ಪರಿಷತ್‌ನಲ್ಲಿ ಒಡಂಬಡಿಕೆ ಚರ್ಚೆ


Team Udayavani, Feb 20, 2020, 3:07 AM IST

parishatnalli

ವಿಧಾನ ಪರಿಷತ್‌: ಒಡಂಬಡಿಕೆ, ಅರ್ಹತೆ, ಅನರ್ಹತೆ, ಸಚಿವ ಸ್ಥಾನ ಕುರಿತಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹಾಗೂ ಕಾಂಗ್ರೆಸ್‌ ಸದಸ್ಯ ಎಚ್‌.ಎಂ.ರೇವಣ್ಣ ಅವರ ನಡುವೆ ಕೆಲಕಾಲ ಸ್ವಾರಸ್ಯಕರ ಚರ್ಚೆ ನಡೆಯಿತು.

ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್‌ ಅವರು ವಿಷಯ ಮಂಡನೆ ವೇಳೆ ಜನರು ನಮಗೆ ಪೂರ್ಣ ಬಹುಮತ ನೀಡಿರುವುದರಿಂದಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ ಎನ್ನುತ್ತಿದ್ದಂತೆ, ಕಾಂಗ್ರೆಸ್‌ ಸದಸ್ಯ ಎಚ್‌.ಎಂ.ರೇವಣ್ಣ ಎದ್ದುನಿಂತು, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಅನರ್ಹರಾಗಿ, ಅರ್ಹರಾಗಿ ಈಗ ಸಚಿವರಾಗಿದ್ದಾರೆ ಎನ್ನುತ್ತಿದ್ದಂತೆ ಸಚಿವ ಎಸ್‌.ಟಿ.ಸೋಮಶೇಖರ್‌, ನಾವು ಅನರ್ಹರಾಗಿ ಸರ್ಕಾರ ಬಿದ್ದಿದ್ದಕ್ಕೆ ಅತ್ಯಂತ ಖುಷಿಪಟ್ಟವರಲ್ಲಿ ನೀವೂ ಒಬ್ಬರಾಗಿದ್ದಿರಿ ಎಂದು ತಿರುಗೇಟು ನೀಡಿದರು.

ಮಧ್ಯಪ್ರವೇಶಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ಸರ್ಕಾರ ಬಂದಿರುವುದಕ್ಕೆ ಎಚ್‌.ಎಂ.ರೇವಣ್ಣ ಅವರಿಗೂ ಖುಷಿಯಿದೆ. ಎಸ್‌.ಟಿ.ಸೋಮಶೇಖರ್‌ ಹಾಗೂ ರೇವಣ್ಣ ನಡುವಿನ ಒಡಂಬಡಿಕೆ ಹಾಗೂ ವಿಶ್ವಾಸದ ಬಗ್ಗೆ ಗೊತ್ತಿದೆ ಎಂದರು. ಇದಕ್ಕೆ ಎಚ್‌.ಎಂ.ರೇವಣ್ಣ ಪ್ರತಿಕ್ರಿಯಿಸಿ, ವಿಧಾನ ಪರಿಷತ್‌ ಸದಸ್ಯರಾಗದೇ ಉಪಮುಖ್ಯಮಂತ್ರಿಯಾಗಿದ್ದೀರಿ ಎಂದು ಲಕ್ಷ್ಮಣ ಸವದಿಯವರ ಕಾಲೆಳೆದರು.

ಜನರು ನಮಗೆ ಬಹುಮತ ಕೊಟ್ಟಿರುವುದಕ್ಕೆ ಸಿಎಎ ಜಾರಿಗೆ ತಂದಿದ್ದೇವೆ. ಪ್ರಣಾಳಿಕೆಯಲ್ಲೇ ಈ ವಿಷಯ ತಿಳಿಸಲಾಗಿತ್ತು ಎಂದು ಪ್ರಾಣೇಶ್‌ ಪ್ರಸ್ತಾಪ ಮಾಡಿದರು. ಆಗ ಎಚ್‌.ಎಂ.ರೇವಣ್ಣ ಎದ್ದುನಿಂತು, ನೂರಕ್ಕೆ ನೂರಷ್ಟು ಮತ ನಿಮಗೆ ಬಂದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಯಾಗು ವುದಕ್ಕೆ ಬಹುಮತ ಇತ್ತಾ?ನಮ್ಮವರನ್ನ ಎಳೆದುಕೊಂಡು ಹೋಗಿ ಸರ್ಕಾರ ಮಾಡಿದ್ದೀರಿ ಎಂದರು.

ಆಗ ಸಚಿವರಾದ ರಮೇಶ್‌ ಜಾರಕಿಹೋಳಿ, ಎಸ್‌.ಟಿ.ಸೋಮಶೇಖರ್‌, ಬಿ.ಸಿ.ಪಾಟೀಲ್‌, ನಮ್ಮನ್ನ ಯಾರೂ ಎಳೆದುಕೊಂಡು ಹೋಗಿಲ್ಲ. ನಾವೇ ಬಿಜೆಪಿಗೆ ಬಂದು ಗೆದ್ದಿದ್ದೇವೆ ಎಂದು ತಿರುಗೇಟು ನೀಡಿದರು. ಅಲ್ಲದೇ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದಕ್ಕೆ ಬಹುಮತ ಇತ್ತಾ ಎಂದು ಸಚಿವ ಸೋಮಶೇಖರ್‌ ತಿರುಗೇಟು ನೀಡಿದರು. ನಂತರ ಮಧ್ಯಪ್ರವೇಶಿಸಿದ ಸಭಾಪತಿ ವಿಷಯಾಂತರಕ್ಕೆ ಅನುಮತಿ ನೀಡದೆ, ಸುಗಮ ಕಲಾಪಕ್ಕೆ ಅನುಮತಿ ನೀಡಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.