ಜಿಲ್ಲೆಯಲ್ಲಿ ಟನ್‌ಗಟ್ಟಲೆ ಬೆಳೆಗೆ ಕೋವಿಡ್- 19 ಹೊಡೆತ

ಶೈತ್ಯಾಗಾರವಿಲ್ಲದೆ ತೋಟಗಾರಿಕೆ ಬೆಳೆಗಾರರು ಸಂಕಷ್ಟಕ್ಕೆ

Team Udayavani, Apr 24, 2020, 6:20 AM IST

ಜಿಲ್ಲೆಯಲ್ಲಿ ಟನ್‌ಗಟ್ಟಲೆ ಬೆಳೆಗೆ ಕೋವಿಡ್- 19 ಹೊಡೆತ

ಸಾಂದರ್ಭಿಕ ಚಿತ್ರ..

ಕೋಟ: ಕೋವಿಡ್ 19 ಸಮಸ್ಯೆಯಿಂದ ತೋಟಗಾರಿಕೆ ಕ್ಷೇತ್ರ ಸಂಕಷ್ಟದಲ್ಲಿದೆ. ಹಣ್ಣು ಹಾಗೂ ತರಕಾರಿಗಳನ್ನು ಜಿಲ್ಲೆಯಲ್ಲಿ ಸಾಕಷ್ಟು ಬೆಳೆಯುತ್ತಿದ್ದು, ಅವುಗಳನ್ನು ಶೇಖರಿಸಿಟ್ಟು ಮಾರಲು ಅನುಕೂಲವಾಗುವಂಥ ಸೂಕ್ತ ವೈಜ್ಞಾನಿಕ ಗೋದಾಮು (ಶೈತ್ಯಾ ಗಾರ) ಇಲ್ಲದಿರುವುದು ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿದೆ.

ಜಿಲ್ಲೆಯಲ್ಲಿ ಒಟ್ಟು 17,386 ಹೆಕ್ಟೇರ್‌ ಗೇರು, 335 ಹೆಕ್ಟೇರ್‌ ಮಾವು ಮತ್ತು 934 ಹೆಕ್ಟೇರ್‌ನಲ್ಲಿ ಬಾಳೆ ಬೆಳೆಯಲಾಗುತ್ತದೆ. ಮಾವು ಕಟಾವಿಗೆ ಒಂದೆರಡು ವಾರ ತಡವಿರುವುದರಿಂದ ಸಮಸ್ಯೆ ಇನ್ನೂ ಆರಂಭವಾಗಿಲ್ಲ. ಆದರೆ ಬಾಳೆ ಹಣ್ಣು, ಕಲ್ಲಂಗಡಿ ಹಾಗೂ ನಾನಾ ತರಕಾರಿ ಬೆಳೆಗಾರರು ಕೈಗೆ ಸಿಕ್ಕ ಬೆಲೆಗೆ ತಮ್ಮ ಫ‌ಸಲನ್ನು ಕೊಡುವ ಪರಿಸ್ಥಿತಿ ಉದ್ಭವಿಸಿದೆ. ಬಾಳೆ ಹಣ್ಣು, ಎಲೆಗೆ ಬೇಡಿಕೆ ಕುಸಿದಿದೆ. ಗೇರು ಬೀಜಕ್ಕೂ ಕೆ.ಜಿ.ಗೆ 100-120 ರೂ. ಇದ್ದ ಧಾರಣೆ 70-75 ರೂ.ಗೆ ಕುಸಿದಿದೆ.

ಕಲ್ಲಂಗಡಿ ಕಟಾವಿನ ಋತು
ಜಿಲ್ಲೆಯಲ್ಲಿ 55 ಹೆಕ್ಟೇರ್‌ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆಯಲಾಗುತ್ತದೆ. ಉಡುಪಿ, ಕುಂದಾಪುರ ಭಾಗದಲ್ಲಿ ಕಲ್ಲಂಗಡಿ ಉತ್ತಮ ಇಳುವರಿ ನೀಡಿದ್ದು, ಲಾಭದಾಯಕವೂ ಆಗಿದೆ. ಪ್ರಸ್ತುತ ಕಲ್ಲಂಗಡಿ ಕಟಾವಿಗೆ ಬಂದಿದ್ದು ಕಳೆದ ಬಾರಿಗಿಂತ ಕಡಿಮೆ ಬೆಲೆಗೆ ಮಾರುವಂಥ ಅನಿವಾರ್ಯ ಬೆಳೆಗಾರರದ್ದು. ಕಾರ್ಕಳ ಭಾಗದಲ್ಲಿ ಸಪೋಟಾ ಬೆಳೆಗಾರರ ಸಂಖ್ಯೆ ಅಧಿಕವಿದ್ದು, ಜಿಲ್ಲೆಯಲ್ಲಿ ಒಟ್ಟು 89 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತದೆ.

