ತರಗತಿ ನಡೆಯದ ಶಾಲೆಗೆ ಪುಂಡರ ಕಾಟ!

ಪ್ರೌಢಶಾಲೆ ಮಂಜೂರಿಗೆ ಮೊದಲೇ ಕಟ್ಟಡ ನಿರ್ಮಾಣ; ಶಾಲೆ ಮಂಜೂರಿಗೆ ಖುದ್ದು ಶಾಸಕರಿಂದಲೇ ಮನವಿ

Team Udayavani, Aug 4, 2021, 9:37 PM IST

High-School

ಮಸ್ಕಿ: ತಾಲೂಕಿನ ಬುದ್ದಿನ್ನಿ (ಎಸ್‌) ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಮುನ್ನವೇ ಕಟ್ಟಡ ನಿರ್ಮಿಸಲಾಗಿದೆ. ಲಕ್ಷಾಂತರ ವ್ಯಯಿಸಿ ಬಿಲ್ಡಿಂಗ್‌ ನಿರ್ಮಿಸಿದರೂ ಪ್ರೌಢಶಿಕ್ಷಣಕ್ಕೆ ಇಲ್ಲಿನ ವಿದ್ಯಾರ್ಥಿಗಳು ದೂರದ ಊರಿಗೆ ಹೋಗಬೇಕು. ಆದರೆ ಇಂತಹ ಪರಿಸ್ಥಿತಿಯಲ್ಲಿ ಈಗ ಇದ್ದ ಕಟ್ಟಡದಲ್ಲಿ ವಿದ್ಯಾರ್ಥಿಗಳ ಬದಲಾಗಿ ಪುಂಡರ ಪ್ರವೇಶ ನಡೆಯುತ್ತಿದೆ!.

ಇಲ್ಲಿನ ಪ್ರೌಢಶಾಲೆ ವಿವಾದ ರಾಜ್ಯಮಟ್ಟದಲ್ಲಿ ಸದ್ದು ಮಾಡಿದೆ. ಶಿಕ್ಷಣ ಇಲಾಖೆಗೆ ಇದು ಸವಾಲಾಗಿ ಪರಿಣಮಿಸಿದೆ. ಇಲ್ಲಿ ಮಕ್ಕಳು, ಪೋಷಕರು ಶಾಲೆ ಆರಂಭಕ್ಕೆ ಆಗ್ರಹಿಸಿ ಆಗಾಗ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಇದಕ್ಕೆ ಬೆದರಿದ ಹಾಲಿ-ಮಾಜಿ ಶಾಸಕರಿಬ್ಬರು ಪ್ರೌಢಶಾಲೆ ಆರಂಭಕ್ಕೆ ಶತಪ್ರಯತ್ನ ಮಾಡಿದ್ದಾರೆ. ಆದರೆ ಇದು ಇನ್ನು ಪರಿಹಾರವಾಗಿಲ್ಲ. ಇಷ್ಟರ ನಡುವೆ ಈಗ ನೆಟ್ಟಗಿರುವ ಶಾಲಾ ಕಟ್ಟಡಕ್ಕೆ ಪುಂಡ-ಪೋಕರಿಗಳ ಕಾಟ ಶುರುವಾಗಿದೆ.

ಏನಿದು ಪ್ರಕರಣ?: ಬುದ್ದಿನ್ನಿ (ಎಸ್‌) ಗ್ರಾಮದಲ್ಲಿ ಹಲವು ವರ್ಷಗಳಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದೆ. ಕೇವಲ ಬುದ್ದಿನ್ನಿ ಎಸ್‌. ಗ್ರಾಮದ ವಿದ್ಯಾರ್ಥಿಗಳು ಮಾತ್ರವಲ್ಲ; ಹಾರ್ವಾಪುರ, ಹೂವಿಬಾವಿ, ಕಾಟಗಲ್‌, ಮುದಬಾಳ, ಬೆಂಚಮರಡಿ ಸೇರಿ ಇತರೆ ಹಳ್ಳಿಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ. 1-8ನೇ ತರಗತಿವರೆಗೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 8ನೇ ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಮುಂದಿನ ವಿದ್ಯಾಭ್ಯಾಸಕ್ಕೆ 9-10ನೇ ತರಗತಿ ಅವಶ್ಯಕ ಹಿನ್ನೆಲೆಯಲ್ಲಿ ಇಲ್ಲಿ ಪ್ರೌಢಶಾಲೆ ಮಂಜೂರಿಗೆ ಬೇಡಿಕೆ ವ್ಯಕ್ತವಾಗಿತ್ತು. ಪ್ರೌಢಶಾಲೆಗಾಗಿ ಸ್ವತಃ ಗ್ರಾಮಸ್ಥರೇ ಜಮೀನು ಬಿಟ್ಟುಕೊಟ್ಟಿದ್ದಾರೆ.

