ರಾಜಧಾನಿಯಲ್ಲಿ ಸಾವಿರ ಗಡಿ ದಾಟಿದ ಕೋವಿಡ್‌ 19


Team Udayavani, Jun 21, 2020, 7:43 AM IST

one thousand

ಬೆಂಗಳೂರು: ರಾಜ್ಯದ ಕೋವಿಡ್‌ 19 ಸೋಂಕಿತ ಸಂಖ್ಯೆ 8697ಕ್ಕೇ ಏರಿಕೆಯಾದರೆ, ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಒಂದು ಸಾವಿರ ದಾಟಿದೆ. ಉಡುಪಿ, ಕಲಬುರಗಿ ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ಸಾವಿರ ದಾಟಿತ್ತು.  ಕಾರಣ, ಮಹಾರಾಷ್ಟ್ರದಿಂದ ಬಂದಿದ್ದವರ ಸಂಖ್ಯೆ ಹೆಚ್ಚಿತ್ತು. ಆದರೆ, ಬೆಂಗಳೂರಿನಲ್ಲಿ ಸಾವಿರ ದಾಟಿರುವುದು ಸ್ಥಳೀಯ ಪ್ರಕರಣವೇ ಹೆಚ್ಚಾಗಿರುವುದರಿಂದ ಹೆಚ್ಚು ಆತಂಕ ಮನೆ ಮಾಡಿದೆ.

ಶನಿವಾರ ದಾಖಲಾದ 416 ಹೊಸ ಪ್ರಕರಣಗಳಲ್ಲಿ ಬೆಂಗಳೂರಿನ 94, ಬೀದರ್‌ನ 73, ಬಳ್ಳಾರಿ ಮತ್ತು ರಾಮನಗರದಲ್ಲಿ ತಲಾ 38, ಕಲಬುರಗಿಯಲ್ಲಿ 34, ಮೈಸೂರಿನಲ್ಲಿ 22, ಹಾಸನದಲ್ಲಿ 16, ರಾಯಚೂರಿನಲ್ಲಿ 15, ಉಡುಪಿಯಲ್ಲಿ 13, ಹಾವೇರಿಯಲ್ಲಿ 12, ವಿಜಯಪುರದಲ್ಲಿ 9, ಚಿಕ್ಕಮಗಳೂರಿನಲ್ಲಿ 8, ಧಾರವಾಡ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 5, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ದಲ್ಲಿ ತಲಾ 4, ದಾವಣಗೆರೆಯಲ್ಲಿ 3, ಬಾಗಲಕೋಟೆ,  ಶಿವಮೊಗ್ಗ, ಗದಗ ಮತ್ತು ತುಮಕೂರಿನಲ್ಲಿ ತಲಾ 2, ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪತ್ತೆಯಾದ ಹೊಸ 94 ಪ್ರಕರಣ ಸೇರಿ ಸೋಂಕಿತ ಸಂಖ್ಯೆ 1076ಕ್ಕೆ ಏರಿಕೆಯಾಗಿದೆ. ಕಲಬುರಗಿ ಯಲ್ಲಿ 1160, ಉಡುಪಿಯಲ್ಲಿ 1063 ಸೋಂಕಿತರಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 181 ಮಂದಿ ರೋಗದಿಂದ ಗುಣಮುಖರಾಗಿ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕಲಬುರಗಿಯಲ್ಲಿ 42, ರಾಯಚೂರಿನಲ್ಲಿ 39, ಯಾದಗಿರಿಯಲ್ಲಿ 20, ಶಿವಮೊಗ್ಗದಲ್ಲಿ 17, ಬೀದರ್‌ನಲ್ಲಿ 12, ಧಾರವಾಡದಲ್ಲಿ 10, ಉಡುಪಿಯಲ್ಲಿ 9, ಬಳ್ಳಾರಿಯಲ್ಲಿ 8, ವಿಜಯಪುರದಲ್ಲಿ 6,  ದಾವಣಗೆರೆ 5, ದಕ್ಷಿಣ ಕನ್ನಡ 4, ಕೋಲಾರ ಹಾಗೂ ಮಂಡ್ಯ ತಲಾ 3 ಮತ್ತು ಬೆಂಗಳೂರು ನಗರ, ಚಾಮರಾಜ ನಗರ ಮತ್ತು ಬಾಗಲಕೋಟೆಯಲ್ಲಿ ತಲಾ 1 ಕೋವಿಡ್‌ 19 ಸೋಂಕಿತರು ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ  ಹೊಂದಿದ್ದಾರೆ.

