣದ ಸ್ವಂತ ತರಬೇತಿ ಅಕಾಡೆಮಿ ಇಲ್ಲ. ನಮ್ಮ ರಕ್ಷಣ ಪಡೆಯ ಮೂರೂ ದಳಗಳಿಗೆ ಅವುಗಳದ್ದೇ ಆದ ಇಂಡಿಯನ್‌ ಮಿಲಿಟರಿ ಅಕಾಡೆಮಿ, ನೇವಲ್‌ ಅಕಾಡೆಮಿ, ಏರ್‌ಫೋರ್ಸ್‌ ಅಕಾಡೆಮಿ ಇವೆ. ಕೋಸ್ಟ್‌ಗಾರ್ಡ್‌ ಅಭ್ಯರ್ಥಿಗಳಿಗೆ ಕೇರಳದ ಏಳಿಮಲೆ ಯಲ್ಲಿ ರುವ ನೇವಲ್‌ ಅಕಾಡೆಮಿಯಲ್ಲಿ 22 ವಾರಗಳ ತರಬೇತಿ ಹಾಗೂ ಬಳಿಕ 12 ವಾರಗಳ ಕಾಲ ನೌಕಾ ತರಬೇತಿ ನೀಡಲಾಗುತ್ತದೆ. ಅಲ್ಲದೆ ಕೊಚ್ಚಿಯಲ್ಲಿ ಕೋಸ್ಟ್‌ಗಾರ್ಡ್‌ ನವರ ತಾತ್ಕಾಲಿಕ ತರಬೇತಿ ಕೇಂದ್ರವಿದೆ.

ತಾತ್ವಿಕ ಅನುಮೋದನೆ ಪಡೆದುಕೊಂಡಿದ್ದು, ಸದ್ಯ ರಕ್ಷಣ ಸಚಿವಾಲಯ ಇದರ ಮೇಲು ಸ್ತುವಾರಿ ನೋಡಿಕೊಳ್ಳುತ್ತಿದೆ. ಕಾಂಪೌಂಡ್‌ ವಾಲ್‌ ನಿರ್ಮಾಣ ನಡೆಯುತ್ತಿದೆ. ಮುಂದೆ ಗುತ್ತಿಗೆದಾರ ರನ್ನು ಆಯ್ಕೆ ಮಾಡಿ, ಅಕಾಡೆಮಿ ನಿರ್ಮಾಣ ಕೆಲಸ ಆರಂಭವಾಗಲಿದೆ. ಎಲ್ಲವೂ ಸರಿಯಾದರೆ 2026ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ
ಇದೆ.
-ಮನೋಜ್‌ ಬಾಡ್ಕರ್‌,
ಕಮಾಂಡರ್‌, ಪಶ್ಚಿಮ ವಲಯ,
ಕೋಸ್ಟ್‌ಗಾರ್ಡ್‌

- ವೇಣು ವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.