ಮುದಗಲ್ಲ ಕಲ್ಲುಗಣಿಗೂ ಕೊರೊನಾ ಕರಿನೆರಳು!


Team Udayavani, Feb 29, 2020, 3:08 AM IST

mudalla

ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ ಇತರ ದೇಶಗಳಿಗೆ ಗ್ರಾನೈಟ್‌ ಕಲ್ಲಿನ ರಫ್ತಿನಲ್ಲಿ ಕುಸಿತ ಕಂಡಿದ್ದು, ಕೆಲ ಕಲ್ಲು ಗಣಿಗಾರಿಕೆಗಳು ಸ್ಥಗಿತಗೊಂಡಿವೆ.

ಮುದಗಲ್ಲ ಭಾಗದಲ್ಲಿ ದೊರೆಯುವ ಶ್ವೇತ ಶಿಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯಿದೆ. ಮುದಗಲ್ಲ ಪಟ್ಟಣದಿಂದ ಕೇವಲ 2 ಕಿ.ಮೀ.ಅಂತರದಲ್ಲಿ ಸುಮಾರು 15ಕ್ಕೂ ಹೆಚ್ಚು ಗ್ರಾನೈಟ್‌ ಕ್ವಾರಿಗಳಿವೆ. ಸರ್ಕಾರಿ ಸ್ವಾಮ್ಯದ ಎಂಎಂಎಲ್‌ ಸೇರಿ ರಾಜ್ಯದ ವಿವಿಧ ಭಾಗದ ಶಾಸಕರ ಮಾಲೀಕತ್ವದಲ್ಲಿನ ಕಲ್ಲು ಗಣಿಗಾರಿಕೆಗಳು ಇಲ್ಲಿವೆ. ಅಮರ, ಗೋಲ್ಡನ್‌, ನೋಬಲ್‌, ಅಲ್ಲಮಪ್ರಭು, ಕಟ್ಟಿಮಾ ಗ್ರಾನೈಟ್‌ ಕಂಪನಿಗಳು ಶ್ವೇತ ಮತ್ತು ಬೂದು (ಗ್ರೇ) ಗ್ರಾನೈಟ್‌ ಶಿಲೆ ಹೊರತೆಗೆದು ಹೊರ ರಾಷ್ಟ್ರಗಳಿಗೆ ರಫ್ತು ಮಾಡಿ, ಕೋಟ್ಯಂತರ ರೂ.ಆದಾಯ ಗಳಿಸುತ್ತಿವೆ.

ಯಾವುದಕ್ಕೆ ಬೇಡಿಕೆ?: ಮುದಗಲ್ಲ ಭಾಗದಲ್ಲಿ ದೊರೆಯುವ ಎಂಡಿ-5 (ಮುದಗಲ್‌ ಗ್ರೇ), ಬೆಕ್ಕಿನ ಕಣ್ಣು (ಕ್ಯಾಟ್‌ ಸೆ) ಮತ್ತು ಹಿಮಾಲಯ ಮೂನ್‌ ಎಂಬ ಹೆಸರಿನ ಗ್ರಾನೈಟ್‌ಗೆ ವಿದೇಶಗಳಲ್ಲಿ ಭಾರೀ ಬೇಡಿಕೆಯಿದೆ. ಪ್ರತಿ ತಿಂಗಳು ತೈವಾನ್‌, ಚೀನಾ, ಜಪಾನ್‌ನಿಂದ ಖರೀದಿದಾರರು ಇಲ್ಲಿಗೆ ಆಗಮಿಸಿ ಸಾವಿರಾರು ಘನ ಮೀಟರ್‌ನಷ್ಟು ಗ್ರಾನೈಟ್‌ ಖರೀದಿಸುತ್ತಾರೆ. ಆದರೆ, ಚೀನಾದಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿರುವ ಕೊರೊನಾ ವೈರಸ್‌ನಿಂದಾಗಿ ವಿದೇಶಿ ಖರೀದಿದಾರರು ಬಾರದೆ, ಕೋಟ್ಯಂತರ ರೂ. ಮೌಲ್ಯದ ಶಿಲೆಗಳು ಹಾಗೆಯೇ ಉಳಿದುಕೊಂಡಿವೆ. ಹೀಗಾಗಿ, ಕ್ವಾರಿ ಮಾಲಿಕರು ಕಾರ್ಮಿಕರಿಗೆ ರಜೆ ನೀಡಿ, ಕ್ವಾರಿ ಬಂದ್‌ ಮಾಡಿದ್ದಾರೆ.

