ಹಣಕಾಸು ಇಲಾಖೆಗೂ ಕೊರೊನಾ ವರಿ


Team Udayavani, Mar 15, 2020, 3:09 AM IST

hanakasu

ಬೆಂಗಳೂರು: ರಾಜ್ಯಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್‌, ಉದ್ಯಮ ವಲಯವನ್ನಷ್ಟೇ ಅಲ್ಲದೆ ರಾಜ್ಯದ ಹಣಕಾಸು ಇಲಾಖೆಯನ್ನೂ ಚಿಂತೆಗೀಡಾಗುವಂತೆ ಮಾಡಿದೆ. ಪ್ರಸಕ್ತ ಆರ್ಥಿಕ ವರ್ಷದ ಕೊನೆಯ ತಿಂಗಳು ಸಾಮಾನ್ಯವಾಗಿ ಸಂಪನ್ಮೂಲ ಕ್ರೋಢೀಕರಣದ ಗುರಿ ಮುಟ್ಟುವ ಹಂತ. ಆದರೆ, ಕೊರೊನಾ ವೈರಸ್‌ನಿಂದ ಉದ್ಯಮ ವಲಯದ ಮೇಲೆ ಬಿದ್ದಿರುವ ಹೊಡೆತದಿಂದ ಸಂಪನ್ಮೂಲ ಕ್ರೋಢೀಕರಣದ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ರಾಜ್ಯ ಸರ್ಕಾರಕ್ಕೆ ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾರಿಗೆ ವಲಯದಿಂದ ನಿಗದಿತ ಗುರಿ ತಲುಪಲು ಇನ್ನೂ ಸುಮಾರು 10 ರಿಂದ 12 ಸಾವಿರ ಕೋಟಿ ರೂ.ವರೆಗೆ ಸಂಗ್ರಹವಾಗಬೇಕಿದ್ದು, ಥಿಯೇಟರ್‌, ಮಾಲ್‌, ಕ್ಲಬ್‌, ಪಬ್‌ ಬಂದ್‌, ಮದುವೆ ಮತ್ತಿತರ ಕಾರ್ಯಕ್ರಮಗಳ ಮುಂದೂಡಿಕೆಯಿಂದಾಗಿ ಸರ್ಕಾರದ ಆದಾಯಕ್ಕೆ ಪೆಟ್ಟು ಬೀಳಲಿದೆ ಎಂಬುದು ಹಣಕಾಸು ಇಲಾಖೆಯ ಅಧಿಕಾರಿಗಳ ಅಳಲು.

ಒಂದು ವಾರ ಅಥವಾ ಹದಿನೈದು ದಿನಗಳ ಬಂದ್‌ ಘೋಷಣೆಯ ಎಫೆಕ್ಟ್ ರಾಜ್ಯದ ಖಜಾನೆ ಮೇಲೂ ಆಗಲಿದ್ದು, ಇದರಿಂದ ಯೋಜನೆಗಳ ಅನುಷ್ಟಾನದ ಮೇಲೂ ಪರಿಣಾಮ ಬೀರಲಿದೆ. ಮೊದಲೇ ಆರ್ಥಿಕ ಸಂಕಷ್ಟದಲ್ಲಿದ್ದ ರಾಜ್ಯಕ್ಕೆ ಕೊರೊನಾ ಮತ್ತೂಂದು ಹೊಡೆತ ನೀಡಿದಂತಿದೆ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.