ಬೆಂಗಳೂರು ಆತಂಕ ಏಕೆ?: ಶನಿವಾರ ಪತ್ರೆಯಾದ ಪ್ರಕರಣದಲ್ಲಿ ಹೊರ ದೇಶದಿಂದ ಬಂದಿರುವ 22 ಹಾಗೂ ಹೊರ ರಾಜ್ಯದಿಂದ ಬಂದಿರುವ 116 ಮಂದಿ ಸೇರಿಕೊಂಡಿದ್ದಾರೆ. ಆದರೆ, ಬೆಂಗಳೂರಿನ 94 ಪ್ರಕರಣದಲ್ಲಿ ಸುಮಾರು 20  ಮಂದಿ ಉಸಿರಾಟದ ತೊಂದರೆ ಹೊಂದಿದವರಾಗಿದ್ದಾರೆ. 5ಕ್ಕೂ ಅಧಿಕ ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸುಮಾರು 15ಕ್ಕೂ ಅಧಿಕ ಮಂದಿ ಅಂತಾರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಉಸಿರಾಟದ ತೊಂದರೆ  ಹಾಗೂ ಐಎಲ್‌ಐ ಪ್ರಕರಣ ಹೆಚ್ಚಿರುವುದರಿಂದ ಬೆಂಗಳೂರಿನಲ್ಲಿ ಆತಂಕ ಹೆಚ್ಚಾಗಿದೆ.

ವಿಧಾನಸೌಧದಲ್ಲೂ ಪಾಸಿಟಿವ್‌ ಪ್ರಕರಣ: ಕೋವಿಡ್‌ 19 ವೈರಸ್‌ ಶಕ್ತಿ ಸೌಧವನ್ನು ಆವರಿಸಿದೆ. ವಿಧಾನಸೌಧದ 3ನೇ ಮಹಡಿಯ ಮಾಧ್ಯಮ ಕೇಂದ್ರದ ಉಸ್ತುವಾರಿ ವಾರ್ತಾ ಇಲಾಖೆ ಉಪ ನಿರ್ದೇಶಕರಿಗೂ ಸೋಂಕು ತಗುಲಿದ್ದು  ವಿಧಾನಸೌಧದ 3 ಮಹಡಿಯಲ್ಲೂ ಸ್ಯಾನಿಟೈಜ್‌ ಮಾಡಲಾಗಿದೆ. ಕಳೆದ 1 ವಾರದಿಂದ ಅಧಿಕಾರಿ ರಜೆ ಮೇಲಿದ್ದರು ಎಂದು ತಿಳಿದು ಬಂದಿದ್ದು, ಅವರ ಪತ್ನಿಗೆ ಸೋಂಕು ದೃಢವಾದ ನಂತರ ತಪಾಸಣೆಗೆ ಒಳಪಟ್ಟಾಗ ಈ ಅಧಿಕಾರಿಗೂ  ಸೋಂಕು ತಗುಲಿರುವುದು ದೃಢ ಪಟ್ಟಿದ್ದು, ಕೋವಿಡ್‌ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾರ್ತಾಧಿಕಾರಿಗೆ ಸೋಂಕು ತಗುಲಿರುವುದರಿಂದ ವಿಧಾನಸೌಧವನ್ನು ಸಂಪೂರ್ಣ ಸ್ಯಾನಿಟೈಜ್‌ ಮಾಡಲಾಗಿದ್ದು, ಬಿಬಿಎಂಪಿ ಸಿಬ್ಬಂದಿ  ಪ್ರತಿ ಮಹಡಿಯಲ್ಲಿಯೂ ದ್ರಾವಣ ಸಿಂಪರಣೆ ಮಾಡಿದ್ದಾರೆ. ಭಾನುವಾರ ಸರ್ಕಾರಿ ರಜಾ ದಿನವಾಗಿರುವುದರಿಂದ ಒಂದು ದಿನ ಬಿಟ್ಟು ಸೋಮವಾರದಿಂದ ವಿಧಾನ ಸೌಧದ ಸಿಬ್ಬಂದಿ ಎಂದಿನಂತೆ ಕೆಲಸಕ್ಕೆ ಹಾಜರಾಗುತ್ತಾರೆ. ವಾರ್ತಾ  ಇಲಾಖೆಯ ಉಪ ನಿರ್ದೇಶಕರಿಗೆ ಸೋಂಕು ತಗುಲಿರುವುದರಿಂದ ವಾರ್ತಾ ಇಲಾಖೆ ವಾರ್ತಾ ಭವನಕ್ಕೂ ಸ್ಯಾನಿಟೈಜ್‌ ಮಾಡಲಾಗಿದೆ. ಈ ಮಧ್ಯೆ, ವಿಶ್ವೇಶ್ವರಯ್ಯ ಟವರ್‌ ನಲ್ಲಿಯೂ ವ್ಯಕ್ತಿಯೋರ್ವರಿಗೆ ಸೋಂಕು ತಗುಲಿರುವ ಮಾಹಿತಿ ಇದ್ದು,  ಅಲ್ಲಿಯೂ ಸ್ಯಾನಿಟೈಜ್‌ ಮಾಡಲಾಗಿದೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.