ಸಿದ್ದರಾಮಯ್ಯ ಪತ್ರಿಕಾಗೋಷ್ಠಿ; ದೇವೇಗೌಡರು ರಾಜಕಾರಣದಲ್ಲಿ ಯಾರನ್ನೂ ಬೆಳೆಸಲ್ಲ…


Team Udayavani, Aug 23, 2019, 11:16 AM IST

HDD

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರೇ ಕಾರಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಂಗ್ಲಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ…ಸರಕಾರ ಬೀಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಸ್ವಾಯತ್ತೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂಬ ದೃಷ್ಟಿಯಲ್ಲಿ ಸರಕಾರ ರಚನೆಗೆ ಒಪ್ಪಿದ್ದೆ. ಆದರೆ ನಾನೇನು ಕುಮಾರಸ್ವಾಮಿ ಸಿಎಂ ಆಗಬಾರದು ಎಂದು ಭಾವಿಸಿಲ್ಲ. ನಾನು 14 ತಿಂಗಳ ಕಾಲ ಸಂಪೂರ್ಣ ಸಹಕಾರ ನೀಡಿದ್ದೆ.

ಆದರೆ ದೇವೇಗೌಡರ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದದ್ದು. ರಾಜಕೀಯ ದುರುದ್ದೇಶದಿಂದ ಮಾಡಿರುವಂತಹ ಸುಳ್ಳು ಆರೋಪವಾಗಿದೆ ಎಂದರು. ನನಗೆ, ಅವರಿಗೆ ರಾಜಕೀಯ ವೈರತ್ವ ಎಂದು ತಿಳಿದಿದ್ದಾರೆ. ನಮ್ಮ ಹೈಕಮಾಂಡ್ ತೀರ್ಮಾನವನ್ನು ನಾನು ಒಪ್ಪಿದ್ದೆ. ನಾನು ಅವರ ಕೆಲಸದಲ್ಲಿ ಯಾವ ಹಸ್ತಕ್ಷೇಪವನ್ನೂ ಮಾಡಿಲ್ಲ. ಇವರ ತಪ್ಪು ಮುಚ್ಚಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

ಸಮ್ಮಿಶ್ರ ಸರಕಾರ ಪತನಕ್ಕೆ ನಾನು ಕಾರಣನಲ್ಲ, ಕುಮಾರಸ್ವಾಮಿ:

ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದರು.

ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.

ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

ಬೆಂಬಲ ಕೊಟ್ಟ ಪಕ್ಷಕ್ಕೆ ದ್ರೋಹ ಎಸಗುವುದು ದೇವೇಗೌಡರ ಹುಟ್ಟುಗುಣ!

ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದಿಲ್ಲ. ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಸೇರಿಕೊಂಡುವರು ಯಾರು?ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಜೆಡಿಎಸ್ ನವರೇ ಕಾರಣ. 20;20 ತಿಂಗಳ ಅಧಿಕಾರ ಹಂಚಿಕೆಯಲ್ಲಿ ಕೊಟ್ಟ ಮಾತನ್ನು ತಪ್ಪಿ ವಚನಭ್ರಷ್ಟರಾದವರು ಯಾರು? ಇವರಿಗೆ ಯಾವ ಪಕ್ಷ ಬೆಂಬಲ ಕೊಡುತ್ತೋ ಆ ಪಕ್ಷದ ಬೆಂಬಲ ವಾಪಸ್ ಪಡೆಯುವುದೇ ದೇವೇಗೌಡ ಮತ್ತು ಮಕ್ಕಳ ಹುಟ್ಟುಗುಣ ಎಂದು ಗುಡುಗಿದರು.

ಸೀತಾರಾಮ ಕೇಸರಿಗೆ ಏನು ಮಾಡಿದ್ದರು ದೇವೇಗೌಡರು ಗೊತ್ತಾ? ವಚನ ಭ್ರಷ್ಟತೇ ದೇವೇಗೌಡರ ಇತಿಹಾಸದಲ್ಲಿಯೇ ಇದೆ. ಇವರು ಎಷ್ಟೇ ನಾಟಕವಾಡಿದರೂ ಅದನ್ನು ಜನ ಮರೆಯುವುದಿಲ್ಲ. ಇವರ ಕುತಂತ್ರ, ಹುನ್ನಾರ, ಸಂಚುಗಳು ನನಗೇನು ಗೊತ್ತಿಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಹಿಂದೆ ನನಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದು ಕುಮಾರಸ್ವಾಮಿಯೇ ಎಂದು ಶರದ್ ಪವಾರ್ ಮನೆಯಲ್ಲಿ ನಡೆದ ಮಾತುಕತೆಯಲ್ಲಿ ಒಪ್ಪಿಕೊಂಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಫ್ರೆಂಡ್ಲಿ ಹೋರಾಟದ ಬಗ್ಗೆ ಒಪ್ಪಿಕೊಂಡಿದ್ದು ನಿಜ.  ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಲು, ತುಮಕೂರಿನಲ್ಲಿ ದೇವೇಗೌಡರು ಸೋಲಲು ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿದ್ದಾರೆ. ನಾನು ಹಾಸನಕ್ಕೂ ಪ್ರಚಾರಕ್ಕೆ ಹೋಗಿದ್ದೆ, ಅಲ್ಲಿ ದೇವೇಗೌಡರ ಮೊಮ್ಮಗ ಗೆದ್ದಿದ್ದಾರಲ್ಲ? ನನಗೆ ಹಿಂದೊಂದು, ಮುಂದೊಂದು ರೀತಿ ರಾಜಕಾರಣ ಮಾಡಿ ಗೊತ್ತಿಲ್ಲ. ನಾನು ಏನಿದ್ದರೂ ನೇರ ರಾಜಕಾರಣ ಮಾಡುವವನು.

ತಮ್ಮ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಸಲ್ಲ:

ದೇವೇಗೌಡರು ಸ್ವಜಾತಿಯವರನ್ನು, ತಮ್ಮ ಕುಟುಂಬದವನ್ನು ಬಿಟ್ಟು ಪಕ್ಷದಲ್ಲಿ ಬೇರೆ ಯಾರನ್ನೂ ಬೆಳೆಸುವುದಿಲ್ಲ. ಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತು ಜನರೇ ಸೋಲಿಸಿದ್ದಾರೆ. ಅನಾವಶ್ಯಕವಾಗಿ ನನ್ನ ಮೇಲೆ ಆರೋಪ ಹೊರಿಸಿದರೆ ಏನು ಲಾಭ. ರಾಜ್ಯ ಜನ ನನ್ನ ಇತಿಹಾಸವನ್ನೂ ನೋಡಿದ್ದಾರೆ, ಇವರ ರಾಜಕೀಯ ಇತಿಹಾಸದ ನಡವಳಿಕೆ ನೋಡಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.