ಜಿಲ್ಲೆಯಲ್ಲಿ ಕೋವಿಡ್‌-19 ಅಟ್ಟಹಾಸ

ಜೂನ್‌ ತಿಂಗಳ "ಮಹಾ' ಆಪತ್ತು; ನಾಲ್ಕೇ ದಿನಗಳಲ್ಲಿ 376 ಪ್ರಕರಣ!

Team Udayavani, Jun 5, 2020, 5:38 AM IST

ಜಿಲ್ಲೆಯಲ್ಲಿ ಕೋವಿಡ್‌-19 ಅಟ್ಟಹಾಸ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌- 19 ಅಟ್ಟಹಾಸ ಮತ್ತೆ ಮುಂದುವರಿದಿದೆ. ಗುರುವಾರ ಒಂದೇ ದಿನ 92 ಪ್ರಕರಣಗಳು ದಾಖಲಾಗುವ ಮೂಲಕ ಪ್ರಕರಣಗಳ ಸಂಖ್ಯೆ 564ಕ್ಕೆ ತಲುಪಿದೆ. ಈ ಮೂಲಕ ಜೂನ್‌ ತಿಂಗಳ 1ರಿಂದ 4ರ ವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 376. ಈ ಮೂಲಕ ಉಡುಪಿ ಜಿಲ್ಲೆ ಮತ್ತೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ ಮಾ. 25ಕ್ಕೆ ದುಬಾಯಿಯಿಂದ ಆಗಮಿಸಿದ ವ್ಯಕ್ತಿಗೆ ಮೊದಲ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿತ್ತು. ಅನಂತರ ಮಾ. 29ಕ್ಕೆ ಮತ್ತೆ ಎರಡು ಪ್ರಕರಣಗಳು ದಾಖಲಾಗಿದ್ದವು. ಒಟ್ಟು ಪ್ರಕರಣಗಳ ಸಂಖ್ಯೆ 3ಕ್ಕೆ ಏರಿದಾಗ ಕಟ್ಟುನಿಟ್ಟಿನ ಲಾಕ್‌ಡೌನ್‌ ಸಹಿತ ಜಿಲ್ಲಾಡಳಿತ ತೆಗೆದುಕೊಂಡ ನಿರ್ಧಾರಗಳಿಂದ ಸರಿಸುಮಾರು 1 ತಿಂಗಳಿಗೂ ಅಧಿಕ ಕಾಲ ಸೋಂಕು ನಿಯಂತ್ರಣಕ್ಕೆ ಬಂದಿತ್ತು. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆ ಹಸುರು ವಲಯವೆಂದು ಘೋಷಣೆಯೂ ಆಯಿತು. ಆದರೆ ಅನಂತರ ಮಾತ್ರ ಪರಿಸ್ಥಿತಿ ಕೈಮೀರಿ ಹೋಯಿತು.

“ಮಹಾ’ಕಂಟಕಕ್ಕೆ ನಲುಗಿದ ಜಿಲ್ಲೆ
ಜಿಲ್ಲಾಡಳಿತದ ದಿಟ್ಟ ನಿರ್ಧಾರಗಳಿಂದ ಹತೋಟಿ ಯಲ್ಲಿದ್ದ ಪರಿಸ್ಥಿತಿ ಕಂಡು ಅದಾಗಲೇ ಅನ್ಯ ಜಿಲ್ಲೆ, ರಾಜ್ಯ ಗಳಲ್ಲಿದ್ದ ಉಡುಪಿ ಜಿಲ್ಲೆಯ ಮಂದಿ ಜಿಲ್ಲಾಡಳಿತದ ವಿರುದ್ದ ಹರಿಹಾಯಲು ಆರಂಭಿಸಿದ್ದರು. ಸಾಮಾಜಿಕ ಜಾಲತಾಣ ಗಳಲ್ಲಿಯೂ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಇಲ್ಲಸಲ್ಲದ ಟೀಕೆಗಳನ್ನು ಮಾಡಲಾಯಿತು. ಈ ನಡುವೆ ರಾಜಕೀಯದ ಹಸ್ತಕ್ಷೇಪವೂ ಆರಂಭವಾಯಿತು. ಅನಂತರ ಸೇವಾ ಸಿಂಧು ಆ್ಯಪ್‌ ಮೂಲಕ ನೋಂದಣಿ ಮಾಡಲು ಸೂಚಿಸಲಾಯಿತು. ಮೇ 5ರ ಅನಂತರ ಬಂದ ಮಹಾರಾಷ್ಟ್ರದವರನ್ನು ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಕ್ವಾರಂಟೈನ್‌ ಮಾಡಲಾಯಿತು. ಬಳಿಕ ಮತ್ತೆ 3ರಲ್ಲಿ ನಿಲುಗಡೆಯಾಗಿದ್ದ ಪ್ರಕರಣಗಳಿಗೆ ಚಾಲನೆ ಸಿಕ್ಕಿ ಗುರುವಾರ 500ರ ಗಡಿ ದಾಟುವವರೆಗೂ ಪ್ರಕರಣ ದಾಪುಗಾಲಿಟ್ಟು ಜಿಲ್ಲೆಯನ್ನು ಮತ್ತಷ್ಟು ಆತಂಕದತ್ತ ಕೊಂಡೊಯ್ದಿದೆ.