ದುಸ್ಥಿತಿ?: ಕಳೆದ 6-7 ವರ್ಷಗಳ ಹಿಂದೆ ಮುದಗಲ್ಲ ಭಾಗದ ಗ್ರಾನೈಟ್‌ ಒಂದು ಘನ ಮೀಟರ್‌ಗೆ 1,000ದಿಂದ 1,100 ಡಾಲರ್‌ಗೆ ಮಾರಾಟವಾಗುತ್ತಿತ್ತು. ನಂತರ, ಮಾರುಕಟ್ಟೆಯಲ್ಲಿನ ಸ್ಪರ್ಧೆಯಿಂದಾಗಿ 800 ಡಾಲರ್‌ಗೆ ಕುಸಿತ ಕಂಡಿತ್ತು. ಆದರೆ, ಇತ್ತೀಚೆಗೆ ಗ್ರಾನೈಟ್‌ ವಿದೇಶಕ್ಕೆ ರಫ್ತಾಗುತ್ತಿಲ್ಲ. ಹೀಗಾಗಿ, ಸಾವಿರ ರೂ.ಗೂ ಮಾರಾಟವಾಗದೆ ನಷ್ಟ ಅನುಭವಿಸುವಂ ತಾ ಗಿದೆ ಎಂಬುದು ಗ್ರಾನೈಟ್‌ ಮಾಲಿಕರ ಅಳಲು. ಇನ್ನೊಂದೆಡೆ, ಗ್ರಾನೈಟ್‌ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೇರೆಡೆ ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಒಟ್ಟಾರೆ ಚೀನಾದ ಕೊರೊನಾ ವೈರಸ್‌ನ ಕರಿನೆರಳು ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಬಿದ್ದಿದೆ.

ಒಂದು ಕಾಲದಲ್ಲಿ ಮುದಗಲ್ಲ ಗ್ರಾನೈಟ್‌ಗೆ ವಿದೇಶಗಳಲ್ಲಿ ಭಾರೀ ಬೇಡಿಕೆಯಿತ್ತು. ಪ್ರತಿ ತಿಂಗಳು ನೂರಾರು ಘನ ಮೀಟರ್‌ನಷ್ಟು ಗ್ರಾನೈಟ್‌ ಕಲ್ಲನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ನಿಂದಾಗಿ ನಮ್ಮ ಕ್ವಾರಿಗಳನ್ನು ಬಂದ್‌ ಮಾಡುವಂತಾಗಿದೆ.
-ಹಸನಸಾಬ್‌ ತಕ್ಕೇದ್‌, ಹಳೆಪೇಟೆ ಗಣಿ ಮಾಲೀಕ, ಮುದಗಲ್ಲ

ಕಲ್ಲು ಕ್ವಾರಿಯಲ್ಲಿ ಅಳಿದುಳಿದ ಕಲ್ಲುಗಳನ್ನು ಒಡೆದು ದಿಡ್ಡು, ಸೈಜಗಲ್ಲುಗಳನ್ನಾಗಿ ಪರಿ ವರ್ತಿಸಿ, ಕಟ್ಟಡಕ್ಕೆ ಬಳಸಲು ಮಾರಾಟ ಮಾಡುವ ಮೂಲಕ ಇಲ್ಲಿನ ಕ್ವಾರಿಗಳಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರು ಜೀವನ ಸಾಗಿಸುತ್ತಿದ್ದರು. ಆದರೆ, ತಿಂಗಳಿಂದ ಕಲ್ಲು ಗಣಿಗಳು ಸ್ಥಗಿತಗೊಂಡಿದ್ದರಿಂದ ಕಲ್ಲುಗಳು ಸಿಗದೆ ಖಾಲಿ ಕೂಡುವಂತಾಗಿದೆ.
-ಖಾದರಸಾಬ್‌, ಹಳೆಪೇಟೆ ಕಲ್ಲು ಸೀಳುವ ಕಾರ್ಮಿಕ

* ದೇವಪ್ಪ ರಾಠೊಡ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.