ಗುಣಮುಖರಾಗುವ ಸಂಖ್ಯೆಯೂ ಏರಿಕೆ

ಆರು ತಿಂಗಳಿನಿಂದ ಕೊರೊನಾ ಇಳಿಮುಖ

Team Udayavani, Nov 20, 2021, 5:00 AM IST

Covidಗುಣಮುಖರಾಗುವ ಸಂಖ್ಯೆಯೂ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳಿನಿಂದ ಕೊರೊನಾ ದಿನದ ಪ್ರಕರಣ ಇಳಿಮುಖಗೊಳ್ಳುತ್ತಿರುವ ಜತೆಗೆ ಗುಣಮುಖರಾಗುವ ಸಂಖ್ಯೆಯೂ ಏರಿಕೆ ಕಾಣುತ್ತಿದೆ.

ಕೊರೊನಾ ಎರಡನೇ ಅಲೆಯಲ್ಲಿ ಜೂನ್‌ನಲ್ಲಿ 16,653 ಮಂದಿಗೆ ಕೊರೊನಾ ದೃಢಪಟ್ಟು 20,842 ಮಂದಿ ಗುಣಮುಖರಾಗಿದ್ದಾರೆ. ಜುಲೈಯಲ್ಲಿ 7,518 ಮಂದಿಗೆ ಸೋಂಕು, 9,148 ಮಂದಿ ಗುಣಮುಖ, ಆಗಸ್ಟ್‌ನಲ್ಲಿ 9,656 ಮಂದಿಗೆ ಸೋಂಕು, 9,987 ಮಂದಿ ಗುಣಮುಖ, ಸೆಪ್ಟಂಬರ್‌ನಲ್ಲಿ 4,276 ಮಂದಿಗೆ ಸೋಂಕು, 5,576 ಮಂದಿ ಗುಣಮುಖ, ಅಕ್ಟೋಬರ್‌ನಲ್ಲಿ 1,176 ಮಂದಿಗೆ ಸೋಂಕು, 1,809 ಮಂದಿ ಗುಣಮುಖ ಮತ್ತು ನವೆಂಬರ್‌ನಲ್ಲಿ 15ರ ವರೆಗೆ 200 ಮಂದಿಗೆ ಸೋಂಕು ದೃಢಪಟ್ಟಿದ್ದರೂ 348 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ.

ದ.ಕ.ದಲ್ಲಿ ಸದ್ಯ 123 ಮಂದಿ ಕೊರೊನಾ ಸಕ್ರಿಯ ಪ್ರಕರಣ ಇದ್ದು, ಇದರಲ್ಲಿ 80 ಮಂದಿ (ಶೇ. 65.94) ಗೃಹ ನಿಗಾದಲ್ಲಿದ್ದಾರೆ. 39 ಮಂದಿ (ಶೇ. 31.71) ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ನಾಲ್ವರು (ಶೇ. 3.25) ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಶೇ. 0.28 ಪಾಸಿಟಿವಿಟಿ ದರ ಇದೆ.

ಇದನ್ನೂ ಓದಿ:ಬೆಳೆ ಹಾನಿ ವರದಿಗೆ ಸೂಚನೆ: ಶೋಭಾ ಕರಂದ್ಲಾಜೆ

ಜಿಲ್ಲೆಯಲ್ಲಿ ಸದ್ಯ ಇರುವ 123 ಸಕ್ರಿಯ ಪ್ರಕರಣಗಳಲ್ಲಿ ಮಂಗಳೂರು ನಗರದಲ್ಲಿ ಸದ್ಯ ಅತೀ ಹೆಚ್ಚು ಪ್ರಕರಣ ಇದೆ. ಮಂಗಳೂರು ನಗರದಲ್ಲಿ ಸದ್ಯ 58, ಮಂಗಳೂರು ತಾಲೂಕಿನಲ್ಲಿ 22,ಬಂಟ್ವಾಳ ತಾಲೂಕಿನಲ್ಲಿ 18, ಪುತ್ತೂರಿನಲ್ಲಿ 2, ಬೆಳ್ತಂಗಡಿಯಲ್ಲಿ 5, ಸುಳ್ಯ ದಲ್ಲಿ 6 ಮತ್ತು ಹೊರ ಜಿಲ್ಲೆಯ 12 ಮಂದಿ ಯಲ್ಲಿ ಸಕ್ರಿಯ ಪ್ರಕರಣಗಳಿವೆ.

34,035 ಮಂದಿಗೆ ಟೆಸ್ಟ್‌,
96 ಮಂದಿಗೆ ಪಾಸಿಟಿವ್‌
ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ 34,035 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. 96 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, ಶೇ. 0.28ರಷ್ಟು ಪಾಸಿಟಿವಿಟಿ ದರ ಹೊಂದಿದೆ. ಪ್ರತೀ ದಿನವೂ ನಾಲ್ಕು ಸಾವಿರದಷ್ಟು ಮಂದಿಯ ತಪಾಸಣೆ ನಡೆಸಲಾಗುತ್ತಿದ್ದರೂ ಕೊರೊನಾ ದೃಢಪಟ್ಟವರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಎರಡಂಕೆಯಿಂದ ಒಂದಂಕಿಗೆ ಇಳಿದಿದೆ.

ದ.ಕ.ದಲ್ಲಿ ಕೆಲವು ವಾರಗಳಿಂದ ಕೊರೊನಾ ದೈನಂದಿನ ಪ್ರಕರಣ ಇಳಿಮುಖವಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸಂಘಟಿತ ಪ್ರಯತ್ನವೂ ಇಳಿಕೆಗೆ ಕಾರಣ. ಕೊರೊನಾ ಇಳಿಮುಖಗೊಂಡರೂ ಕೊರೊನಾ ಮಾರ್ಗಸೂಚಿ ಪಾಲಿಸಿ. ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕದಿರಿ.
– ಡಾ| ಕಿಶೋರ್‌ ಕುಮಾರ್‌,
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.