Karnataka: ನಿಗಮ, ಮಂಡಳಿ ಕಗ್ಗಂಟು ಹೈಕಮಾಂಡ್‌ ಅಂಗಳಕ್ಕೆ

ಶನಿವಾರ ಮಧ್ಯರಾತ್ರಿ ದಿಢೀರ್‌ ಆಗಮಿಸಿ ನಿರ್ಗಮಿಸಿದ ರಣದೀಪ್‌ ಸಿಂಗ್‌ ಸುರ್ಜೇವಾಲ

Team Udayavani, Jan 21, 2024, 11:11 PM IST

vidhana soudha

ಬೆಂಗಳೂರು: ನಿಗಮ- ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿ ಸ್ವತಃ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಮಧ್ಯಸ್ಥಿಕೆಯಲ್ಲೂ ಸಿಎಂ ಮತ್ತು ಡಿಸಿಎಂ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮಾತುಕತೆ ವಿಫ‌ಲವಾಗಿದ್ದು, ಪರಿಣಾಮ ಉಸ್ತುವಾರಿಗಳು ನಿರಾಸೆಯಿಂದ ದಿಲ್ಲಿಗೆ ಮರಳಿದ್ದಾರೆ. ಇದರೊಂದಿಗೆ ನೇಮಕಾತಿ “ಕಗ್ಗಂಟು’ ಮತ್ತೆ ಆ ಪಕ್ಷದ ಹೈಕಮಾಂಡ್‌ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ.

ನೇಮಕಾತಿ ಪಟ್ಟಿಗೆ ಸಂಬಂಧಿಸಿ ಎರಡೂ ಬಣಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಅದು ನಾಯಕರ ಮೇಲಿನ ಒತ್ತಡದ ರೂಪದಲ್ಲಿ ಪರಿಣಮಿಸಿತ್ತು. ಇದನ್ನು ನಾಯಕರು ಪ್ರತಿಷ್ಠೆಯಾಗಿ ಪರಿಗಣಿಸಿದ್ದರು. ಇದರಿಂದ ಪಟ್ಟಿ ಬಿಡುಗಡೆ ಕಗ್ಗಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲ ದಿಲ್ಲಿಯಿಂದ ಬೆಂಗಳೂರಿಗೆ ದೌಡಾಯಿಸಿದ್ದರು. ಬೆಳಗ್ಗೆ ಖಾಸಗಿ ಹೊಟೇಲ್‌ನಲ್ಲಿ ಸಿಎಂ, ಡಿಸಿಎಂ ಜತೆ ಈ ಕುರಿತು ಸಂಧಾನ ಸಭೆ ನಡೆಸಿದ್ದರು. ಆದರೆ ಈ ವಿಚಾರದಲ್ಲಿ ಕೊನೆ ಕ್ಷಣದವರೆಗೂ ಒಮ್ಮತ ಮೂಡಲಿಲ್ಲ ಎನ್ನಲಾಗಿದೆ.

ಎರಡು ಮತ್ತು ಅದಕ್ಕಿಂತ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾದವರು, ಪ್ರಾಮಾಣಿಕ ಕಾರ್ಯಕರ್ತರು ಹಾಗೂ ನಿರ್ದಿಷ್ಟ ಪ್ರಕರಣಗಳಲ್ಲಿ ಮೊದಲ ಬಾರಿ ಶಾಸಕರಾದವರು ಸಹಿತ ಹಲವು ಮಾನದಂಡಗಳನ್ನು ಅನುಸರಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಇದರಲ್ಲಿ 8-10 ಹೆಸರುಗಳ ಬಗ್ಗೆ ತೀವ್ರ ಆಕ್ಷೇಪ ಆಯಾ ಬಣಗಳಿಂದ ಕೇಳಿಬರುತ್ತಿದೆ. ಅದನ್ನು ಶಮನಗೊಳಿಸುವ ಉದ್ದೇಶದಿಂದಲೇ ಸುರ್ಜೇವಾಲ ಆಗಮಿಸಿದ್ದರು.

