ಕೋವಿಡ್‌ ಕುರಿತ ಸುದ್ದಿಗಳು ಅನಗತ್ಯ ಆತಂಕ


Team Udayavani, Jul 11, 2020, 9:54 AM IST

ಕೋವಿಡ್‌ ಕುರಿತ ಸುದ್ದಿಗಳು ಅನಗತ್ಯ ಆತಂಕ

ಕೋವಿಡ್ ಸೋಂಕು ಆರಂಭವಾದ ಅನಂತರದಿಂದ ಅದರ ಕುರಿತು ಎಷ್ಟೊಂದು ಮಾಹಿತಿ ಹರಿದಾಡಲಾರಂಭಿಸಿದೆಯೆಂದರೆ, ಈ ಮಾಹಿತಿಯ ಹರಿವಿನಲ್ಲಿ ಸುಳ್ಳು ಸುದ್ದಿಗಳು, ಉತ್ಪ್ರೇಕ್ಷಿತ ವರದಿಗಳೇ ಮೇಲುಗೈ ಸಾಧಿಸುತ್ತಿವೆಯೇನೋ ಅನ್ನಿಸುತ್ತಿದೆ. ವೈಜ್ಞಾನಿಕ ವಲಯವು ಈ ಇನ್ಫೋಡೆಮಿಕ್’ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ, ಸರಿಯಾದ ವೈಜ್ಞಾನಿಕ ಮಾಹಿತಿಯನ್ನು ಜನರಿಗೆ ತಲುಪಿಸಲು ಪ್ರಯತ್ನಿಸುತ್ತಿದ್ದರೂ ಸತ್ಯಕ್ಕಿಂತಲೂ ಸುಳ್ಳಿಗೇ ವೇಗ ಹೆಚ್ಚು ಎನ್ನುವಂತೆ, ಸುಳ್ಳು ಸುದ್ದಿಗಳೇ ವೈರಲ್‌ ಆಗುತ್ತಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾರ್ಚ್‌ ತಿಂಗಳಲ್ಲೇ ಸಾಮಾಜಿಕ ಜಾಲತಾಣಗಳಿಗೆ, ಅದರಲ್ಲೂ ಮುಖ್ಯವಾಗಿ ಫೇಸ್ ಬುಕ್, ಟ್ವಿರ್ಟ, ಯೂ ಟ್ಯೂಬ್, ಕೋವಿಡ್ ಕುರಿತು ತಪ್ಪು ಮಾಹಿತಿ ಹರಿದಾಡದಂತೆ ಕ್ರಮ ಕೈಗೊಳ್ಳಿ’ ಎಂದು ನಿರ್ದೇಶನ ನೀಡಿತ್ತು. ಆದರೂ ಸಾಮಾಜಿಕ ಜಾಲತಾಣಗಳ ಬಳಕೆದಾರರ ಸಂಖ್ಯೆ ಯಾವ ಮಟ್ಟಕ್ಕಿದೆಎಂದರೆ, ಸುಳ್ಳು ಸುದ್ದಿಗಳು ಪತ್ತೆಯಾಗುವ ಮುನ್ನವೇ ಕೋಟ್ಯಂತರ ಜನರ ಮೊಬೈಲ್ ಗಳಿಗೆ ತಲುಪಿಬಿಟ್ಟಿರುತ್ತವೆ. ಸುಳ್ಳು ಸುದ್ದಿಗಳು ಸೃಷ್ಟಿಸುವ ಹಾವಳಿ ಒಂದೆಡೆಯಾದರೆ, ಉತ್ಪ್ರೇಕ್ಷಿತ ವರದಿಗಳು ಸೃಷ್ಟಿಸುವ ಆತಂಕ ಇನ್ನೊಂದೆಡೆ. ಅದರಲ್ಲೂ ಈ ವಿಚಾರದಲ್ಲಿ ಕೆಲವು ಮಾಧ್ಯಮಗಳಲ್ಲಿ ಬರುವ ವರದಿಗಳು, ಕಾರ್ಯಕ್ರಮಗಳು ಕೋವಿಡ್‌ ಕುರಿತು ಜನರಲ್ಲಿ ಅನಗತ್ಯ ಆತಂಕ ಸೃಷ್ಟಿ ಮಾಡುತ್ತಿವೆ.

