ಮಂಗಳೂರು, ಉಡುಪಿಯಲ್ಲಿ ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ


Team Udayavani, May 28, 2020, 9:49 AM IST

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ

ಮಂಗಳೂರು/ಉಡುಪಿ: ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ.1ರಿಂದ ಕೋರ್ಟ್‌ ಕಲಾಪ ಆರಂಭಿಸಬಹುದೆಂದು ಹೈಕೋರ್ಟ್‌ ತಿಳಿಸಿದ್ದರಿಂದ ಮಂಗಳೂರು ಮತ್ತು ಉಡುಪಿ ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ. 1ರಿಂದ ಪುನರಾರಂಭ ಮಾಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ.

ಮಂಗಳೂರು ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ 27 ನ್ಯಾಯಾಲಯಗಳಿದ್ದು, ಕೋವಿಡ್ ವೈರಸ್‌ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಒಂದು ಬಾರಿ ಸ್ಯಾನಿಟೈಸೇಶನ್‌ ಮಾಡಿಸಲಾಗಿದೆ. ಜೂನ್‌ 1ರ ಮೊದಲು ಅಥವಾ ಆನಂತರ ಪುನಃ ಸ್ಯಾನಿಟೈಸೇಶನ್‌ ಮಾಡಲಾಗುತ್ತಿದೆ.

ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ಹತ್ತು ನ್ಯಾಯಾಲಯಗಳಿದ್ದು ಈಗಾಗಲೇ ಒಂದು ಬಾರಿ ಸ್ಯಾನಿಟೈಸೇಶನ್‌ ಮಾಡಲಾಗಿದೆ. ಮುಂದೆ ವಾರಕ್ಕೊಮ್ಮೆ ನ್ಯಾಯಾಲಯ ಆವರಣದೊಳಗೆ ಸ್ಯಾನಿಟೈಸೇಶನ್‌ ಮಾಡಲಾಗುತ್ತದೆ.

ಜೂನ್‌ 1ರಿಂದ ಕಲಾಪ ಆರಂಭವಾಗಲಿದ್ದರೂ, ಮೊದಲ 2 ವಾರಗಳಲ್ಲಿ ವಿಚಾರಣೆಯ ವಿಷಯಗಳನ್ನು ಪಟ್ಟಿ ಮಾಡುವ ಕಲಾಪ ಮಾತ್ರ ನಡೆಯಲಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಒಳಗೆ ಕಕ್ಷಿದಾರರ ಪ್ರತಿನಿಧಿಗಳಾಗಿ ವಕೀಲರು ಮಾತ್ರ ಹಾಜರಾಗಲು ಅವಕಾಶ. ಸಾರ್ವಜನಿಕರಿಗೆ ಪ್ರವೇಶಾವಕಾಶವಿಲ್ಲ.

2 ವಾರಗಳ ಬಳಿಕ ವಿಚಾರಣೆ ವಿಷಯಗಳ ಜತೆಗೆ ಸಾಕ್ಷ್ಯ ದಾಖಲೀಕರಣದ ಪ್ರಕರಣಗಳನ್ನು ಆದ್ಯತೆ ಮೇಲೆ ಸಂಬಂಧಪಟ್ಟ ವಕೀಲರ ಜತೆ ಮಾತನಾಡಿ ಪಟ್ಟಿ ಮಾಡಲು ಅವಕಾಶವಿದೆ. ಅಧಿಕೃತ ಸಾಕ್ಷಿಗಳನ್ನು ಹೊರತುಪಡಿಸಿ ಉಳಿದಂತೆ ಇತರ ಎಲ್ಲ ಸಾಕ್ಷಿಗಳ ಹೇಳಿಕೆಗಳನ್ನು ವೀಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಡೆಸಲಾಗುತ್ತದೆ. ಉಭಯ ಕಕ್ಷಿದಾರರ ವಕೀಲರು ಉಪಸ್ಥಿತರಿದ್ದು, ಸವಾಲು ಮತ್ತು ಪಾಟಿ ಸವಾಲು ಪ್ರಕ್ರಿಯೆಗಳಲ್ಲಿ ಭಾಗವಹಿಸಬಹುದು.ಆದರೆ, ಕೋರ್ಟ್‌ ಹಾಲ್‌ನಲ್ಲಿ ಯಾವುದೇ ಸಂದರ್ಭದಲ್ಲಿಯೂ ವ್ಯಕ್ತಿಗಳ ಉಪಸ್ಥಿತಿ 20 ಕ್ಕಿಂತ ಮೀರಬಾರದು ಎಂಬುದಾಗಿ ಹೈಕೋರ್ಟ್‌ ತಿಳಿಸಿದೆ.

ದಾವೆ ಸಲ್ಲಿಸುವವರು ಪೂರ್ವಾನುಮತಿ ಪಡೆದು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬರುವುದು ಅಗತ್ಯ. ಸಾರ್ವಜನಿಕರಿಗೆ/ ಕಕ್ಷಿದಾರರಿಗೆ ಪ್ರವೇಶ ನಿಷೇಧಿಸಲಾಗಿದೆ. ಸಾಕ್ಷಿದಾರರು ಸಂಬಂಧ ಪಟ್ಟ ಸಮನ್ಸ್‌ ಹೊಂದಿದ್ದರೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.