Rain ಕರಾವಳಿಯಾದ್ಯಂತ ಮುಂದುವರಿದ ಮಳೆ


Team Udayavani, May 22, 2024, 11:29 PM IST

ಕರಾವಳಿಯಾದ್ಯಂತ ಮುಂದುವರಿದ ಮಳೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಹಲವು ಕಡೆ ಬುಧವಾರ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗಿದೆ.

ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ಬಳಿಕ ಮಳೆ ಆರಂಭಗೊಂಡಿತ್ತು. ಮಂಗಳೂರಿನಲ್ಲಿ ಬೆಳಗ್ಗೆ ಮಳೆ ಬಿಡುವು ನೀಡಿದ ಕಾರಣ ಸೆಕೆಯ ವಾತಾವರಣ ಇತ್ತು. ನಗರದಲ್ಲಿ 33 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ.ಕಡಿಮೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಅಧಿಕ ಉಷ್ಣಾಂಶ ದಾಖಲಾಗಿತ್ತು.

ಉಡುಪಿ: ಮಳೆಯ ನಡುವೆಯೂ ಸೆಕೆ!
ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಮೋಡ-ಬಿಸಿಲಿನ ವಾತಾವರಣದ ನಡುವೆ ಬೆಳಗ್ಗೆ ಸಂಜೆ ವೇಳೆ ಉತ್ತಮ ಮಳೆಯಾಗಿದೆ. ಕುಂದಾಪುರ, ಕಾರ್ಕಳ, ಬೈಂದೂರು, ಉಡುಪಿ, ಕಾಪು ಭಾಗದಲ್ಲಿ ಕೆಲಕಾಲ ನಿರಂತರ ಮಳೆಯಾಗಿದ್ದು, ಹೆಬ್ರಿ, ಕಾರ್ಕಳ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣವಿದ್ದರೂ ಇನ್ನಷ್ಟು ಉರಿ ಸೆಖೆ ಅನುಭವ ಜನರನ್ನು ಕಾಡುತ್ತಿದೆ.

ಮಳೆಗೆ ಕುಸಿದ ಮನೆ
ಪುತ್ತೂರು: ಭಾರೀ ಮಳೆಗೆ ಕೆಯ್ಯೂರು ಗ್ರಾಮದ ದೇರ್ಲದಲ್ಲಿ ಅಣ್ಣು ಅವರ ವಾಸದ ಮನೆಯ ಛಾವಣಿ ಮುರಿದು ಬಿದ್ದಿದೆ. ಮನೆ ಮಂದಿಗೆ ಅಪಾಯ ಉಂಟಾಗಿಲ್ಲ. ಅವರು ಸ್ಥಳೀಯ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಸ್ಥಳಕ್ಕೆ ಕೆಯ್ಯೂರು ಪಿಡಿಒ ನಮಿತಾ ಎ.ಕೆ., ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಅಧ್ಯಕ್ಷ ಶರತ್‌ ಕುಮಾರ್‌ ಮಾಡಾವು, ಸದಸ್ಯರಾದ ಬಟ್ಯಪ್ಪ ರೈ ದೇರ್ಲ, ಶೇಷಪ್ಪ ದೇರ್ಲ, ಗ್ರಾಮ ಆಡಳಿತ ಅಧಿಕಾರಿ ಸ್ವಾತಿ, ಸಹಾಯಕ ನಾರಾಯಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4 ದಿನ “ಎಲ್ಲೋ ಅಲರ್ಟ್‌’
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮೇ 23 ರಿಂದ 26ರವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ
ಸಾಧ್ಯತೆ ಇದೆ.

ಸಿದ್ದಾಪುರ: ವಾರದ ಸಂತೆಗೆ ಮಳೆ ಅಡ್ಡಿ
ಕುಂದಾಪುರ: ಬುಧವಾರ ಮಧ್ಯಾಹ್ನದ ಅನಂತರ ಕುಂದಾಪುರ, ಬೈಂದೂರು ತಾಲೂಕಿನ ಕುಂದಾಪುರ, ಸಿದ್ದಾಪುರ, ಹಾಲಾಡಿ, ಕೋಟೇಶ್ವರ, ಬಸ್ರೂರು, ತೆಕ್ಕಟ್ಟೆ, ಬಿದ್ಕಲ್‌ಕಟ್ಟೆ, ಕೊಲ್ಲೂರು, ಜಡ್ಕಲ್‌, ಉಪ್ಪುಂದ, ಬೈಂದೂರು ಸಹಿತ ವಿವಿಧೆಡೆಗಳಲ್ಲಿ ಮಳೆ ಸುರಿಯಿತು. ಸಿದ್ದಾಪುರದಲ್ಲಿ ವಾರದ ಸಂತೆ ಆವರಣಕ್ಕೆ ಮಳೆ ನೀರು ನುಗ್ಗಿ ಹೊಳೆಯಂತಾಗಿತ್ತು. ವರ್ತಕರು ತೊಂದರೆ ಅನುಭವಿಸಿದರು. ತರಕಾರಿ, ಒಣ ಮೀನು ಮಳೆ ನೀರಿಗೆ ಕೊಚ್ಚಿಕೊಂಡು ಹೋದ ಪ್ರಸಂಗವೂ ನಡೆಯಿತು.

ಇನ್ನು ಮಳೆ ನೀರು ರಸ್ತೆಯಲ್ಲಿಯೇ ಹರಿದ ಪರಿಣಾಮ ಸಿದ್ದಾಪುರ ಪೇಟೆಯ ಮುಖ್ಯ ರಸ್ತೆಯೂ ಸಹ ತೋಡಿನಂತಾಗಿತ್ತು. ಇನ್ನೂ ಚರಂಡಿಯ ಹೂಳೆತ್ತದ ಪರಿಣಾಮ ಮಳೆ ನೀರು ಪೂರ್ತಿ ರಸ್ತೆಯಲ್ಲಿಯೇ ಹರಿದು ಹೋಗುತ್ತಿದ್ದು, ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸಿದರು.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

university

Mangalore University: ಪ್ರಕಾಶ್ ಶೆಟ್ಟಿ, ರೊನಾಲ್ಡ್ ಕೊಲಾಸೋರಿಗೆ ಗೌರವ ಡಾಕ್ಟರೆಟ್ ಪ್ರದಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.