ಸರ್ಕಾರ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕಾಗಿ ಲಕ್ಷಾಂತರ ರೂ. ಹಣ ಬಿಡುಗಡೆ ಮಾಡಿದೆ. ಈಗ ಪ್ರೌಢಶಾಲೆ ಭವ್ಯ ಕಟ್ಟಡವೂ ನಿರ್ಮಾಣವಾಗಿದೆ. ಆದರೆ ಪ್ರೌಢಶಾಲೆಯೇ ಇನ್ನೂ ಮಂಜೂರಾಗಿಲ್ಲ. ಕಳೆದ ಮೂರ್‍ನಾಲ್ಕು ವರ್ಷಗಳಿಂದಲೂ ಪ್ರೌಢಶಾಲೆ ಮಂಜೂರಿ ಮಾಡಬೇಕೆಂದು ಹೋರಾಟಗಳು ನಡೆಯುತ್ತಿವೆ. ಈ ಹಿಂದಿನ ಶಾಸಕ ಪ್ರತಾಪಗೌಡ ಪಾಟೀಲ್‌, ಹಾಲಿ ಶಾಸಕ ಆರ್‌. ಬಸನಗೌಡ ತುರುವಿಹಾಳ ಖುದ್ದಾಗಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಮನವಿ ಮಾಡಿದ್ದಾರೆ. ಆದರೆ ಈ ವರ್ಷವೂ ಈ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ.

ಈಗ ಕಿರಿಕಿರಿ: ಪ್ರೌಢಶಾಲೆ ಆರಂಭವಾಗುತ್ತಿಲ್ಲ ಎನ್ನುವ ಚಿಂತೆ ಒಂದೆಡೆಯಿದ್ದರೆ ಈಗ ಪ್ರೌಢಶಾಲೆಗೆ ನಿರ್ಮಿಸಿದ ಕಟ್ಟಡಕ್ಕೆ ಕಿರಿಕಿರಿ ಶುರುವಾಗಿದೆ. ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದ್ದು, ಶಾಲೆ ಕಿಟಕಿ, ಬಾಗಿಲು ಮುರಿಯಲಾಗುತ್ತಿದೆ. ಹಲವು ದಿನಗಳಿಂದ ಇದು ಹೀಗೆ ಪುನರಾವರ್ತನೆಯಾಗುತ್ತಿದ್ದು, ಹೀಗೆ ಇಂತಹ ಕೃತ್ಯ ನಡೆಸುತ್ತಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಾಲೆ ಶಿಕ್ಷಕರು, ಎಸ್‌ ಡಿಎಂಸಿ ಸಮಿತಿಯವರು ಠಾಣೆ ಮೆಟ್ಟಿಲೇರಿದ್ದಾರೆ. ಪೊಲೀಸರಿಗೆ ದೂರು ನೀಡಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬುದ್ದಿನ್ನಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಹಲವು ಬಾರಿ ಹೋರಾಟ ಮಾಡಲಾಗಿದೆ. ಆದರೆ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಪ್ರೌಢ ಶಾಲೆಗಾಗಿ ಈಗಾಗಲೇ ಜಮೀನು ನೀಡಿದ್ದು, ಸರ್ಕಾರ ಕಟ್ಟಡವನ್ನೂ ಕಟ್ಟಿದೆ. ಆದರೆ ಕಟ್ಟಡ ಕಟ್ಟಿದ ಬಳಿಕವೂ ಶಾಲೆ ಏಕೆ ಆರಂಭಿಸುತ್ತಿಲ್ಲ ಎನ್ನುವುದೇ ತಿಳಿಯುತ್ತಿಲ್ಲ. ಇಲ್ಲಿ ಶಾಲೆ ಆರಂಭಿಸದ್ದಕ್ಕೆ ಕಟ್ಟಡ ಹಾಳು ಮಾಡುವ ಕೆಲಸ ನಡೆದಿದೆ. ಹೀಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು.
-ನಾಗರೆಡ್ಡೆಪ್ಪ ದೇವರಮನಿ, ಎಸ್‌ಡಿಎಂಸಿ ಅಧ್ಯಕ್ಷ, ಬುದ್ದಿನ್ನಿ ಶಾಲೆ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.