ಸೆಂಟ್ರಲ್‌ ಮಾರ್ಕೆಟ್‌ ರಿಟೇಲ್‌ ವ್ಯಾಪಾರಸ್ಥರಿಗೆ ನೆಹರೂ ಮೈದಾನ ಬಳಿ ತಾತ್ಕಾಲಿಕ ಅವಕಾಶ

ತಾತ್ಕಾಲಿಕ ಮಾರ್ಕೆಟ್‌ ಕಟ್ಟಡ 3 ತಿಂಗಳುಗಳಲ್ಲಿ ನಿರ್ಮಾಣ

Team Udayavani, Apr 23, 2020, 5:31 AM IST

ಸೆಂಟ್ರಲ್‌ ಮಾರ್ಕೆಟ್‌ ರಿಟೇಲ್‌ ವ್ಯಾಪಾರಸ್ಥರಿಗೆ ನೆಹರೂ ಮೈದಾನ ಬಳಿ ತಾತ್ಕಾಲಿಕ ಅವಕಾಶ

ತಾತ್ಕಾಲಿಕ ಮಾರ್ಕೆಟ್‌ ನಕ್ಷೆ.

ವಿಶೇಷ ವರದಿ- ಮಂಗಳೂರು: ನಗರದ ಸೆಂಟ್ರಲ್‌ ಮಾರ್ಕೆಟ್‌ ಪ್ರದೇಶದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಹೊಸ ಕಟ್ಟಡ ನಿರ್ಮಾಣ ಆಗಲಿರುವುದರಿಂದ ಅಲ್ಲಿರುವ ರಿಟೇಲ್‌ ವ್ಯಾಪಾರಿಗಳಿಗೆ ತಾತ್ಕಾಲಿಕವಾಗಿ ವ್ಯವಹಾರ ನಡೆಸಲು ನೆಹರೂ ಮೈದಾನದ ಬಳಿ ಇರುವ 2.16 ಎಕರೆ ಜಾಗದಲ್ಲಿ 5.25 ಕೋಟಿ ರೂ. ವೆಚ್ಚದ ತಾತ್ಕಾಲಿಕ ಕಟ್ಟಡ 3 ತಿಂಗಳೊಳಗೆ ನಿರ್ಮಾಣವಾಗಲಿದೆ. ಕಾಮಗಾರಿಗೆ ಸೋಮವಾರ ಸಂಸದ ನಳಿನ್‌ ಕುಮಾರ್‌ ಕಟೀಲು ಚಾಲನೆ ನೀಡಿದ್ದಾರೆ.

ನೆಹರೂ ಮೈದಾನದ ಬಳಿ 350 ಮಳಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಮಾರ್ಕೆಟ್‌ ನಿರ್ಮಾಣ ಮಾಡಲಾಗುತ್ತದೆ. ಇದು ಶೀಟ್‌ ಛಾವಣಿ ಮತ್ತು ಶಟರ್‌ ಬಾಗಿಲು ಹೊಂದಿರಲಿದೆ. ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ಸುಮಾರು 317 ಮಂದಿ ರಿಟೇಲ್‌ ವ್ಯಾಪಾರಸ್ಥರಿದ್ದು, ಅವರೆಲ್ಲರಿಗೂ ತಾತ್ಕಾಲಿಕ ಮಾರ್ಕೆಟ್‌ನಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.

