Hospete: ಕಲುಷಿತ ನೀರು ಸೇವನೆ- ವಾಂತಿಬೇಧಿಗೆ 14 ಜನ ಆಸ್ಪತ್ರೆಗೆ ದಾಖಲು
Team Udayavani, Jan 6, 2024, 7:21 PM IST
ಹೊಸಪೇಟೆ: ನಗರದ ಕಾರಿಗನೂರಿನಲ್ಲಿ ಕಲುಷಿತ ನೀರು ಸೇವಿಸಿ, ವಾಂತಿಬೇಧಿ ಪ್ರಕರಣದಿಂದ ೧೪ ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ.
ಕಾರಿಗನೂರಿನ ಹುಲಗಪ್ಪ (35), ಯಂಕಮ್ಮ (70)ಕೃಷ್ಣ (23), ರುದ್ರೇಶ್ (51), ತೋಟಪ್ಪ (35), ಈರಣ್ಣ (28), ಚಾಂದನಿ (26), ನೂರಿ (13) ಸೇರಿದಂತೆ 14 ಜನ ನಗರದ ಸರ್ಕಾರಿ ಸಾರ್ವಜನಿಕ (ನೂರು ಹಾಸಿಗೆ)ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿಗನೂರಿನ ಶಿಕಾರಿ ಕ್ಯಾಂಪ್ ಸೇರಿದಂತೆ ಇತರೆಡೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಭಾಸ್ಕರ್, ಹಿರಿಯ ಆರೋಗ್ಯ ನೀರಿಕ್ಷಕ ಧರ್ಮನಗೌಡ ಸೇರಿದಂತೆ ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕುಡಿಯುವ ನೀರಿನ ಪೈಪ್ನೊಳಗೆ ಕಲುಷಿತ ನೀರು ಮಿಶ್ರಣವಾಗಿದೆ. ಕಳೆದ ಮೂರು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಪೂರೈಕೆಯಾದ ನೀರಿನಲ್ಲಿ ಕಲುಷಿತ ನೀರು ಸೇರಿದೆ ಎಂದು ನಿವಾಸಿಗಳು ಅಧಿಕಾರಿಗಳ ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