ಗುಹೆಯಲ್ಲಿ ತಾಮ್ರ, ಹಿತ್ತಾಳೆ ಪೂಜಾ ಸಾಮಗ್ರಿ ಪತ್ತೆ


Team Udayavani, Aug 9, 2021, 2:09 PM IST

ಗುಹೆಯಲ್ಲಿ ತಾಮ್ರ, ಹಿತ್ತಾಳೆ ಪೂಜಾ ಸಾಮಗ್ರಿ ಪತ್ತೆ

ಕುದೂರು: ಕಣ್ಣೂರು ಮಕ್ಕಳ ದೇವರ ಮಠದ ಅವರಣದ ಅಡಿಕೆ ತೋಟದ ಜಮೀನಿನಲ್ಲಿ ಸುಮಾರು ಹತ್ತು ಅಡಿ ಭೂಮಿಯ ಕೆಳಗೆ ಕಲ್ಲಿನಿಂದ ನಿರ್ಮಿಸಿರುವ ಗುಹೆಯಲ್ಲಿ ಪುರಾತನ ತಾಮ್ರದ ಮತ್ತು ಹಿತ್ತಾಳೆ ಪೂಜಾ ಸಾಮಗ್ರಿಗಳು ಪತ್ತೆಯಾಗಿವೆ.

ಕಣ್ಣೂರು ಮಕ್ಕಳ ದೇವರ ಮಠದ ಜಮೀನಲ್ಲಿ ಅಡಿಕೆ ಸಸಿಗಳಿಗೆ ಹನಿ ನೀರಾವರಿ ಅಳವಡಿಸಲು ಜೆಸಿಬಿ ಮೂಲಕ ಗುಂಡಿ ತೆಗೆಯುವ
ಸಂದರ್ಭದಲ್ಲಿ ಜೆಸಿಬಿ ಯಂತ್ರಕ್ಕೆ ಕಲ್ಲಿನ ಚಪ್ಪಡಿ ಸ್ಕಿಕಿಹಾಕಿಕೊಂಡಿದೆ. ಅದನ್ನು ತೆಗೆದಾಗ ಅದರ ಕೆಳಗೆ ಹತ್ತು ಅಡಿ ಅಳದವರೆಗೆ ಗುಹೆಯಂತೆ ಅಚ್ಚುಕಟ್ಟಾದ ಸ್ಥಳದಲ್ಲಿ ತಾಮ್ರದ ತಟ್ಟೆಗಳು, ದೀಪಗಳು, ಉಯ್ಯಾಲೆ, ಚೈನ್‌, ವಿಭೂತಿ ಗಟ್ಟಿ, ಘಂಟೆ, ಮಂಗಳಾರತಿ ಉದಾಂಡ, ಕಮಂಡಲ, ಸರಪಳಿಗಳು, ನಾಗಭರಣ, ಜವಳಿಕುಣಿತಕ್ಕೆ ಬೇಕಾಗಿರುವ ಸಾಮಗ್ರಿಗಳು ಸಿಕ್ಕಿವೆ. ಒಟ್ಟು 100 ಕೆ.ಜಿ ತೂಕದ ಹಿತ್ತಾಳೆ, ಕಂಚು ಮುಟ್ಟಿನ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಮಠಾಧ್ಯಕ್ಷ ಡಾ.ಶ್ರೀಮೃತ್ಯಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಭಕ್ತರಲ್ಲಿ ಕೂತೂಹಲ: ಶ್ರೀಮಠದ ಸ್ವಾಮೀಜಿಯೊಬ್ಬರು ಲೋಕ ಕಲ್ಯಾಣಕ್ಕಾಗಿ ತೆಪಗೈದು, ಜೀವಂತ ಸಮಾಧಿ ಹೊಂದಿರಬಹುದು ಎಂಬ ಮಾಹಿತಿ ಇದ್ದು, ಗುಹೆಯೊಳಗೆ ಆಗ ತಾನೆ ಹಾರಿಹೋದ ವಾಸನೆ ಬರುತ್ತಿದ್ದು, ದೀಪದ ಬತ್ತಿಯಲ್ಲಿ ಬೆಂಕಿ ಕಿಡಿಗಳನ್ನು ಕಂಡಿದ್ದಾರೆ. ಭೂಮಿಯಲ್ಲಿ ಸಿಕ್ಕ ಎರಡು ಪಾತ್ರೆಗಳ ತುಂಬಾ ನೀರು ತುಂಬಿತ್ತು. ಅದರಲ್ಲಿ ವಿಭೂತಿಗಟ್ಟಿಯಿದೆ. ವಿಭೂತಿಗಟ್ಟಿ ನೀರಿನಲ್ಲಿ ಕರಗದೆ ಹಾಗೆಯೇ ಉಳಿದಿರುವುದು ಅಚ್ಚರಿ ಮೂಡಿಸಿದೆ. ಈ ವಿಸ್ಮಯ ಭಕ್ತರಲ್ಲಿ ಕೂತೂಹಲ ಉಂಟಾಗಿ ತಂಡೋಪ ತಂಡವಾಗಿ ಗ್ರಾಮಸ್ಥರು ಜಮಾಯಿಸುತ್ತಿದ್ದಾರೆ.