1,15,924 ಲಕ್ಷ ಕೋಟಿ ರೂ.ಆದಾಯ ಸಂಗ್ರಹ ನಿರೀಕ್ಷೆ: ಪ್ರಸಕ್ತ ಹಣಕಾಸು ವರ್ಷದಲ್ಲಿ 1,15,924 ಲಕ್ಷ ಕೋಟಿ ರೂ.ಆದಾಯ ಸಂಗ್ರಹ ನಿರೀಕ್ಷಿಸಲಾಗಿದೆ. ಫೆಬ್ರವರಿ ಅಂತ್ಯಕ್ಕೆ 1.03 ಲಕ್ಷ ಕೋಟಿ ರೂ.ವರೆಗೂ ಸಂಗ್ರಹವಾಗಿದೆ. ಇನ್ನೂ 10 ರಿಂದ 12 ಸಾವಿರ ಕೋಟಿ ರೂ.ಸಂಗ್ರಹವಾಗಬೇಕಾಗಿದೆ. ಸಾಮಾನ್ಯವಾಗಿ ಮಾರ್ಚ್‌ ತಿಂಗಳಲ್ಲಿ ಬಾಕಿ ಮೊತ್ತ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿತ್ತು.

ಇದೇ ಕಾರಣಕ್ಕೆ ಮುದ್ರಾಂಕ ಮತ್ತು ನೋಂದಣಿ ಕಚೇರಿಗಳ ಕಾರ್ಯ ನಿರ್ವಹಣೆಯ ಅವಯನ್ನು ಸಹ ಹೆಚ್ಚಿಸಲಾಗಿತ್ತು. ಆದರೆ, ಕೊರೊನಾ “ರಂಗಪ್ರವೇಶ’ದಿಂದ ರಾಜ್ಯದ ಹಣಕಾಸು ಇಲಾಖೆಯ ನಿರೀಕ್ಷೆಗಳು ಏರು ಪೇರಾಗುವ ಲಕ್ಷಣಗಳು ಕಂಡು ಬರುತ್ತಿವೆ. ಮಾರ್ಚ್‌ ತಿಂಗಳ ಪೂರ್ತಿ ಕೊರೊನಾ ಆತಂಕ ಮುಂದುವರಿದದ್ದೇ ಆದರೆ ಸಂಪನ್ಮೂಲ ಕ್ರೋಢೀಕರಣದ ಗುರಿ ತಲುಪುವುದು ಕಷ್ಟ ಎಂದು ಅಧಿಕಾರಿಗಳು ಹೇಳುತ್ತಾರೆ.

ಹಣಕಾಸು ಸ್ಥಿತಿ ಕಷ್ಟಕರ: 2019-20ನೇ ಸಾಲಿನ ಪರಿಸ್ಥಿತಿ ಹೀಗಾದರೆ ಇನ್ನು 2020-21ನೇ ಸಾಲಿನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಬಹುದು. 2020- 21ನೇ ಸಾಲಿನಲ್ಲಿ 1,28,107 ಲಕ್ಷ ಕೋಟಿ ರೂ.ಸಂಪನ್ಮೂಲ ಕ್ರೋಢೀಕರಣದ ಗುರಿ ಹೊಂದಿದ್ದು, 82,443 ಕೋಟಿ ರೂ.ವಾಣಿಜ್ಯ ತೆರಿಗೆ, 12,655 ಕೋಟಿ ರೂ.ನೋಂದಣಿ ಮತ್ತು ಮುದ್ರಾಂಕ, 22,700 ಕೋಟಿ ರೂ.ಅಬಕಾರಿ, 7,115 ಕೋಟಿ ರೂ. ಸಾರಿಗೆ ವಲಯದಿಂದ ಆದಾಯ ನಿರೀಕ್ಷಿಸಲಾಗಿದೆ.

ಆದರೆ, ಕೊರೊನಾ ಆತಂಕದಿಂದ ಉದ್ಯಮ ವಲಯದ ವಹಿವಾಟು ಕುಸಿದರೆ ಅದು ಮುಂದಿನ ವರ್ಷದ ಆರ್ಥಿಕತೆ ಮೇಲೂ ಪರಿಣಾಮ ಬೀರಬಹುದು. ಕೊರೆನಾ ಹಿನ್ನೆಲೆಯಲ್ಲಿ ವಿವಿಧ ವಲಯಗಳಿಂದ ತೆರಿಗೆ ವಿನಾಯಿತಿ ಮತ್ತಿತರ ಬೇಡಿಕೆಗಳು ಬರಬಹುದು. ಆಗ, ಪರಿಸ್ಥಿತಿ ನಿಭಾಯಿಸುವುದು ಮತ್ತಷ್ಟು ಕಷ್ಟವಾಗುತ್ತದೆ ಎಂದು ಹೇಳಲಾಗುತ್ತಿದೆ.

