ಪತ್ನಿಗೆ ಹಲ್ಲೆ ಮಾಡಿದ ಪ್ರಕರಣ : ಪತಿಗೆ 3 ವರ್ಷ ಕಠಿನ ಶಿಕ್ಷೆ , 19,500 ರೂ. ದಂಡ


Team Udayavani, Sep 19, 2021, 5:35 PM IST

ಪತ್ನಿಗೆ ಹಲ್ಲೆ ಮಾಡಿದ ಪ್ರಕರಣ : ಪತಿಗೆ 3 ವರ್ಷ ಕಠಿನ ಶಿಕ್ಷೆ , 19,500 ರೂ. ದಂಡ

ಮಹಾನಗರ : ಎರಡು ವರ್ಷಗಳ ಹಿಂದೆ ಇಲ್ಲಿನ ಶಕ್ತಿನಗರದಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಂಭೀರ ಸ್ವರೂಪದ ಗಾಯಗೊಳಿಸಿದ ಪ್ರಕರಣದಲ್ಲಿ ಆರೋಪಿ ಗಂಡನಿಗೆ 3 ವರ್ಷಗಳ ಕಠಿನ ಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಶಕ್ತಿನಗರ ನಿವಾಸಿ ರಿಕ್ಷಾ ಚಾಲಕ ಶಿವಕುಮಾರ್‌ (45) ಶಿಕ್ಷೆಗೊಳಗಾದ ಆರೋಪಿ.

2019 ಫೆ. 20 ರಂದು ರಾತ್ರಿ ಶಿವಕುಮಾರ್‌ ಮನೆಗೆ ತೆರಳಿ ಪತ್ನಿ ಸಾಕಮ್ಮ (39) ಮತ್ತು ಪುತ್ರಿಗೆ ಹೀನಾಯವಾಗಿ ಬೈದಿದ್ದು, ಈ ಸಂದರ್ಭದಲ್ಲಿ ಪತ್ನಿ ಸಾಕಮ್ಮ ಮನೆಯಿಂದ ಹೊರಗೆ ಬಂದಾಗ ಶಿವ ಕುಮಾರ್‌ ಆಕೆಯ ಎರಡೂ ಕೈಗಳಿಗೆ ಮತ್ತು ಕಾಲುಗಳಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹೊಡೆದಿದ್ದನು ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ :ಪರ್ಕಳ ರಾ.ಹೆ.169 ರಸ್ತೆ ಅವ್ಯವಸ್ಥೆ : ಭೂ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ನೀಡಲು ಆಗ್ರಹ

ಈ ಹಲ್ಲೆಯಿಂದ ಸಾಕಮ್ಮ ಅವರ ಎರಡೂ ಮೊಣಕೈ ಮತ್ತು ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಐಪಿಸಿ ಸೆಕ್ಷನ್‌ 341, 324, 326, 407, 506 ಅನ್ವಯ ಪ್ರಕರಣ ದಾಖಲಾಗಿತ್ತು. ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಪ್ರದೀಪ್‌ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಧುಕರ ಭಾಗವತ್‌ ಅವರು ಶನಿವಾರ ಆರೋಪಿಗೆ ಐಪಿಸಿ 341 ಅನ್ವಯ 500 ರೂ. ದಂಡ, ಐಪಿಸಿ 324 ಅನ್ವಯ 2 ವರ್ಷ ಕಠಿನ ಸಜೆ ಮತ್ತು 9000 ರೂ. ದಂಡ ಹಾಗೂ ಐಪಿಸಿ 326 ಅನ್ವಯ 3 ವರ್ಷ ಕಠಿನ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿ ಎರಡೂ ಸೆಕ್ಷನ್‌ಗಳಡಿ ವಿಧಿಸಲಾಗಿರುವ ಶಿಕ್ಷೆಯನ್ನು ಏಕ ಕಾಲದಲ್ಲಿ ಅನುಭವಿಸುವಂತೆ ಆದೇಶಿಸಿದ್ದಾರೆ. ದಂಡ ಮೊತ್ತದಲ್ಲಿ 19,000 ರೂ. ಗಳನ್ನು ಸಂತ್ರಸ್ತೆ ಸಾಕಮ್ಮ ಅವರಿಗೆ ಹಾಗೂ 500 ರೂ. ಗಳನ್ನು ಸರಕಾರಕ್ಕೆ ಪಾವತಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ಈ ಪ್ರಕರಣದಲ್ಲಿ 7 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು 6 ದಾಖಲೆಗಳನ್ನು ನ್ಯಾಯಾಲಯ ಪರಿಗಣಿಸಿತ್ತು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ನೇತ್ರಾವತಿ ಅವರು ವಾದಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.