ಸದನ ಕಲಾಪ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿ ಕ್ಯಾಮೆರಾ ನಿರ್ಬಂಧ ಮುಂದುವರಿಕೆ


Team Udayavani, Feb 14, 2020, 7:53 PM IST

Vishweshwara-Hegde-Kageri

ಬೆಂಗಳೂರು: ಕಳೆದ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಸದನ ಕಲಾಪ ನೇರ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳಿಗೆ ಪ್ರಾಯೋಗಿಕವಾಗಿ ವಿಧಿಸಿದ್ದ ನಿರ್ಬಂಧವನ್ನು ಮುಂದುವರಿಸಲು ನಿರ್ಧರಿಸಿರುವುದಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಆ ಮೂಲಕ ಇನ್ನು ಮುಂದೆ ವಿಧಾನಸಭೆಯ ಕಲಾಪ ನೇರ ಪ್ರಸಾರ ಮಾಡಲು ಖಾಸಗಿ ಸುದ್ದಿವಾಹಿನಿಗಳಿಗೆ ಅವಕಾಶವಿರುವುದಿಲ್ಲ. ಬೆಂಗಳೂರು ದೂರದರ್ಶನ ಕೇಂದ್ರ ಬಿತ್ತರಿಸುವ ನೇರ ಪ್ರಸಾರದ ವಿಡಿಯೋಗಳನ್ನೇ ಬಳಸುವುದು ಅನಿವಾರ್ಯವಾಗಲಿದೆ.

