ಕೆಎಫ್‌ಡಿ ನಿಯಂತ್ರಣಕ್ಕೆ ಕೊರೊನಾ ಲಸಿಕೆ ಅಡ್ಡಿ

ಲಸಿಕೆ ಪಡೆದವರು ಮಂಗನಕಾಯಿಲೆ ಲಸಿಕೆ ಪಡೆಯಲು ಹಿಂದೇಟು

Team Udayavani, Dec 2, 2021, 4:30 PM IST

covid

ಶಿವಮೊಗ್ಗ: ಮಲೆನಾಡನ್ನೇ ತಲ್ಲಣಗೊಳಿಸುವ ಕೆಎಫ್‌ಡಿ ವೈರಸ್‌ ಕಡಿವಾಣಕ್ಕೆ ಈಗ ಕೊರೊನಾ ವ್ಯಾಕ್ಸಿನೇಷನ್‌ ಅಡ್ಡಿಯಾಗಿದೆ. ಕೋವಿಡ್‌ ಲಸಿಕೆ ಪಡೆದವರು ಮಂಗನಕಾಯಿಲೆ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು ಲಸಿಕಾಕರಣ ಗುರಿ ತಲುಪುತ್ತಿಲ್ಲ.

ಸಾಮಾನ್ಯವಾಗಿ ಡಿಸೆಂ ಬರ್‌ನಿಂದ ಜೂನ್‌ವರೆಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌) ಅಥವಾ ಮಂಗನ ಕಾಯಿಲೆ ಇರುತ್ತದೆ. 2019ರಲ್ಲಿ ಕೆಎಫ್‌ಡಿ ಪ್ರಕರಣಗಳು ಉಲ½ಣಗೊಂಡು ಅಪಾರ ಸಾವು- ನೋವು ಸಂಭವಿಸಿದ್ದವು. ನಂತರ ಹಲವು ಉಪಕ್ರಮಗಳು ವೈರಸ್‌ ಕಡಿವಾಣಕ್ಕೆ ಕಾರಣವಾಗಿತ್ತು. ಅದರಲ್ಲಿ ವ್ಯಾಕ್ಸಿನೇಷನ್‌ ಕೂಡ ಒಂದು. ಕೆಎಫ್‌ಡಿ ಬಾಧಿತ ಗ್ರಾಮಗಳಲ್ಲಿ ಮೊದಲಿನಿಂದಲೂ ಲಸಿಕೆ ನೀಡಲಾಗುತ್ತಿದೆ. ಎರಡು ಡೋಸ್‌ ಲಸಿಕೆ ಹಾಗೂ ಒಂದು ಬೂಸ್ಟರ್‌ ಡೋಸ್‌ ಪಡೆದ ವ್ಯಕ್ತಿಗಳು ಕೆಎಫ್‌ಡಿ ಸೋಂಕಿಗೆ ಒಳಗಾಗುತ್ತಿರಲಿಲ್ಲ. ಮೊದಲು ಸಾಕಷ್ಟು ಹಿಂಜರಿಕೆ ಕಾರಣ ಗುರಿ ಮುಟ್ಟಲು ಆಗುತ್ತಿರಲಿಲ್ಲ. 2019ರ ಭೀಕರತೆ ನಂತರ ಜನರು ಲಸಿಕೆ ಪಡೆಯಲು ಮುಂದಾಗಿದ್ದರು. ಆದರೆ ಈ ವರ್ಷ ಕೋವಿಡ್‌ ಲಸಿಕೆ ನೀಡುತ್ತಿರುವ ಪರಿಣಾಮ ಜನರು ಕೆಎಫ್ಡಿ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಕೋವಿಡ್‌ ಲಸಿಕೆ ಪಡೆದವರಲ್ಲಿ ಹಲವು ದಿನಗಳವರೆಗೆ ಮೈ ಕೈ ನೋವು ಕಾಣಿಸಿಕೊಳ್ಳುತ್ತಿದೆ. ಕೋವಿಡ್‌ ಲಸಿಕೆ ಪಡೆದ ಮೇಲೆ ಎರಡನೇ ಡೋಸ್‌ ಪಡೆಯಲೇಬೇಕು. ಇತ್ತ ಕೆಎಫ್‌ಡಿ ಲಸಿಕೆ ಕೂಡ ತಿಂಗಳ ಅಂತರದಲ್ಲಿ ಮೂರು ಬಾರಿ ಪಡೆಯಬೇಕು. ಕೆಎಫ್‌ಡಿ ಲಸಿಕೆ ಪಡೆದವರಲ್ಲೂ ಉರಿ ಕಾಣಿಸಿಕೊಳ್ಳುವುದು ಸಾಮಾನ್ಯ. ಸರಕಾರ ಕೋವಿಡ್‌ ಲಸಿಕೆ ಪಡೆಯಲು ಜಾಗೃತಿ ಮೂಡಿಸುತ್ತಿದ್ದು ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಲಸಿಕಾಕರಣ ಕಾರ್ಯಕ್ರಮ ನಡೆಯುತ್ತಿರುವುದರಿಂದ ಕೆಎಫ್‌ಡಿ ಲಸಿಕೆ ಪಡೆಯಬೇಕಿದ್ದ ಜನರು ಕೋವಿಡ್‌ ಲಸಿಕೆ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಕೆಎಫ್‌ಡಿ ಲಸಿಕೆ ಗುರಿ ಮುಟ್ಟುತ್ತಿಲ್ಲ. ಕೋವಿಡ್‌ ಲಸಿಕೆ ಪಡೆದ 14 ದಿನಗಳ ನಂತರ ಕೆಎಫ್‌ಡಿ ಲಸಿಕೆ ಹಾಕಿಸಿಕೊಳ್ಳಬಹುದು. ಯಾವುದೇ ಆರೋಗ್ಯ ತೊಂದರೆ ಕಾಣಿಸಿಕೊಳ್ಳಲ್ಲ ಎಂದು ತಜ್ಞರು ಮನವರಿಕೆ ಮಾಡುತ್ತಿದ್ದರೂ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿಲ್ಲ. ಡಿಸೆಂಬರ್‌ದೊಳಗೆ ಗುರಿ ತಲುಪಿದರೆ ಮುಂಬರುವ ದಿನಗಳಲ್ಲಿ ಪ್ರತಿಕಾಯ ವೃದ್ಧಿಯಾಗುತ್ತದೆ. ಡಿಸೆಂಬರ್‌ದೊಳಗೆ ಗುರಿ ತಲುಪಲು ಅರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಪ್ರಕರಣ ಕುಸಿತ

