ಶಬರಿಮಲೆ ಮಕರ ಜ್ಯೋತಿಗೆ ಕ್ಷಣಗಣನೆ: ಪಂಪಾದಲ್ಲಿ ಜನಸಾಗರ


Team Udayavani, Jan 15, 2020, 2:19 PM IST

papma

ಶಬರಿಮಲೆ: ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಾನಕ್ಕೆ ಮಕರ ಸಂಕ್ರಮಣ ದಿನವಾದ ಬುಧವಾರವೂ ಭಕ್ತ ಸಾಗರ ಹರಿದುಬರುತ್ತಿದ್ದು, ಪಂಪಾ ನದಿ ತೀರದಲ್ಲೇ ಭಕ್ತರು ಸರತಿ ಸಾಲಲ್ಲಿ ನಿಂತಿದ್ದಾರೆ.

ಈ ದಿನ ಸನ್ನಿಧಾನ ತಲುಪಿದರೆ ಸನ್ನಿಧಾನದಲ್ಲಿಯೇ ಮಕರಜ್ಯೋತಿ‌ ದರ್ಶನ ಮಾಡಬಹುದೆಂಬ ಮಹದಾಸೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇರುವ ಕಾರಣ ಜನದಟ್ಟಣೆ ಹೆಚ್ಚಿದೆ. ಆದರೂ ಪೊಲೀಸ್ ಇಲಾಖೆ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಬಂದೋಬಸ್ತ್ ಕಲ್ಪಿಸಿದ್ದು ಭಕ್ತರನ್ನು ಸರತಿ ಸಾಲಿನಲ್ಲಿ ಮುಂದೆ ಹೋಗಲು ಅವಕಾಶ ಮಾಡಿಕೊಡುತ್ತಿದ್ದಾರೆ.

ನೀಲಿ‌ಮಲೆಯಲ್ಲಿ ಶಬರಿಪೀಠದಿಂದ ಸನ್ನಿಧಾನದವರೆಗೂ ಸರತಿ ಸಾಲು ಇದೆ. ಆನ್ ಲೈನ್ ನಲ್ಲಿ ನೊಂದಣಿ ಮಾಡಿದವರಿಗೂ ಕ್ಷೇತ್ರದ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವಂತಾಗಿದೆ. ಈ ದಿನ 18 ಮೆಟ್ಟಿಲು ಹತ್ತಬಹುದು, ಆದರೆ ದೇವರ ದರ್ಶನ ಸಂಜೆಯ ಹೊತ್ತಿಗೆ ಆಗಲಿದೆ.

ಒಟ್ಟಿನಲ್ಲಿ ತಿರುವಾಂಕೂರು ದೇವಸ್ವಂ ಬೋರ್ಡ್ ಹಾಗೂ ಕೇರಳ ಸರಕಾರ,ಪತ್ತನಂತಿಟ್ಟ ಜಿಲ್ಲಾಡಳಿತ ಭಕ್ತರ ರಕ್ಷಣೆಗೆ ಒತ್ತು ನೀಡಿ ಪೊಲೀಸ್‌ ಭದ್ರತೆಯನ್ನು ಹೆಚ್ಚಿಸಿದೆ.ಶಬರಿಮಲೆ ಅಯ್ಯಪ್ಪ ಸನ್ನಿಧಾನವೊಂದರಲ್ಲೇ 15 ಡಿವೈಎಸ್‌ಪಿಗಳು, 36 ಸರ್ಕಲ್‌ ಇನ್ಸ್‌ಪೆಕ್ಟರ್‌ಗಳೊಂದಿಗೆ 1500 ಪೊಲೀಸ್‌ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಅಲ್ಲದೆ 70 ಮಂದಿಯ ಬಾಂಬ್‌ ನಿಷ್ಕ್ರಿಯ ಪಡೆ, 20 ಸಿಬ್ಬಂದಿಯ ಸಂವಹನ ಪಡೆಯನ್ನು ಸನ್ನಿಧಾನದಲ್ಲಿ ನಿಗಾ ಇರಿಸಲು ನೇಮಿಸಲಾಗಿದೆ.

ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ದಳ, ಅಗ್ನಿಶಾಮಕ ದಳದ ಜತೆಗೆ ಗುಪ್ತಚರ ಸಿಬ್ಬಂದಿ ಕೂಡ ಮಫ್ತಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ.ಒಟ್ಟಿನಲ್ಲಿ  ಕ್ಷೇತ್ರದ ಪಾವಿತ್ರ್ಯತೆ ಹಾಗೂ ಭಕ್ತರ ಸುರಕ್ಷತೆಗಾಗಿ ಪೊಲಿಸ್ ಇಲಾಖೆ,ತಿರುವಾಂಕೂರು ದೇವಸ್ವಂ ಬೋರ್ಡ್, ಪತ್ತನಂತಿಟ್ಟ ಜಿಲ್ಲಾಡಳಿತದಿಂದ ಶ್ರಮಿಸಲಾಗುತ್ತಿದೆ.

– ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shabarimale

ಶಬರಿಮಲೆ : ಜ.20 ಕ್ಕೆ ಸನ್ನಿದಾನದ ಬಾಗಿಲು ಮುಚ್ಚಲಾಗುತ್ತದೆ

shabari—jyothi1

ಶಬರಿಮಲೆಯಲ್ಲಿ ಮಕರ ಜ್ಯೊತಿ ದರ್ಶನವಾಯಿತು

shabari—abharana

ಶಬರಿಮಲೆ: ಕ್ಷೇತ್ರಕ್ಕೆ ಆಗಮಿಸಿದ ತಿರುವಾಭರಣಂ

shabari—bagilu

ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು

male-1

ಶಬರಿಮಲೆ: ಶುದ್ದೀಕರಣ ಆರಂಭ: ತಿರುವಾಭರಣಂ ಕ್ಷೇತ್ರದ ಹಾದಿಯಲ್ಲಿ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.