![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Mangaluru ಕೆಂಜಾರಿನಲ್ಲಿ ಕೋಸ್ಟ್ಗಾರ್ಡ್ ಅಕಾಡೆಮಿ ನಿರ್ಮಾಣ
ಮಂಗಳೂರಿನಲ್ಲಿ ತಟರಕ್ಷಕ ಪಡೆಗೆ ದೇಶದ ಮೊದಲ ತರಬೇತಿ ಶಾಲೆ
Team Udayavani, Sep 23, 2023, 7:00 AM IST
![Mangaluru ಕೆಂಜಾರಿನಲ್ಲಿ ಕೋಸ್ಟ್ಗಾರ್ಡ್ ಅಕಾಡೆಮಿ ನಿರ್ಮಾಣ](https://www.udayavani.com/wp-content/uploads/2023/09/2109mlr41-coast-620x337.jpg)
ಮಂಗಳೂರು: ದೇಶದ ಮೊದಲ ಕೋಸ್ಟ್ಗಾರ್ಡ್ ತರಬೇತಿ ಅಕಾಡೆಮಿಯ ಸ್ಥಾಪನೆ ಪ್ರಕ್ರಿಯೆ ಮಂಗಳೂರಿನಲ್ಲಿ ಆರಂಭಗೊಂಡಿದೆ. ಕೆಂಜಾರಿನಲ್ಲಿ 158 ಎಕ್ರೆ ಭೂಮಿಯನ್ನು ಇದಕ್ಕಾಗಿ ರಕ್ಷಣ ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದ್ದು, ಸುತ್ತಲೂ ಆವರಣ ಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿದೆ.
ಕೇಂದ್ರ ಸಚಿವ ಸಂಪುಟದಲ್ಲಿ ಅಕಾಡೆಮಿ ಸ್ಥಾಪನೆಗೆ ತಾತ್ವಿಕವಾಗಿ ಅನುಮೋದನೆ ಪಡೆದ ಬಳಿಕ ಹಂತ ಹಂತವಾಗಿ ಕೆಲಸ ನಡೆಯುತ್ತಿದ್ದು, 2026ರ ವೇಳೆಗೆ ಪೂರ್ಣ ಪ್ರಮಾಣದ ಅಕಾಡೆಮಿ ತಲೆ ಎತ್ತುವ ನಿರೀಕ್ಷೆ ಇದೆ.
ಕೆಂಜಾರು ಸೂಕ್ತ ಸ್ಥಳ
ಅಕಾಡೆಮಿ ಸ್ಥಾಪನೆಗೆ ಸುಮಾರು 1 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಕರಾವಳಿಯಲ್ಲಿ ಅಕಾಡೆಮಿಗೆ ಪೂರಕವಾದ ಭೌಗೊ àಳಿಕ ಲಕ್ಷಣಗಳಿದ್ದು, ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಈಗ ಗುರುತಿಸಲಾದ ಜಾಗವು ಫಲ್ಗುಣಿ ನದಿಯ ಬದಿಯಲ್ಲಿದೆ. ಜತೆಗೆ ಕೋಸ್ಟ್ಗಾರ್ಡ್ನ ಮೂರನೇ ಜಿಲ್ಲಾ ಪ್ರಧಾನ ಕಚೇರಿ ಕೂಡ ಪಣಂಬೂರಿನಲ್ಲಿದೆ. ಬಂದರು, ವಿಮಾನ ನಿಲ್ದಾಣವೂ ಹತ್ತಿರದಲ್ಲಿದ್ದು, ಅಕಾಡೆಮಿ ಸ್ಥಾಪನೆಗೆ ಸೂಕ್ತ ಸ್ಥಳ.
ವಿಸ್ತೃತ ತರಬೇತಿ ಅವಕಾಶ
ಇಲ್ಲಿ ಆಯ್ಕೆಯಾಗುವ ಅಭ್ಯರ್ಥಿ ಗಳಿಗೆ ನೌಕಾ ತರಬೇತಿ, ಮಾಲಿನ್ಯ ಸ್ಪಂದನೆ, ಶೋಧ ಮತ್ತು ಪತ್ತೆ, ವಿವಿಧ ರೀತಿಯ ಕಾರ್ಯಾಚರಣೆ, ಸಾಗರೋತ್ತರ ನಿಯಮಾವಳಿಗಳು, ಕಡಲ್ಗಳ್ಳರ ನಿಯಂತ್ರಣ ಇತ್ಯಾದಿ ತರಬೇತಿ ನೀಡಲಾಗುವುದು. ಇದಕ್ಕಾಗಿ ಹಲವು ರೀತಿಯ ನೌಕೆಗಳು, ವಿಮಾನಗಳು ಕೂಡ ಬರುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ತರಬೇತಿಗೆ ಅಕಾಡೆಮಿಯೊಳಗೇ 9 ವಿವಿಧ ಸ್ಕೂಲ್ಗಳು ಇರುತ್ತವೆ. ಸುಮಾರು 650ರಷ್ಟು ಪ್ರಶಿಕ್ಷಣಾರ್ಥಿಗಳನ್ನು ಇದಕ್ಕೆ ಆಯ್ಕೆ ಮಾಡಿಕೊಳ್ಳುವ ಅವಕಾಶವಿದ್ದು, ಇದರಲ್ಲಿ ವಿದೇಶಿ ವಿದ್ಯಾರ್ಥಿಗಳೂ ಇರುತ್ತಾರೆ ಎನ್ನುವುದು ವಿಶೇಷ.