ಇದರಿಂದ ಸುರ್ಜೇವಾಲ ಬಂದ ದಾರಿಗೆ ಸುಂಕ ವಿಲ್ಲ ಎಂಬಂತೆ ದಿಲ್ಲಿಗೆ ಮರಳಿದ್ದಾರೆ. ಇತ್ತ ಪಟ್ಟಿ ಬಿಡುಗಡೆ ಭಾಗ್ಯ ಮತ್ತೆ ಮುಂದೂಡಲ್ಪಟ್ಟಂತಾಗಿದೆ. ಸಂಧಾನ ವಿಫ‌ಲವಾದ ಹಿನ್ನೆಲೆಯಲ್ಲಿ ಜ. 26ಕ್ಕೆ ಮತ್ತೆ ಉಸ್ತುವಾರಿ ರಾಜ್ಯ ಭೇಟಿ ಸಾಧ್ಯತೆ ಇದೆ. ಈ ಸಂದರ್ಭ ದಲ್ಲಿ ನೇಮಕಾತಿ ಪಟ್ಟಿಗೆ ಸಂಬಂಧಿಸಿ ಮತ್ತೂಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಸೇರಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್‌ ಕಳುಹಿ ಸಿದೆ. ಆ ಪಟ್ಟಿ ಸೋರಿಕೆ ಬೆನ್ನಲ್ಲೇ ಎರಡೂ ಬಣಗಳಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶತಾಯಗತಾಯ ಶಾಸಕರಿಗೆ ನಿಗಮ-ಮಂಡಳಿಗಳು ಹಂಚಿಕೆ ಮಾಡ ಬೇಕು ಎನ್ನುವುದು ಒಂದೆಡೆಯಾದರೆ, ಕಾರ್ಯಕರ್ತ ರಿಗೂ ಅವಕಾಶ ಸಿಗಲೇಬೇಕು ಎಂಬ ಒತ್ತಡ ಮತ್ತೂಂದೆಡೆ. ಈ ತಿಕ್ಕಾಟದ ನಡುವೆ ಕಗ್ಗಂಟಾಗಿ ಉಳಿಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ವಂಚಿತರಿಗೆ ಸಮಿತಿಯಲ್ಲಿ ಅವಕಾಶ?
ಪಟ್ಟಿ ಬಿಡುಗಡೆಯಾಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಶಾಸಕರಿಗಾದರೂ “ಅಧಿಕಾರ ಭಾಗ್ಯ’ ನೀಡುವ ಮೂಲಕ ತಕ್ಕಮಟ್ಟಿಗೆ ಸಮಾಧಾನಪಡಿಸುವ ಲೆಕ್ಕಾಚಾರವೂ ನಡೆದಿದೆ. ಆದರೆ ಹಿರಿಯ ಕಾರ್ಯಕರ್ತರ ನಿರೀಕ್ಷೆ ಮತ್ತು ಉತ್ಸಾಹಕ್ಕೆ ತಣ್ಣೀರು ಎರಚಿದಂತಾಗುತ್ತದೆ ಎಂಬ ಬೇಸರವೂ ಇದೆ. ಕೆಲವು ಕಾರ್ಯಕರ್ತರಿಗೂ ಮೊದಲ ಹಂತದಲ್ಲಿ ಅವಕಾಶ ಕಲ್ಪಿಸಿ, ಅವಕಾಶ ವಂಚಿತರಾದವರಿಗೆ ಮುಂಬರುವ ದಿನಗಳಲ್ಲಿ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ಸಮಿತಿಗಳ ರಚನೆ ಸಂದರ್ಭದಲ್ಲಿ ನ್ಯಾಯ ಕಲ್ಪಿಸುವ ತಂತ್ರಗಾರಿಕೆ ಕೂಡ ನಡೆದಿದೆ.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.