ಕೇಂದ್ರದಿಂದ ತೆರಿಗೆ ರೂಪದಲ್ಲಿ 28,591 ಕೋಟಿ ರೂ., ಸಹಾಯಾನುಧಾನ ರೂಪದಲ್ಲಿ 15,454 ಕೋಟಿ ರೂ.ನಿರೀಕ್ಷೆ ಮಾಡಲಾಗಿದೆಯಾದರೂ ದೇಶಾದ್ಯಂತ ಈಗಿನ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಅದೂ ನಿರೀಕ್ಷಿತ ಪ್ರಮಾಣದಲ್ಲಿ ಸಿಗುವುದು ಕಷ್ಟವಾಗಬಹುದು. ಹೀಗಾಗಿ, ಇದನ್ನೆಲ್ಲಾ ಸುಧಾರಿಸಿಕೊಳ್ಳಬೇಕಾದರೆ ಒಂದು ವರ್ಷ ಆಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಖ್ಯಮಂತ್ರಿ ತಾಕೀತು: ಕೊರೊನಾ ಹಿನ್ನೆಲೆಯಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಮುಖ ಆದಾಯ ಸಂಗ್ರಹ ಇಲಾಖೆಗಳ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದು, ಪ್ರಸಕ್ತ ವರ್ಷದ ತೆರಿಗೆ ಗುರಿ ತಲುಪುವಂತೆ ನೋಡಿಕೊಳ್ಳಿ. ಇಲ್ಲದಿದ್ದರೆ ಕಷ್ಟವಾಗಬಹುದು. ಕೊರೊನಾ ನೆಪ ಹೇಳಿ ತೆರಿಗೆ ಸಂಗ್ರಹ ಕಡೆ ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ತಾಕೀತು ಸಹ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ನಿರ್ಮಾಣವಾಗಿರುವ ಪರಿಸ್ಥಿತಿ ನಿಜಕ್ಕೂ ರಾಜ್ಯದ ಆರ್ಥಿಕ ವಲಯಕ್ಕೆ ಕಳವಳಕಾರಿಯೇ. ಜನರು ಹೊರಗೆ ಬರದಿದ್ದರೆ ಖರೀದಿ-ಮಾರಾಟ ವಹಿವಾಟು ನಡೆಯದಿದ್ದರೆ ಹಣ ಚಲಾವಣೆಯಾದರೂ ಹೇಗೆ ಸಾಧ್ಯ? ಬಂದ್‌ ಘೋಷಣೆಯಿಂದ ದಿನಕ್ಕೆ 400 ಕೋಟಿ ರೂ. ವರೆಗೆ ರಾಜ್ಯದ ಖಜಾನೆಗೆ ಆದಾಯಕ್ಕೆ ಕೊಕ್ಕೆ ಬೀಳಬಹುದು. ಆರ್ಥಿಕ ವರ್ಷಾಂತ್ಯದ ಸಂದರ್ಭದಲ್ಲೇ ಈ ರೀತಿಯ ಸ್ಥಿತಿ ಗಂಭೀರ ಪರಿಣಾಮ ಬೀರಲಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ನಿರ್ವಹಣೆ ಕಷ್ಟಕರವಾಗಲಿದೆ.
-ಆರ್‌.ಜಿ.ಮುರಳೀಧರ್‌, ಆರ್ಥಿಕ ತಜ್ಞ

* ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.