ಕೇರಳಕ್ಕೆ ಹೋಗುವುದು ತಪ್ಪಿತ್ತು!
ಕೇರಳದ ಕಣ್ಣೂರು ಜಿಲ್ಲೆಯ ಆಯಿಕಲ್ ಸಮೀಪದ ಇರಿನಾವು ಸಮುದ್ರ ತೀರದ ವಳಪಟ್ಟಣಂ ನದಿಯ ಬಳಿ ಸ್ಥಾಪನೆಗೆ ಕೇರಳದಿಂದ ಲಾಬಿ ನಡೆದಿತ್ತು. ಆದರೆ ಕಳೆದ ಅವಧಿಯಲ್ಲಿ ಕೇಂದ್ರದ ರಕ್ಷಣ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ತಟರಕ್ಷಣ ಪಡೆಯ ಡೈರೆಕ್ಟರ್ ಜನರಲ್ ಜತೆ 2017ರ ಡಿಸೆಂಬರ್ ತಿಂಗಳಲ್ಲಿ ಮಂಗಳೂರಿನ ಕೆಂಜಾರಿಗೆ ಭೇಟಿ ನೀಡಿ ಅಕಾಡೆಮಿ ನಿರ್ಮಾಣಕ್ಕೆ ಗುರುತಿಸಿದ್ದ ಪ್ರದೇಶವನ್ನು ಪರೀಶೀಲಿಸಿದ್ದರು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲು ರಕ್ಷಣ ಸಚಿವರನ್ನು ಭೇಟಿಯಾಗಿದ್ದು, ಅವರೂ ಪೂರಕವಾಗಿ ಸ್ಪಂದಿಸಿ, ಶೀಘ್ರ ಅಕಾಡೆಮಿ ಸ್ಥಾಪಿಸುವ ಭರವಸೆ ನೀಡಿದ್ದರು. ಹೀಗಾಗಿ ಅಕಾಡೆಮಿಯು ಕೇರಳದ ಪಾಲಾಗದೆ
ಮಂಗಳೂರಿಗೇದಕ್ಕಿದೆ.
ಸದ್ಯ ತರಬೇತಿ ಅಕಾಡೆಮಿ ಇಲ್ಲ
1977ರಲ್ಲಿ ಭಾರತೀಯ ಜಲಪ್ರದೇಶದ ರಕ್ಷಣೆಗಾಗಿ ಸ್ಥಾಪನೆ ಗೊಂಡ ಕೋಸ್ಟ್ಗಾರ್ಡ್ಗೆ ಇದುವರೆಗೆ ಪೂರ್ಣ ಪ್ರಮಾಣದ ಸ್ವಂತ ತರಬೇತಿ ಅಕಾಡೆಮಿ ಇಲ್ಲ. ನಮ್ಮ ರಕ್ಷಣ ಪಡೆಯ ಮೂರೂ ದಳಗಳಿಗೆ ಅವುಗಳದ್ದೇ ಆದ ಇಂಡಿಯನ್ ಮಿಲಿಟರಿ ಅಕಾಡೆಮಿ, ನೇವಲ್ ಅಕಾಡೆಮಿ, ಏರ್ಫೋರ್ಸ್ ಅಕಾಡೆಮಿ ಇವೆ. ಕೋಸ್ಟ್ಗಾರ್ಡ್ ಅಭ್ಯರ್ಥಿಗಳಿಗೆ ಕೇರಳದ ಏಳಿಮಲೆ ಯಲ್ಲಿ ರುವ ನೇವಲ್ ಅಕಾಡೆಮಿಯಲ್ಲಿ 22 ವಾರಗಳ ತರಬೇತಿ ಹಾಗೂ ಬಳಿಕ 12 ವಾರಗಳ ಕಾಲ ನೌಕಾ ತರಬೇತಿ ನೀಡಲಾಗುತ್ತದೆ. ಅಲ್ಲದೆ ಕೊಚ್ಚಿಯಲ್ಲಿ ಕೋಸ್ಟ್ಗಾರ್ಡ್ ನವರ ತಾತ್ಕಾಲಿಕ ತರಬೇತಿ ಕೇಂದ್ರವಿದೆ.
ತಾತ್ವಿಕ ಅನುಮೋದನೆ ಪಡೆದುಕೊಂಡಿದ್ದು, ಸದ್ಯ ರಕ್ಷಣ ಸಚಿವಾಲಯ ಇದರ ಮೇಲು ಸ್ತುವಾರಿ ನೋಡಿಕೊಳ್ಳುತ್ತಿದೆ. ಕಾಂಪೌಂಡ್ ವಾಲ್ ನಿರ್ಮಾಣ ನಡೆಯುತ್ತಿದೆ. ಮುಂದೆ ಗುತ್ತಿಗೆದಾರ ರನ್ನು ಆಯ್ಕೆ ಮಾಡಿ, ಅಕಾಡೆಮಿ ನಿರ್ಮಾಣ ಕೆಲಸ ಆರಂಭವಾಗಲಿದೆ. ಎಲ್ಲವೂ ಸರಿಯಾದರೆ 2026ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ
ಇದೆ.
-ಮನೋಜ್ ಬಾಡ್ಕರ್,
ಕಮಾಂಡರ್, ಪಶ್ಚಿಮ ವಲಯ,
ಕೋಸ್ಟ್ಗಾರ್ಡ್
- ವೇಣು ವಿನೋದ್ ಕೆ.ಎಸ್.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.