1ರಿಂದ 500ರ ವರೆಗೆ
ಮಾ. 25ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಮೇ 26ರಂದು ಪ್ರಕರಣ 100 ತಲುಪಿತು. ಎರಡೇ ದಿನಗಳಲ್ಲಿ ಮೇ 28ಕ್ಕೆ ಈ ಸಂಖ್ಯೆ 149 ಆಯಿತು. ಮೇ 29ಕ್ಕೆ 164, ಮೇ 30ಕ್ಕೆ 177, ಮೇ 31ಕ್ಕೆ 187, ಜೂ.1ಕ್ಕೆ 260, ಜೂ. 2ಕ್ಕೆ 410 ಕ್ಕೆ ತಲುಪಿದೆ. ಜೂ. 1ಕ್ಕೆ 73, 2ಕ್ಕೆ 150, 3ಕ್ಕೆ 61, 4ಕ್ಕೆ 92 ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆ 500ರ ಗಡಿಯನ್ನು ದಾಟಿದೆ.

ವರದಿ ನೆಗೆಟಿವ್‌ ಬರುವವರೆಗೂ ಹೊರಬಾರದಂತೆ ಸೂಚನೆ
ವಿದೇಶ, ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್‌ ಅವಧಿ ಮುಗಿಸಿ ಮನೆಗೆ ತೆರಳಿದವರು ಯಾವುದೇ ಕಾರಣಕ್ಕೂ ಮನೆಯಿಂದ ಹೋಂ ಕ್ವಾರಂಟೈನ್‌ ಸಂಪೂರ್ಣ ಮುಕ್ತಾಯವಾಗುವವರೆಗೂ ತೆರಳಬಾರದು. ವರದಿ ನೆಗೆಟಿವ್‌ ಬಂದ ಬಳಿಕ ಮಾತ್ರ ಅವರು ಹೊರಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಅನಗತ್ಯವಾಗಿ ಹೊರಬರುವವರ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು.
– ಜಿ. ಜಗದೀಶ್‌, ಜಿಲ್ಲಾಧಿಕಾರಿ

ಕ್ವಾರಂಟೈನ್‌
ಗೊಂದಲ ಕಾರಣ!
ವಾರದ ಹಿಂದೆಯಷ್ಟೇ 14 ದಿನಗಳ ಕ್ವಾರಂಟೈನ್‌ ಬದಲಿಗೆ 7 ದಿನಗಳ ಕ್ವಾರಂಟೈನ್‌ ಮಾಡುವ ಅವಕಾಶ ನೀಡಿರುವುದೇ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲು ಕಾರಣ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. 7 ದಿನಗಳಲ್ಲಿ ಯಾವುದೇ ರೋಗಲಕ್ಷಣ ಕಂಡುಬಾರದಿದ್ದರೆ ಪರೀಕ್ಷೆ ಇಲ್ಲದೆಯೇ ಮನೆಗೆ ತೆರಳುವ ಅವಕಾಶವಿದೆ. 7 ದಿನಗಳ ಬಳಿಕ ಕಳುಹಿಸಲಾಗಿರುವ ವರದಿ ಬರುವ ಮುನ್ನವೇ ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಕಳೆದ ನಾಲ್ಕು ದಿನಗಳ ಪ್ರಕರಣಗಳನ್ನು ಗಮನಿಸಿದಾಗ 7 ದಿನಗಳ ಕ್ವಾರಂಟೈನ್‌ ಅವಧಿ ಮುಗಿಸಿ ಮನೆಗೆ ತೆರಳಿದವರಲ್ಲಿಯೇ ಅತ್ಯಧಿಕ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.