ಜಾಗೃತಿ ಮೂಡಿಸುವುದಕ್ಕೂ ಆತಂಕ ಸೃಷ್ಟಿ ಮಾಡುವುದಕ್ಕೂ ಅಜಗಜಾಂತರವಿದೆ. ಕೊರೊನಾ ವಿಷಯದಲ್ಲಿ ಮರಣಮೃದಂಗ’, ರಣಕೇಕೆ’, ರಕ್ಕಸ ವೈರಸ…’ ಎನ್ನುವ ಪದ ಬಳಕೆಯಿಂದ ಜನರಲ್ಲಿ ಸೃಷ್ಟಿಸುತ್ತಿರುವ ಆತಂಕ ಅಷ್ಟಿಷ್ಟಲ್ಲ. ಈ ಕಾರಣಕ್ಕಾಗಿಯೇ ರಾಜ್ಯ ನಾಯಕರು, ವೈದ್ಯರು ಈ ರೀತಿಯ ಪದ ಬಳಕೆ ಮಾಡದಂತೆ ಮಾಧ್ಯಮಗಳಿಗೆ ಪದೇ ಪದೆ ವಿನಂತಿ ಮಾಡುತ್ತಲೇ ಇದ್ದಾರೆ.

ಕೋವಿಡ್‌ ಸೋಂಕಿತರ ಸಂಖ್ಯೆ ವೇಗವಾಗಿ ಏರುತ್ತಲೇ ಇದೆ ಎನ್ನುವುದು ಸತ್ಯ. ಆದರೆ ಇದೇ ವೇಳೆಯಲ್ಲಿ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆಯೂ ಉತ್ತಮವಾಗುತ್ತಿದೆ. ಅಲ್ಲದೇ, ಕೋವಿಡ್ -19ನಿಂದಾಗಿ ಮರಣ ಪ್ರಮಾಣ ಬಹಳ ಕಡಿಮೆಯಿದೆ ಎನ್ನುವ ಸಂಗತಿಯೂ ಮುಖ್ಯವಾಗಬೇಕು. ರಾಜ್ಯದ ವಿಷಯಕ್ಕೇ ಬರುವುದಾದರೆ, ನಮ್ಮಲ್ಲಿ ಮರಣ ದರ 1.57 ಪ್ರತಿಶತದಷ್ಟಿದೆ.

ಹಾಗೆಂದು ಪ್ರತೀ ಜೀವವೂ ಅಮೂಲ್ಯವಾದದ್ದು ಎನ್ನುವುದನ್ನು ಮರೆಯುವಂತಿಲ್ಲ. ಆದರೆ ಕೋವಿಡ್ ಮರಣಮೃದಂಗ ಬಾರಿಸುತ್ತಿದೆ ಎಂದಾಕ್ಷಣ ಜನರಿಗೆ, ಸೋಂಕು ತಗಲಿದವರಿಗೆಲ್ಲ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವ ಸಂದೇಶ ರವಾನೆಯಾಗುತ್ತದೆ. ಇದರ ಪರಿಣಾಮವಾಗಿ ಸೋಂಕಿತರನ್ನು ಅಪರಾಧಿಗಳಂತೆ ನೋಡುವವರ ಸಂಖ್ಯೆ ಅಧಿಕವಾಗುತ್ತದೆ. ಈ ಕಾರಣಕ್ಕಾಗಿಯೇ, ಮಾಧ್ಯಮಗಳು ಕೋವಿಡ್ ವಿರುದ್ಧದ ದೇಶದ ಹೋರಾಟಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಿ. ತಮಗಿರುವ ಶಕ್ತಿಯನ್ನು ಸಮಾಜದಲ್ಲಿ ಗುಣಾತ್ಮಕತೆ ಹೆಚ್ಚಿಸಲು ಬಳಸಲಿ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.