ಇದನ್ನೂ ಓದಿ:ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಯಾರಪ್ಪನ ಅಪ್ಪಣೆಯೂ ಬೇಕಾಗಿಲ್ಲ: ಕಾರಜೋಳ

ಪಾತ್ರೆಗಳ ಮೇಲೆ ಕನ್ನಡ ಬರಹ: ಈ ಪಾತ್ರೆಯ ಮೇಲೆ ದಳವಾಯಿ ನಂಜರಾಜಯ್ಯ ಎಂಬ ಕನ್ನಡ ಬರಹವಿದೆ. ಇದೇ ದಳವಾಯಿ
ನಂಜರಾಜಯ್ಯ ಮಠಕ್ಕೆ ಹೋನ್ನಾಪುರ ಗ್ರಾಮವನ್ನು ಬಳುವಳಿಯಾಗಿ ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಹೋನ್ನಾಪುರ ಗ್ರಾಮದ
ಮುಂಭಾಗದಲ್ಲಿರುವ ಕ್ರಿ.ಶ. 1730ರ ಶಿಲಾ ಶಾಸನದಲ್ಲಿ ಮೈಸೂರಿನ ದಳವಾಯಿ ನಂಜರಾಜಯ್ಯ ಶ್ರೀಮಠಕ್ಕೆ ದಾನ ಮಾಡಿ, ಮಠದ
ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದಾರೆ ಎಂಬ ಉಲ್ಲೇಖವಿದೆ. ಅದಕ್ಕೆ ಸಂಬಂಧಿಸಿದಂತೆ ತಾಮ್ರ ಪತ್ರ ಚಿತ್ರದುರ್ಗದ ಮುರುಘ ಮಠದಲ್ಲಿ ಇಂದಿಗೂ ಶಾಸನದ ಪ್ರತಿ ಇದೆ ಎಂದು ತಿಳಿದುಬಂದಿದೆ.

ಕಣ್ಣೂರಿನ ಜಂಗಮ ಮಠದಲ್ಲಿ ಇಂದಿಗೂ ಆರು ಗದ್ದುಗೆಗಳಿವೆ.ಮಕ್ಕಳದೇವರಮಠ,ಬಸವಮಠಇತರೆಹೆಸರುಗಳಿಂದ ಕರೆಯಲಾಗುತ್ತಿದೆ. ಅಂದು ದಳವಾಯಿ ನಂಜರಾಜಯ್ಯ ಶ್ರೀಮಠಕ್ಕೆ ದಾನ ನೀಡಿದ ಜಮೀನಿನ ಸುತ್ತಲೂ ಅಂದಿನ ಜಂಗಮರು ಹಾಕಿಸಿದ್ದ ಲಿಂಗ ಮುದ್ರೆ ಕಲ್ಲುಗಳು ಇಂದಿಗೂ ಇವೆ. ಮಠದ ಇತಿಹಾಸಕ್ಕೆ ಮಹತ್ವದ ಸಾಕ್ಷಿ: ಇಂದಿಗೂ ಕಣ್ಣೂರಿನ ಮಕ್ಕಳ ದೇವರ ಮಠದ ಹೊಲದಲ್ಲಿ ಶರಣರು ತಪಗೈದಿದ್ದ ಗುಹೆ, ಯೋಗ
ಮಂಟಪ,ಲಿಂಗ ಮುದ್ರೆಕಲ್ಲುಗಳು ಮಠದ ಐತಿಹಾಸಿಕ ಸ್ಮಾರಕವಾಗಿವೆ. ಪುರಾತನ ಮಠಕ್ಕೆ ಹೊಸರೂಪ ನೀಡಲು ಸಿದ್ಧತೆ ನಡೆಸಿದ್ದೇವೆ. ಇದೇ
ಸಮಯದಲ್ಲಿ ಗುಹೆ ಮತ್ತು ಪೂಜಾ ಸಾಮಗ್ರಿಗಳು ಪತ್ತೆಯಾಗಿರುವುದು ನಮ್ಮ ಮಠದ ಇತಿಹಾಸಕ್ಕೆ ಮಹತ್ವದ ಸಾಕ್ಷಿಯಾಗಿವೆ. ಪತ್ತೆಯಾಗಿರುವ ಸಾಮಗ್ರಿಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇತಿಹಾಸ ಸಂಶೋಧಕರನ್ನು ಕರೆಯಿಸಿ ಹೆಚ್ಚಿನ ಸಂಶೊಧನೆ ಮಾಡಿಸಲಾಗುವುದು, ಪತ್ತೆಯಾಗಿರುವ ಕಂಚು, ಹಿತ್ತಾಳೆ ಸಾಮಗ್ರಿಗಳನ್ನು ಸಂರಕ್ಷಿಸಲಾಗುವುದು ಎಂದು ಶ್ರೀಮಠದ ಮೃತ್ಯಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.