ಅತಂತ್ರ ಸ್ಥಿತಿಯಲ್ಲಿ ಕ್ಷೌರದಂಗಡಿಗಳು

ಸಂಕಷ್ಟದಲ್ಲಿ ಸವಿತಾ ಸಮಾಜ

Team Udayavani, Apr 24, 2020, 6:10 AM IST

ಅತಂತ್ರ ಸ್ಥಿತಿಯಲ್ಲಿ ಕ್ಷೌರದಂಗಡಿಗಳು

ಸಾಂದರ್ಭಿಕ ಚಿತ್ರ..

ಉಡುಪಿ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್‌ಗಿಂತ ಒಂದು ದಿನ ಮೊದಲೇ ಕ್ಷೌರದಂಗಡಿಗಳನ್ನು ಮುಚ್ಚಲಾಗಿತ್ತು. ರವಿವಾರಕ್ಕೆ ಒಂದು ತಿಂಗಳು ಕಳೆಯುತ್ತದೆ. ಇತರ ಕ್ಷೇತ್ರಗಳಂತೆ ಕ್ಷೌರದಂಗಡಿ ಮಾಲಕರ ಹಾಗೂ ಸಿಬಂದಿಗಳ ಪರಿಸ್ಥಿತಿಯೂ ಸದ್ಯ ಅತಂತ್ರ ಸ್ಥಿತಿಯಲ್ಲಿದೆ.

ದ.ಕ.ಜಿಲ್ಲೆಯಲ್ಲಿ 4ಸಾವಿರಕ್ಕೂ ಅಧಿಕ ಕ್ಷೌರದಂಗಡಿಗಳಿವೆ. ಈ ಪೈಕೆ ನಗರದಲ್ಲಿ 300ಕ್ಕೂ ಅಧಿಕ ಅಂಗಡಿಗಳಿವೆ. ಉಡುಪಿ ಜಿಲ್ಲೆಯಲ್ಲಿ 3 ಸಾವಿರಕ್ಕೂ ಅಧಿಕ ಕ್ಷೌರದಂಗಡಿಗಳಿವೆ. ನಗರದೊಳಗೆ 60ಕ್ಕೂ ಅಧಿಕ ಹೆಚ್ಚಿನ ಅಂಗಡಿಗಳಿವೆ. ಬೇರೆ ಜಿಲ್ಲೆ ಮತ್ತು ರಾಜ್ಯದಿಂದ ಬಂದ ಅನೇಕ ಮಂದಿ ಈ ವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಇವರಲ್ಲಿ ಕೆಲವು ಮಂದಿ ಊರಿಗೆ ಹೋಗಿದ್ದರೆ ಹೆಚ್ಚಿನ ಮಂದಿ ಇಲ್ಲಿಯೇ ಬಾಕಿಯಾಗಿದ್ದಾರೆ.

ಅತಂತ್ರ ಜೀವನ
ರಾಜ್ಯ ಸವಿತಾ ಸಮಾಜದಿಂದ ಉಭಯ ಜಿಲ್ಲೆಗಳಿಗೆ ವಿತರಿಸಲು 70 ಕಿಟ್‌ಗಳು ಬಂದಿವೆ. ತಾಲೂಕಿಗೆ 10ರಂತೆ ಕಿಟ್‌ ಮತ್ತು ಉಭಯ ಜಿಲ್ಲಾ ಸವಿತಾ ಸಮಾಜದಿಂದ 10 ಕಿಟ್‌ಗಳು ಬಿಟ್ಟರೆ ಬೇರೆ ಯಾವುದೇ ನೆರವು ಈ ವೃತ್ತಿಯಲ್ಲಿ ತೊಡಗಿರುವವರಿಗೆ ಲಭಿಸಿಲ್ಲ. ಅಂಗಡಿಯ ಬಾಡಿಗೆ, ಮನೆಬಾಡಿಗೆ, ಸಿಬಂದಿಗಳ ಖರ್ಚು ಹೀಗೆ ಹೊರೆಗಳು ಹೆಚ್ಚುತ್ತಿವೆ.

ಈ ಬಗ್ಗೆ ಜಿಲ್ಲಾ ಸವಿತಾ ಸಮಾಜಕ್ಕೆ ಸದಸ್ಯರು ಪ್ರತಿ ನಿತ್ಯ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ. ದ.ಕ.ದಲ್ಲಿ ಹೊರ ಜಿಲ್ಲೆಗಳಾದ ಶಿವಮೊಗ್ಗ, ಸಾಗರ ಧಾರವಾಡದಿಂದ ಕೆಲಸಕ್ಕೆಂದು ಬಂದವರು ಸಾವಿರಕ್ಕೂ ಹೆಚ್ಚಿನ ಮಂದಿ ಇದ್ದು ಇವರ ರೇಷನ್‌ ಕಾರ್ಡ್‌ಗಳು ಊರಿನಲ್ಲಿರುವುದರಿಂದ ಯಾವುದೇ ಆಹಾರ ಸಾಮಗ್ರಿಗಳನ್ನು ಪಡೆಯಲು ಇವರಿಗೆ ಸಾಧ್ಯವಾ ಗುತ್ತಿಲ್ಲ. ಇವರ ಮಾಲಕರೇ ಸದ್ಯಕ್ಕೆ ಇವರ ಖರ್ಚುವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಸರಕಾರದಿಂದಲ್ಲೂ ಯಾವುದೇ ಪರಿಹಾರಗಳು ಸಿಕ್ಕಿಲ್ಲ ಎಂದು ಉಭಯ ಜಿಲ್ಲೆಗಳ ಸವಿತಾ ಸಮಾಜದ ಸದಸ್ಯರು ಅಳಲು ತೋಡಿಕೊಳ್ಳುತ್ತಿದ್ದಾರೆ. ಕ್ಷೌರದಂಗಡಿಗಳಿಗೂ 4 ಗಂಟೆ ಸಮಯಾವಕಾಶ ನೀಡುವಂತೆ ಜಿಲ್ಲಾಧಿ ಕಾರಿಗಳಿಗೂ ಉಭಯ ಜಿಲ್ಲೆಗಳ ಸವಿತಾ ಸಮಾಜ ದಿಂದ ಮನವಿ ಸಲ್ಲಿಸಲಾಗಿದೆ.

