ಕೋವಿಡ್‌ -19: ಮನೆ ಮನೆ ತಪಾಸಣೆಗೆ ಕೋರಿದ್ದ ಅರ್ಜಿ ವಜಾ


Team Udayavani, May 14, 2020, 9:01 AM IST

ಕೋವಿಡ್‌ -19: ಮನೆ ಮನೆ ತಪಾಸಣೆಗೆ ಕೋರಿದ್ದ ಅರ್ಜಿ ವಜಾ

ಸಾಂದರ್ಭಿಕ ಚಿತ್ರ

ಮುಂಬಯಿ: ಕೋವಿಡ್‌ -19 ಹರಡುವುದನ್ನು ತಡೆಯಲು ನಾಗರಿಕರ ಮನೆ-ಮನೆ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ಕೋರಿ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತ ಅನಿಲ್‌ ಗಲ್ಗಾಲಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ಭಿಲ್ವಾರಾ ಜಿಲ್ಲೆ, ರಾಜಸ್ಥಾನ ಮತ್ತು ಮುಂಬಯಿಯ ವರ್ಲಿ, ಕೋಲಿವಾಡಾದಲ್ಲಿ ಇದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದನ್ನು ಕಾರ್ಯಕರ್ತ ಉಲ್ಲೇಖೀಸಿದರೂ, ನಗರದ ಎಲ್ಲ ನಾಗರಿಕರನ್ನು ಪರೀಕ್ಷಿಸುವುದು ಪ್ರಾಯೋಗಿಕವಾಗಿ ಅಸಾಧ್ಯವೆಂದು ನ್ಯಾಯಪೀಠ ಅಭಿಪ್ರಾಯಪಟ್ಟು ಅರ್ಜಿಯನ್ನು ಅನುಮತಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತಾ ಮತ್ತು ನ್ಯಾಯಮೂರ್ತಿ ಎ. ಎ. ಸಯೀದ್‌ ಅವರ ವಿಭಾಗೀಯ ಪೀಠದ ಮುಂದೆ ವಕೀಲರಾದ ಅರವಿಂದ ತಿವಾರಿ, ದೇವೇಂದ್ರ ಷಾ ಮತ್ತು ಅಟಲ್‌ ಬಿಹಾರಿ ದುಬೆ ಅವರ ಮೂಲಕ ಗಲ್ಗಲಿ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದಾಗ, ನಗರದಲ್ಲಿ ಕೊರೊನಾ ವೈರಸ್‌ ತನ್ನ ಕಬಂಧಬಾಹನ್ನು ಹರಡಿದೆ. ಅದನ್ನು ನಿಯಂತ್ರಿಸಲು ಅಧಿಕಾರಿಗಳು ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮುಂಬಯಿ ನಾಗರಿಕರ ಮನೆ-ಮನೆಗೆ ತೆರಳಿ ಅವರನ್ನು ಪರೀಕ್ಷಿಸುವುದು ಅಗತ್ಯ ಎಂಬ ಮಾಹಿತಿಯನ್ನು ನೀಡಲಾಯಿತು. ಆದರೆ ರಾಜ್ಯ ಸರಕಾರ ಇದನ್ನು ವಿರೋಧಿಸಿತು. ನಗರದ ಜನಸಂಖ್ಯೆಯ ಪ್ರಮಾಣದಿಂದಾಗಿ ಭಿಲ್ವಾರ ಮಾದರಿ ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ಹೇಳಿತು.

ವಾದಗಳನ್ನು ಕೇಳಿದ ಬಳಿಕ ಅರ್ಜಿದಾರರ ವಿಧಾನವನ್ನು ಶ್ಲಾ ಸುವಾಗ, ಮುಂಬಯಿಯಲ್ಲಿನ ಜನಸಂಖ್ಯೆಯನ್ನು ಭಿಲ್ವಾರಾಗೆ ಹೋಲಿಸಲಾಗದ ಕಾರಣ ಮುಂಬಯಿಯಲ್ಲಿ ಮನೆ-ಮನೆಗೆ ತೆರಳಿ ನಿರ್ದೇಶನಗಳನ್ನು ನೀಡಲು ಒಲವು ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಪಿಐಎಲ್‌ ಅರ್ಜಿಯಲ್ಲಿ ಭಿಲ್ವಾರಾದ ಜನಸಂಖ್ಯೆಯ ವಿವರಗಳಿಲ್ಲ. ಭಿಲ್ವಾರಾದಲ್ಲಿ ಒಂದೇ ರೀತಿಯ ಅಥವಾ ಮುಂಬಯಿಗೆ ಹೋಲುವ ಯಾವುದೇ ವೈಶಿಷ್ಟ್ಯವನ್ನು ಸಹ ಇದು ಉಲ್ಲೇಖೀಸುವುದಿಲ್ಲ. ಸಾಂಕ್ರಾಮಿಕ ರೋಗದಿಂದ ಉಂಟಾಗುವ ಪರೀಕ್ಷಾ ಸಮಯಗಳಿಗೆ ಸಂಬಂಧಿಸಿದಂತೆ, ಮನೆ ಬಾಗಿಲಿಗೆ ಪರೀಕ್ಷಿಸಲು ಸಂಪನ್ಮೂಲಗಳು ವಿರಳ
ವಾಗಬಹುದು ಎಂದು ನ್ಯಾ| ದತ್ತಾ ಹೇಳಿದರು.

ಇಲ್ಲದಿದ್ದರೆ, ವಿಶ್ವ ಆರೋಗ್ಯ ಸಂಸ್ಥೆ ಅಥವಾ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಯಾವುದೇ ಮಾರ್ಗಸೂಚಿಗಳು ಅಥವಾ ಸಲಹೆಗಳನ್ನು ನಮ್ಮ ಗಮನಕ್ಕೆ ತರಲಾಗಿಲ್ಲ. ಇದಕ್ಕೆ ಅಧಿಕೃತ ಪ್ರತಿಸ್ಪಂದಕರು ನಿವಾಸಿಗಳ ಮನೆ-ಮನೆ ಪರೀಕ್ಷೆಯನ್ನು ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಪಿಐಎಲ್‌ ಅರ್ಜಿಯನ್ನು ತಪ್ಪಾಗಿ ಗ್ರಹಿಸಲಾಗಿದೆ ಮತ್ತು ವಜಾಗೊಳಿಸುವ ಹೊಣೆ ನಮ್ಮದಾಗಿದೆ ಎಂದು ನ್ಯಾಯಾಲಯವು ತಿಳಿಸಿ ಮನವಿಯನ್ನು ತಿರಸ್ಕರಿಸಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.