2018-19ನೇ ಸಾಲಿನಲ್ಲಿ 445 ಮಂದಿಗೆ ಪಾಸಿಟಿವ್‌ ಬಂದಿದ್ದು 15 ಮಂದಿ ಮೃತಪಟ್ಟಿದ್ದರು. 2019-20ರಲ್ಲಿ 255 ಮಂದಿಗೆ ಪಾಸಿಟಿವ್‌ ಬಂದಿದ್ದು ಐವರು ಮೃತಪಟ್ಟಿದ್ದರು. 2020-21ರಲ್ಲಿ 25 ಮಂದಿಗೆ ಪಾಸಿಟಿವ್‌ ಬಂದಿದ್ದು ಶೂನ್ಯ ಮರಣ ದಾಖಲಾಗಿತ್ತು. ಜನರಲ್ಲಿ ಲಸಿಕೆ ಹಾಕಿಸಿಕೊಂಡರೆ ಉತ್ತಮ ಎಂಬ ಭಾವನೆ ಮೂಡುತ್ತಿಲ್ಲ. ಈವರೆಗಿನ ಕೆಎಫ್‌ಡಿ ಇತಿಹಾಸದಲ್ಲಿ 2012ರಿಂದ 2015ರವರೆಗೆ ಯಾವುದೇ ಮರಣ ಕಂಡು ಬಂದಿಲ್ಲ. ನಂತರದ ದಿನಗಳಲ್ಲಿ ವೈರಸ್‌ ಉಲ್ಬಣಗೊಂಡಿದೆ. ಹಾಗಾಗಿ ಜನರು ಉದಾಸೀನ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎನ್ನುತ್ತಾರೆ ತಜ್ಞರು

ಲಸಿಕೆ ಪ್ರಮಾಣ ಇಳಿಕೆ
2019ರ ಹಿಂದಿನ ವರ್ಷಗಳಲ್ಲಿ ಶೇ.50 ಗುರಿ ತಲುಪುವುದು ಕಷ್ಟವಾಗಿತ್ತು. 2019ರಲ್ಲಿ ಕಂಡು ಬಂದ ಭೀಕರತೆಗೆ ಜನರು ಹೆದರಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದರು. ಕಳೆದ ಎರಡು ವರ್ಷಗಳಲ್ಲಿ ಶೇ.70ಕ್ಕಿಂತ ಹೆಚ್ಚು ವ್ಯಾಕ್ಸಿನೇಷನ್‌ ಅಗಿದೆ. 11 ಜಿಲ್ಲೆಗಳಲ್ಲಿ ಮೂರು ಲಸಿಕೆ ನೀಡಲಾಗಿದೆ. ಈ ಬಾರಿ ನವೆಂಬರ್‌ ಮುಗಿಯುತ್ತ ಬಂದರೂ ಲಸಿಕೆ ಗುರಿ ಶೇ.50ರಷ್ಟು ತಲುಪಿಲ್ಲ

ಕೋವಿಡ್‌ ಲಸಿಕೆ ನೀಡುತ್ತಿರುವ ಕಾರಣ ಕೆಎಫ್‌ಡಿ ಲಸಿಕೆ ನೀಡಲು ತೊಂದರೆಯಾಗುತ್ತಿದೆ. ಜನರು ಎರಡೆರಡು ಲಸಿಕೆ ಪಡೆಯಲು ನಿರಾಕರಿಸುತ್ತಿದ್ದಾರೆ. ಕೊರೊನಾ ಲಸಿಕೆ ಪಡೆದ 14 ದಿನಗಳ ನಂತರ ಕೆಎಫ್‌ಡಿ ಲಸಿಕೆ ಪಡೆದರೆ ಯಾವುದೇ ತೊಂದರೆ ಆಗಲ್ಲ. ಈ ಬಗ್ಗೆ ಜನರು ಗಾಬರಿಗೊಳ್ಳುವುದು ಬೇಡ. ಕೆಎಫ್‌ಡಿ ಲಸಿಕೆ ಕೆಎಫ್‌ಡಿ ವೈರಸ್‌ನ ನಿಷ್ಕ್ರಿಯ ಭಾಗಗಳನ್ನು ಬಳಸಿ ಮಾಡಲಾಗಿರುತ್ತದೆ. ಅದಕ್ಕೂ ಕೋವಿಡ್‌ ಲಸಿಕೆಗೂ ಸಂಬಂಧವಿಲ್ಲ. ಕೆಎಫ್‌ಡಿಗೂ ಕೋವಿಡ್‌ ಲಸಿಕೆ ಪಡೆದರೆ ಸಾಕು ಎಂಬ ಮನೋಭಾವ ಬೇಡ.
ಡಾ|ರಘುನಂದನ್‌, ಉಪ ನಿರ್ದೇಶಕ ವಿಡಿಎಲ್‌ ಲ್ಯಾಬ್‌

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.