ಜನರಿಗೂ ಸಮಸ್ಯೆ
ಶೇವಿಂಗ್‌, ಹೇರ್‌ ಕಟ್ಟಿಂಗ್‌ಗಾಗಿ ಕ್ಷೌರದಂಗಡಿಗಳನ್ನು ಆಶ್ರಯಿಸುತ್ತಿರುವ ಮಂದಿ ಯೂ ಸದ್ಯ ಲಾಕ್‌ಡೌನ್‌ ಅವಧಿ ಯಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ಮಕ್ಕಳಿಗೆ ಮನೆಯಲ್ಲಿಯೇ ಹೆತ್ತವರು ಹೇರ್‌ಕಟ್ಟಿಂಗ್‌ ಮಾಡಿಸುತ್ತಿದ್ದು, ಶೇವಿಂಗ್‌ಗೆಂದು ಪ್ರತೀ ವಾರ ಸೆಲೂನ್‌ಗಳಿಗೆ ಭೇಟಿ ನೀಡುತ್ತಿದ್ದ ಮಂದಿ ಕೂಡ ಮನೆಯಲ್ಲಿಯೇ ಅನಿವಾರ್ಯವಾಗಿ ಶೇವ್‌ ಮಾಡಿಕೊಳ್ಳುವಂತಾಗಿದೆ.

ಕ್ಷೌರದಂಗಡಿಗಳಲ್ಲೂ ಮುನ್ನೆಚ್ಚರಿಕೆ ಕ್ರಮ
ಕೋವಿಡ್ 19 ಸೊಂಕು ಹರಡದಂತೆ ನೋಡಿಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಮುಖ್ಯ. ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ಇದು ಅತೀ ಹೆಚ್ಚು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡುವವರು ಮಾಸ್ಕ್, ಕೈಗಳಿಗೆ ಗ್ಲೌಸ್‌, ಸ್ಯಾನಿಟೈಸರ್‌ಗಳನ್ನು ಉಪಯೋಗಿಸಬೇಕು. ಒಬ್ಬರ ಬಳಿಕ ಒಬ್ಬರನ್ನು ಕ್ಷೌರದಂಗಡಿಗಳ ಒಳಗೆ ಬರುವಂತೆ ಮತ್ತು ಖಾಯಂ ಅಲ್ಲದ ಗಿರಾಕಿಗಳನ್ನು ಪರಿಗಣಿಸದಿರುವಂತೆ ಮುಂದಿನ ಕೆಲ ಸಮಯ ಅಗತ್ಯ ನಿಯಮಗಳನ್ನು ಪಾಲಿಸುವಂತೆ ಸವಿತಾ ಸಮಾಜದಿಂದ ಈಗಾಗಲೇ ಸದಸ್ಯರಿಗೆ ಸೂಚಿಸಲಾಗಿದೆ.

ಪರಿಹಾರ ಸಿಕ್ಕಿಲ್ಲ
ಸರಕಾರದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ. ಇಲ್ಲಿನವರ ಮಾತ್ರವಲ್ಲದೆ ಹೊರ ಊರಿನಿಂದ ಬಂದ ಕಾರ್ಮಿಕರೂ ಕಷ್ಟದಲ್ಲಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಸರಕಾರದ ಎಲ್ಲ ನಿಯಮಗಳನ್ನು, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಬದ್ದರಾಗಿದ್ದು, ಕ್ಷೌರದಂಗಡಿಗಳನ್ನು ದಿನಕ್ಕೆ 4 ಗಂಟೆಯಾದರೂ ತೆರೆಯಲು ಅವಕಾಶ ನೀಡಿದರೆ ಉತ್ತಮ.
-ವಸಂತ್‌ ಎಂ., ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ

ದಿನಕ್ಕೆ ನಾಲ್ಕು ಗಂಟೆ ಅವಕಾಶ ನೀಡಿ
ಕ್ಷೌರದಂಗಡಿ ಮಾಲಕರು, ಸಿಬಂದಿಯ ಪರಿಸ್ಥಿತಿ ಅತಂತ್ರವಾಗಿದೆ. ಕೆಲಸವಿಲ್ಲದೆ ಅಂಗಡಿ ಬಾಡಿಗೆ, ಮನೆಬಾಡಿಗೆ, ಸಿಬಂದಿಗಳ ಖರ್ಚು ಹೀಗೆ ಹೊರೆಗಳು ಹೆಚ್ಚುತ್ತಿವೆ. ಜಿಲ್ಲಾ ಸವಿತಾ ಸಮಾಜಕ್ಕೆ ಸದಸ್ಯರು ಪ್ರತಿ ನಿತ್ಯ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಿಯಮಿತ ಕಾಲಾವಕಾಶದಲ್ಲಿ ಅವಕಾಶ ಕಲ್ಪಿಸಿದರೆ ಉತ್ತಮ.
-ಭಾಸ್ಕರ್‌ ಭಂಡಾರಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸವಿತಾ ಸಮಾಜ

-ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.