ಡಿಕೆಶಿಗೆ ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ


Team Udayavani, Sep 18, 2019, 3:08 AM IST

dkshie-sure]

ಬೆಂಗಳೂರು: ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಬಿ.ಪಿ., ಶುಗರ್‌ ಹಾಗೂ ಎದೆ ನೋವಿನಿಂದ ಬಳಲುತ್ತಿರುವ ಶಿವಕುಮಾರ್‌ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಣ್ಣನಿಗೆ ಜಾಮೀನು ಸಿಗುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್‌ ವಿರುದ್ಧ ಇ.ಡಿ ಅಧಿಕಾರಿಗಳು ಆಧಾರ ರಹಿತ ಆರೋಪ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಬುಧವಾರ ಜಾಮೀನು ಸಿಗುವ ಭರವಸೆ ಇದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ವಿಶೇಷ ಕೋರ್ಟ್‌ನಲ್ಲಿ ತಮ್ಮ ಸಹೋದರ ಡಿ.ಕೆ.ಶಿವಕುಮಾರ್‌ ಅವರ ವಿಚಾರಣೆ ಮುಂದೂಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಯಾರದೋ ಆಸ್ತಿಯನ್ನು ಯಾರದೋ ಮನೆಯಲ್ಲಿ ದಾಳಿ ಮಾಡಿ, ಅದು ಡಿ.ಕೆ.ಶಿವಕುಮಾರ್‌ ಆಸ್ತಿ ಎಂದು ತೋರಿಸುತ್ತಿದ್ದಾರೆ. ಆದಾಯದ ಮೂಲ ಇಲ್ಲದೇ ಯಾರೂ ವ್ಯಾಪಾರ ಮಾಡುವುದಿಲ್ಲ. ಎಲ್ಲ ವ್ಯವಹಾರಗಳಿಗೂ ನಾವು ದಾಖಲೆಗಳನ್ನು ಸಲ್ಲಿಸಿದ್ದೇವೆ. 30 ವರ್ಷದ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಯಾವುದೇ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿಲ್ಲ. ಎಲ್ಲದಕ್ಕೂ ದಾಖಲೆ ಇದೆ. ಹೀಗಾಗಿ, ಜಾಮೀನು ಸಿಗುವ ವಿಶ್ವಾಸ ಇದೆ. ಆದರೆ, ಇ.ಡಿಯವರಿಗೆ ಒತ್ತಡ ಇರಬಹುದು ಎಂದು ಹೇಳಿದರು.

ಡಿ.ಕೆ.ಶಿವಕುಮಾರ್‌ ಪುತ್ರಿ ಐಶ್ವರ್ಯ ಎಂಜಿನಿಯರ್‌ ಪದವೀಧರೆಯಾಗಿದ್ದಾಳೆ. ಅವಳು ಬಿಜಿನೆಸ್‌ ಮಾಡಬೇಕೆಂದು ಆಸೆ ಪಟ್ಟಿದ್ದಳು. ನಾನು ಅವಳಿಗೆ 7 ಕೋಟಿ ರೂ.ಸಾಲ ಕೊಟ್ಟಿದ್ದೇನೆ. ಬೇರೆಯವರು ಸಾಲ ಕೊಟ್ಟಿದ್ದಾರೆ. ಬ್ಯಾಂಕ್‌ನವರು 40 ಕೋಟಿ ಸಾಲ ಕೊಟ್ಟಿದ್ದಾರೆ. ಅಪ್ಪನಾಗಿ ಡಿ.ಕೆ.ಶಿವಕುಮಾರ್‌ ಬೆಂಬಲ ಕೊಟ್ಟಿದ್ದಾರೆ. ಅವಳು ಒಂದೇ ಒಂದು ರೂಪಾಯಿ ಅವ್ಯವಹಾರ ನಡೆಸಿಲ್ಲ.

