ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಲಬುರಗಿ ಜಿಲ್ಲೆಯ ಗುತ್ತಿಗೆದಾರರಿಂದ 25 ಲಕ್ಷ ರೂ.ದೇಣಿಗೆ
Team Udayavani, May 5, 2020, 10:48 PM IST
ಕಲಬುರಗಿ: ಮಹಾಮಾರಿ ಕೋವಿಡ್ ಸಾಂಕ್ರಾಮಿಕ ಸೋಂಕಿನ ನಿಯಂತ್ರಣಕ್ಕೆ ಹೊರಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಕಲಬುರಗಿ ಜಿಲ್ಲಾ ಗುತ್ತಿಗೆದಾರರ ಸಂಘವು 25 ಲಕ್ಷ ರೂ. ಗಳ ದೇಣಿಗೆ ಮೊತ್ತದ ಚೆಕ್ಕನ್ನು ಮಂಗಳವಾರ ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ನೀಡಿದರು.
ಡಿ.ಸಿ. ಅವರಿಗೆ ಚೆಕ್ ನೀಡಿದ ನಂತರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಮಾತನಾಡಿ ಸಂಘದ ಸದಸ್ಯರಿಂದ ಹಣ ಸಂಗ್ರಹಣೆ ಮಾಡಲಾಗಿದ್ದು, ಕೋವಿಡ್ ವಿರುದ್ಧ ಹೋರಾಟಕ್ಕೆ ಗುತ್ತಿಗೆದಾರರ ಅಲ್ಪ ಸೇವೆ ಇದಾಗಿದೆ ಎಂದರು. ಈ ಚೆಕ್ ಅನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿ ಹೆಸರಿನಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಅಮೀನ್ ಮುಖ್ತಾರ ಅಹ್ಮದ್, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ನೀಲಕಂಠರಾವ ಎಸ್.ಮೂಲಗೆ, ಮೋಹಸಿನ್ ಎನ್.ಪಟೇಲ್, ಪ್ರಧಾನ ಕಾರ್ಯದರ್ಶಿ ಮತ್ತು ಖಜಾಂಚಿ ಸಂಜಯ ಅರ್.ಕೆ., ರಾಜ್ಯ ಎಸ್.ಸಿ.ಎ. ಸದಸ್ಯ ಎಂ.ಕೆ.ಪಾಟೀಲ, ಸದಸ್ಯರಾದ ಎಸ್.ವೈ.ಪಾಟೀಲ, ರಿಯಾಜ್ ಪಟೇಲ್, ಬಸವರಾಜ ಸಜ್ಜನ್, ಅಣ್ಣಾರಾವ ಸನ್ಮನಿ, ಮನ್ಸೂರ್ ಎ. ಪಟೇಲ್, ಗುರುನಂಜಯ್ಯ ಅರ್.ವಿ., ರವಿಶಂಕರ ಹಂದ್ರಾಳ, ಸಿರಾಜ್ ಪಟೇಲ್ ಸೇರಿದಂತೆ ಇನ್ನಿತರ ಸದಸ್ಯರು ಮತ್ತು ಗುತ್ತಿಗೆದಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