ವಿಧಾನಸೌಧದಲ್ಲಿನ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಲೋಕಸಭೆ, ರಾಜ್ಯಸಭೆಗಳ ಮಾದರಿಯಲ್ಲೇ ರಾಜ್ಯದಲ್ಲೂ ಖಾಸಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸದನ ಕಲಾಪ ನೇರ ಪ್ರಸಾರಕ್ಕೆ ಅವಕಾಶ ನೀಡದಿರಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯನ್ನೇ ದೇಶದ ಎಲ್ಲ ರಾಜ್ಯಗಳ ವಿಧಾನಸಭೆಗಳೂ ಜಾರಿಗೊಳಿಸಬೇಕು ಎಂಬ ಬಗ್ಗೆ ಹತ್ತಾರು ಬಾರಿ ನಿರಂತರವಾಗಿ ಚರ್ಚೆ ನಡೆದಿದ್ದು, ಅನೇಕ ರಾಜ್ಯಗಳು ಅದೇ ಮಾದರಿ ಅನುಸರಿಸುತ್ತಿವೆ. ಹಾಗಾಗಿ ನಮ್ಮ ರಾಜ್ಯದಲ್ಲೂ ಲೋಕಸಭೆ, ರಾಜ್ಯಸಭೆಯ ಮಾದರಿಯನ್ನೇ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಪ್ರಾಯೋಗಿಕ ಜಾರಿ ಎಂದು ಹೇಳಿ ಇದೀಗ ನಿರ್ಬಂಧ ಮುಂದುವರಿಕೆ ಸರಿಯೇ ಹಾಗೂ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳನ್ನು ಕಲಾಪ ಪ್ರಸಾರದಿಂದ ಹೊರಗಿಟ್ಟಿರುವುದರಿಂದ ಆಗಿರುವ ಅನುಕೂಲವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಲೋಕಸಭೆ, ರಾಜ್ಯಸಭೆ ಮಾದರಿಯನ್ನೇ ರಾಜ್ಯದಲ್ಲೂ ಅನುಸರಿಸುತ್ತೇವೆ. ಇಡೀ ದೇಶದಲ್ಲಿ ಚರ್ಚೆಯಾದಂತೆ ಲೋಕಸಭೆ, ರಾಜ್ಯಸಭೆ ಮಾದರಿಯನ್ನೇ ವಿಧಾನಸಭೆಯಲ್ಲಿ ಅನುಷ್ಠಾನಗೊಳಿಸಿದೆ. ನಾನು ಅದೇ ಮಾದರಿ ಅನುಸರಿಸಲು ನಿರ್ಧರಿಸಲಾಗಿದೆ. ಈ ವ್ಯವಸ್ಥೆ ಪಾರದರ್ಶಕವಾಗಿರಬೇಕು ಎಂಬ ಬಗ್ಗೆ ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ. ಚರ್ಚೆ ಮಾಡುವ ವಿಚಾರ ಪಾರದರ್ಶಕವಾಗಿದ್ದು, ಜನತೆಗೆ ಗೊತ್ತಾಗಬೇಕು. ಆ ವ್ಯವಸ್ಥೆ ಜಾರಿಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ನಮ್ಮ ಹಾಗೂ ಮಾಧ್ಯಮಗಳ ನಡುವೆ ಒಂದು ವಿಚಾರದ ಬಗ್ಗೆ ಭಿನ್ನಾಭಿಪ್ರಾಯ ಮೂಡುತ್ತದೆ. ಮಾಧ್ಯಮಗಳು ತಮಗೆ ಬೇಕಾದ ಉತ್ತರ ಬಯಸುತ್ತವೆ. ನಾವು ನಮ್ಮ ನಿಲುವಿಗೆ ಬದ್ಧರಾಗಿರುತ್ತೇವೆ. ಪರಸ್ಪರ ವಿಶ್ವಾಸದಲ್ಲಿದ್ದು, ವ್ಯವಸ್ಥೆಗೆ ಶಕ್ತಿ ತುಂಬೋಣ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಸಿಕೊಳ್ಳುವ ಪತ್ರಿಕಾರಂಗದ ಬಗ್ಗೆ ನೂರಕ್ಕೆ ನೂರು ವಿಶ್ವಾಸದಲ್ಲಿರುತ್ತೇವೆ. ತಾವು ಹೇಳುತ್ತಿರುವುದು ನನಗೆ ಅರ್ಥವಾಗಿದ್ದು, ನಾನು ಹೇಳುತ್ತಿರುವುದು ತಮಗೆ ಅರ್ಥವಾಗಿದೆ ಎಂದು ತಿಳಿದಿದ್ದೇನೆ ಎನ್ನುವ ಮೂಲಕ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ವಿಧಾನಸಭೆಯ ಕಲಾಪ ನೇರ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳಿಗೆ ಕಳೆದ ಚಳಿಗಾಲದ ಅಧಿವೇಶನದಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಆಗ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಾಯೋಗಿಕವಾಗಿ ನಿರ್ಬಂಧ ವಿಧಿಸಲಾಗಿದ್ದು, ನಂತರ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ನಿರ್ಬಂಧ ತಾತ್ಕಾಲಿಕವಾಗಿದ್ದು, ಈ ಸಂಬಂಧ ಸ್ಪೀಕರ್‌ರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದರು. ಇದೀಗ ಪ್ರಾಯೋಗಿಕ ವ್ಯವಸ್ಥೆಯನ್ನೇ ಕಾಯಂಗೊಳಿಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಎಚ್‌.ಡಿ.ರೇವಣ್ಣ ಖಂಡನೆ
ವಿಧಾನಸಭೆಯ ಕಲಾಪವನ್ನು ಖಾಸಗಿ ಸುದ್ದಿವಾಹಿನಿಗಳು ನೇರ ಪ್ರಸಾರ ಮಾಡುವ ಮೂಲಕ ಜನರಿಗೆ ಮಾಹಿತಿ ನೀಡುತ್ತಿದ್ದು, ಇದು ಹಿಂದಿನಿಂದ ನಡೆದುಬಂದಿದೆ. ಆದರೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಿರುವುದು ಸರಿಯಲ್ಲ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು. ಈ ಬಗ್ಗೆ ಕಲಾಪ ಸಲಹಾ ಸಮತಿಯಲ್ಲಿ ಪ್ರಸ್ತಾಪಿಸಲಾಗುವುದು.
– ಎಚ್‌.ಡಿ.ರೇವಣ್ಣ,ಮಾಜಿ ಸಚಿವ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.