ನಮ್ಮ ಕುಟುಂಬದ ಎಲ್ಲ ಆಸ್ತಿಯ ದಾಖಲೆಗಳನ್ನು ಕೋರ್ಟ್‌ ಮುಂದೆ ಇಟ್ಟಿದ್ದೇವೆ. ನಮ್ಮ ಬ್ಯಾಂಕ್‌ ಅಕೌಂಟ್‌ಗಳು ಎಷ್ಟಿವೆ ಎಂದು ಕೋರ್ಟ್‌ ಮುಂದೆ ಹೇಳಿದ್ದೇವೆ. ಇ.ಡಿ ಅಧಿಕಾರಿಗಳು ಹೇಳಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗುವು ದಿಲ್ಲ. ಡಿ.ಕೆ.ಶಿವಕುಮಾರ್‌ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

ಕುರ್ಚಿಯಲ್ಲಿ ಕೂಡಲು ಅವಕಾಶ ನೀಡಿದ ಜಡ್ಜ್: ಡಿ.ಕೆ.ಶಿವಕುಮಾರ್‌ ಅವರು ಆರೋಗ್ಯದ ಸಮಸ್ಯೆ ಎದುರಿಸುತ್ತಿರುವುದರಿಂದ ವಿಚಾರಣೆ ಸಂದರ್ಭದಲ್ಲಿ ನಿಂತುಕೊಳ್ಳಲು ಆಗುತ್ತಿಲ್ಲ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಅಲ್ಲಿಯೇ ಕುರ್ಚಿಯಲ್ಲಿ ಕುಳಿತುಕೊಳ್ಳಲು ನ್ಯಾಯಾಧೀಶರು ಅವಕಾಶ ನೀಡಿದರು.

ದೆಹಲಿಗೆ ತೆರಳಿದ ಅಭಿಮಾನಿಗಳು: ವಿಚಾರಣೆ ಸಂದರ್ಭದಲ್ಲಿ ದೆಹಲಿಗೆ ಬರಬೇಡಿ ಎಂದು ಸಂಸದ ಡಿ.ಕೆ.ಸುರೇಶ್‌ ಮನವಿ ಮಾಡಿಕೊಂಡಿದ್ದರೂ, ಡಿ.ಕೆ.ಶಿವಕುಮಾರ್‌ ಅಭಿಮಾನಿಗಳು ದೆಹಲಿಗೆ ತೆರಳಿದ್ದರು. ವಿಚಾರಣೆ ಸಂದರ್ಭದಲ್ಲಿ ಯಾರೂ ಕೋರ್ಟ್‌ ಹಾಲ್‌ಗೆ ಬರದಂತೆ ಡಿ.ಕೆ.ಸುರೇಶ್‌ ಸೂಚನೆ ನೀಡಿದ್ದರು. ಹೀಗಾಗಿ, ಅಭಿಮಾನಿಗಳು ಕೋರ್ಟ್‌ ಮುಂದೆಯೇ ವಿಚಾರಣೆ ಮುಗಿಯುವವರೆಗೂ ಕಾಯ್ದು ನಿಂತಿದ್ದರು.

ಅಲ್ಲದೆ, ಯಾವುದೇ ರೀತಿಯ ಗಲಾಟೆ ಮಾಡುವುದಿಲ್ಲ ಎಂದು ಭರವಸೆ ನೀಡಿ, ಶಾಂತ ರೀತಿಯಿಂದ ಕಾಯ್ದರು. ಡಿ.ಕೆ.ಶಿವಕುಮಾರ್‌ ಅವರನ್ನು ವಿಚಾರಣೆಗೆ ಕೋರ್ಟ್‌ ಹಾಲ್‌ಗೆ ಕರೆದುಕೊಂಡು ಹೋಗುವಾಗ, “ಆಲ್‌ ದಿ ಬೆಸ್ಟ್‌ ಅಣ್ಣಾ, ಧೈರ್ಯವಾಗಿರಿ’ ಎಂದು ಅಭಿಮಾನಿ ವಿಶ್‌ ಮಾಡಿದ.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.