ಶಿಥಿಲಗೊಂಡ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡವನ್ನು ಕೆಡವಿ ಅಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಹೊಸ ಕಟ್ಟಡ ನಿರ್ಮಿಸಲು ಮತ್ತು ಅಲ್ಲಿದ್ದ ರಿಟೇಲ್‌ ವ್ಯಾಪಾರಸ್ಥರಿಗೆ ತಾತ್ಕಾಲಿಕ ವ್ಯವಸ್ಥೆಯನ್ನು ನೆಹರೂ ಮೈದಾನದ ಬಳಿ ಮಾಡಿಕೊಡಲು ನಿರ್ಣಯಿಸಲಾಗಿತ್ತು. ಈ ತಾತ್ಕಾಲಿಕ ಮಾರ್ಕೆಟ್‌ ನಿರ್ಮಾಣಕ್ಕೆ ಎ. 20ರಂದು ಚಾಲನೆ ನೀಡಲಾಗಿದೆ. 3 ತಿಂಗಳುಗಳ‌ಲ್ಲಿ ತಾತ್ಕಾಲಿಕ ಕಟ್ಟಡ ಮತ್ತು 4 ವರ್ಷಗಳಲ್ಲಿ ಹೊಸ ಮಾರ್ಕೆಟ್‌ ಕಟ್ಟಡ ಪೂರ್ತಿಗೊಳಿಸುವ ಉದ್ದೇಶ ಹೊಂದಲಾಗಿದೆ.

2-3 ಕಡೆ ತಾತ್ಕಾಲಿಕ ಶೆಡ್‌
ತಾತ್ಕಾಲಿಕ ಮಾರ್ಕೆಟ್‌ ಕಟ್ಟಡ ನಿರ್ಮಾಣಕ್ಕೂ 3 ತಿಂಗಳ ಕಾಲಾವಕಾಶ ಬೇಕಾಗಿರುವ ಕಾರಣ ಅಷ್ಟರ ತನಕ ತರಕಾರಿ ಮಾರುವವರಿಗೆ ನಗರದ 2- 3 ಕಡೆ ತಾತ್ಕಾಲಿಕ ಶೆಡ್‌ಗಳನ್ನು 10 ದಿನಗಳೊಳಗೆ ನಿರ್ಮಿಸಿಕೊಟ್ಟು ವ್ಯಾಪಾರಕ್ಕೆ ಅನುವು ಮಾಡಿ ಕೊಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್‌ ಉದಯವಾಣಿಗೆ ತಿಳಿಸಿದ್ದಾರೆ.

ಹಲವಾರು ವರ್ಷಗಳ ಕನಸು
ಸುಸಜ್ಜಿತ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡ ನಿರ್ಮಾಣ ಹಲವಾರು ವರ್ಷಗಳ ಕನಸು. ಈಗ ಅದು ಈಡೇರುವ ಕಾಲ ಬಂದಿದೆ. ಸಗಟು ವ್ಯಾಪಾರಸ್ಥರಿಗೆ ಬೈಕಂಪಾಡಿಯಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಿಸುವ ಮಾರ್ಕೆಟ್‌ ಕಟ್ಟಡದಲ್ಲಿ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ಹಾಲಿ ಇರುವ ಎಲ್ಲ ರಿಟೇಲ್‌ ವ್ಯಾಪಾರಸ್ಥರಿಗೂ ಅವಕಾಶ ಕಲ್ಪಿಸಲಾಗುವುದು.
– ಡಿ. ವೇದವ್ಯಾಸ ಕಾಮತ್‌, ಶಾಸಕರು

ಎಲ್ಲ ವ್ಯಾಪಾರಿಗಳಿಗೆ ಅವಕಾಶ
ತಾತ್ಕಾಲಿಕ ಕಟ್ಟಡ 3 ತಿಂಗಳಲ್ಲಿ ನಿರ್ಮಾಣವಾಗಲಿದೆ. ಸೆಂಟ್ರಲ್‌ ಮಾರ್ಕೆಟ್‌ನಲ್ಲಿದ್ದ ಎಲ್ಲ ತರಕಾರಿ, ಹಣ್ಣು ಹಂಪಲು ಮತ್ತು ಇತರ ವ್ಯಾಪಾರಿಗಳಿಗೆ ಇಲ್ಲಿ ಅವಕಾಶ ನೀಡಲಾಗುವುದು.
 - ಮೊಹಮದ್‌ ನಝೀರ್‌, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕರು

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.