ಗೋದಾಮು ವ್ಯವಸ್ಥೆ ಇಲ್ಲ
ರೈತರು ಬೆಳೆದ ಹಣ್ಣು-ತರಕಾರಿಗಳನ್ನು ಹಾಳಾಗದಂತೆ ವೈಜ್ಞಾನಿಕ ವಿಧಾನದ ಮೂಲಕ ಸಂರಕ್ಷಿಸಿಡುವ ಗೋದಾಮು ವ್ಯವಸ್ಥೆ ಜಿಲ್ಲೆಯಲ್ಲಿ ಇಲ್ಲದಿರುವುದು ಬೆಳೆ ಗಾರರ ಸಂಕಷ್ಟವನ್ನು ಹೆಚ್ಚಿಸಿದೆ. ಗೋದಾಮು ವ್ಯವಸ್ಥೆ ಇದ್ದಲ್ಲಿ ಸ್ವಲ್ಪ ದಿನ ಕಾಯುವ ಅವಕಾಶವಿತ್ತು. ಈಗ ಹಾಳಾಗಿ ಒಂದು ಪೈಸೆಯೂ ಸಿಗದೆ ಇರುವು ದಕ್ಕಿಂತ ಬಂದದಷ್ಟು ಬರಲಿ ಎಂದು ಮಾರಾಟ ಮಾಡಬೇಕಿದೆ. ಈ ಪರಿಸ್ಥಿತಿ ಬದಲಾಗಬೇಕು ಎನ್ನುತ್ತಾರೆ ಬೆಳೆಗಾರರು.

ಹಾಪ್‌ಕಾಮ್ಸ್‌ನಲ್ಲೂ ಕನಿಷ್ಠ ಖರೀದಿ
ರೈತರ ಬೆಳೆಗಳನ್ನು ಹಾಪ್‌ಕಾಮ್ಸ್‌ನಲ್ಲಿ ಖರೀದಿಸುವ ವ್ಯವಸ್ಥೆ ಇದೆ. ಆದರೆ ಇಲ್ಲೂ ಶೇಖರಣೆಗೆ ವ್ಯವಸ್ಥೆ ಇಲ್ಲದಿರುವುದರಿಂದ ದಿನಂಪ್ರತಿ ಮಾರಾಟ ಮಾಡುವಷ್ಟು ಮಾತ್ರ ಹಣ್ಣು-ತರಕಾರಿಗಳನ್ನು ಖರೀದಿಸ ಲಾಗುತ್ತದೆ. ಈ ಪೈಕಿ ಅದರ ಸದಸ್ಯರಿಗೆ ಆದ್ಯತೆ ಹೆಚ್ಚು ನೀಡಲಾಗುತ್ತದೆ.

ಸಹಕಾರ ನೀಡಲಾಗುವುದು
ರೈತರು ಬೆಳೆದ ಹಣ್ಣು-ತರಕಾರಿಗಳನ್ನು ಮಾರಾಟ ಮಾಡಲು ಯಾವುದೆ ನಿರ್ಬಂಧವಿಲ್ಲ ಮತ್ತು ಪಾಸ್‌ ಕೂಡ ಅಗತ್ಯವಿಲ್ಲ. ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳು ಗದ್ದೆಯಲ್ಲಿ ಹಾಳಾದ ಯಾವುದೇ ಪ್ರಕರಣ ನಡೆದಿಲ್ಲ. ಅಗತ್ಯವಿದ್ದಲ್ಲಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿದಲ್ಲಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗುತ್ತದೆ.
– ಭುವನೇಶ್ವರಿ, ಜಿಲ್ಲಾ ನಿರ್ದೇಶಕಿ ತೋಟಗಾರಿಕೆ ಇಲಾಖೆ ಉಡುಪಿ

ಸಂಪರ್ಕ
ರೈತರಿಗೆ ತೋಟಗಾರಿಕೆ ಹಣ್ಣು-ತರಕಾರಿಗಳ ಮಾರಾಟ ಹಾಗೂ ಅಗತ್ಯ ಮಾಹಿತಿಗಳು ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಜಿಲ್ಲಾ ನಿರ್ದೇಶಕರು 9448999225
ಎ.ಎಚ್‌.ಒ.- 9900910948, ಎ.ಎಚ್‌.ಒ- 9742489714

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ: 76187 74529

ರಾಜೇಶ್‌ ಗಾಣಿಗ, ಅಚ್ಲಾಡಿ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.