ಕೋವಿಡ್‌ 19 ಸೋಂಕು; ಕರ್ನಾಟಕ 11ನೇ ಸ್ಥಾನಕ್ಕೆ


Team Udayavani, Jun 5, 2020, 7:50 AM IST

corona-karnataa

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಜ್ಯವಾರು ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನಕ್ಕೇರಿದೆ. ಗುರುವಾರ ಮಧ್ಯಾಹ್ನದವರೆಗೂ ರಾಜ್ಯ 12ನೇ ಸ್ಥಾನದಲ್ಲಿತ್ತು.  ಸಂಜೆ 287 ಸೋಂಕು ಪ್ರಕರಣಗಳೊಂದಿಗೆ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 4,320ಕ್ಕೆ ಹೆಚ್ಚಳವಾಗಿದ್ದು, ರಾಜ್ಯವಾರು ಪಟ್ಟಿ ಯಲ್ಲಿ ಆಂಧ್ರ ಪ್ರದೇಶವನ್ನು ಹಿಂದಿಕ್ಕಿ ಒಂದು  ಸ್ಥಾನ ಮೇಲೇರಿದೆ. ಬಿಹಾರ 4,420 ಪ್ರಕರಣಗಳೊಂದಿಗೆ  10ನೇ ಸ್ಥಾನದಲ್ಲಿ, ಆಂಧ್ರಪ್ರದೇಶ 4,112 ಪ್ರಕರಣಗಳೊಂದಿಗೆ 12ನೇ ಸ್ಥಾನದಲ್ಲಿದೆ.

ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆ: ಈ ನಡುವೆ, ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟಾರೆ ಕೋವಿಡ್‌ 19 ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಈ ಪೈಕಿ 2,651 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ  1,610 ಮಂದಿ ಗುಣ ಮುಖರಾಗಿದ್ದಾರೆ. ಬಾಕಿ 59ರಲ್ಲಿ 57 ಮಂದಿ ಚಿಕಿತ್ಸೆ ಫ‌ಲಕಾರಿ ಯಾಗದೆ, ಇಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಗುರುವಾರದ 257 ಪ್ರಕರಣಗಳಲ್ಲಿ 155 ಮಂದಿ ಹೊರ ರಾಜ್ಯದಿಂದ, ಒಬ್ಬರು  ಹೊರದೇಶದಿಂದ ಬಂದಿದ್ದು, 101ಮಂದಿ ಸ್ಥಳೀಯರಾಗಿದ್ದಾರೆ. ಅತಿ ಹೆಚ್ಚು ಉಡುಪಿಯಲ್ಲಿ 92, ರಾಯಚೂರಲ್ಲಿ 88 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ಮಂಡ್ಯ (15), ಹಾಸನ (15) ದಾವಣಗೆರೆ (13)ಹಾಗೂ ಬೆಳಗಾವಿ ಯಲ್ಲಿ (12) ಎರಡಂಕಿಯಷ್ಟು ಪ್ರಕರಣಗಳು ವರದಿಯಾಗಿವೆ.

ಸೋಂಕಿತರು ಗುಣಮುಖ: ರಾಜ್ಯದಲ್ಲಿ ಗುರುವಾರ 106 ಮಂದಿ ಕೋವಿಡ್‌ 19 ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 1,610ಕ್ಕೆ ತಲುಪಿದೆ. ಮಂಡ್ಯದಲ್ಲಿ 52, ಉಡುಪಿಯಲ್ಲಿ 20, ದಕ್ಷಿಣ ಕನ್ನಡದಲ್ಲಿ 11,  ದಾವಣಗೆರೆಯಲ್ಲಿ 7, ಚಿಕ್ಕಮಗಳೂರಿನಲ್ಲಿ 5, ಶಿವಮೊಗ್ಗದಲ್ಲಿ 4, ಬಳ್ಳಾರಿಯಲ್ಲಿ 3, ಧಾರವಾಡದಲ್ಲಿ 2, ವಿಜಯಪುರ, ಮೈಸೂರಿನಲ್ಲಿ ತಲಾ ಒಬ್ಬ ಸೋಂಕಿತರು ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ  2,651 ಮಂದಿಯಲ್ಲಿ 13 ಮಂದಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಳಿದವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಗುರುವಾರ ನಡೆದ ಒಟ್ಟು 12,268 (ಒಟ್ಟು ಇಲ್ಲಿಯವರಗೂ 3,47,093) ಸೋಂಕು ಪರೀಕ್ಷೆಗಳು ನಡೆಸಿದ್ದು, ಪಾಸಿಟಿವ್‌ -257,  ನೆಗೆಟಿವ್‌-11,468 ವರದಿ ಬಂ ದಿವೆ. ಸದ್ಯ ರಾಜ್ಯದಲ್ಲಿ 37,733 ಮಂದಿ ನಿಗಾವಣೆಯಲ್ಲಿದ್ದಾರೆ.

ಉಡುಪಿ ಮತ್ತೆ ಅಗ್ರಸ್ಥಾನಕ್ಕೆ; ಉಡುಪಿಯಲ್ಲಿ ದಿನದ ಅತಿ ಹೆಚ್ಚು 92 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಮತ್ತೆ ಜಿಲ್ಲಾವಾರು ಸೋಂಕಿತರ  ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮಂಗಳವಾರ 150 ಸೋಂಕಿತರೊಂದಿಗೆ ಮೊದಲ  ಸ್ಥಾನದಲ್ಲಿದ್ದ ಉಡುಪಿ ಬುಧವಾರದ ಮಟ್ಟಿಗೆ ಕೆಳಗಿಳಿದಿತ್ತು. ಕಲಬುರಗಿ ಮೊದಲ ಸ್ಥಾನಕ್ಕೆ ಬಂದಿತ್ತು. ಗುರುವಾರ ಕಲಬುರಗಿಯಲ್ಲಿ ಯಾವುದೇ ಪ್ರಕರಣಗಳಿಲ್ಲದ ಕಾರಣ ಮತ್ತು ಉಡುಪಿಯಲ್ಲಿ 92 ಮಂದಿ ಸೋಂಕಿತರು ಕಂಡು ಬಂದ  ಹಿನ್ನೆಲೆ ಮತ್ತೆ ಅಗ್ರಸ್ಥಾನಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 564 ಸೋಂಕು ಪ್ರಕರಣಗಳಿದ್ದು, 481 ಸಕ್ರಿಯ ಪ್ರಕರಣಗಳಿವೆ.

76 ಮಂದಿಗೆ ಸೋಂಕು, ಇಲಾಖೆ ಲೋಪ: ರಾಯಚೂರಿನಲ್ಲಿ ಹಿಂದೆಂದಿಗಿಂತಲೂ ಹೆಚ್ಚು 88 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಮಹಾರಾಷ್ಟ್ರದಿಂದ ಬಂದು ಸೋಂಕಿತರಾದ ಐದು ಮಂದಿಯಿಂದ ಬರೋಬ್ಬರಿ 76 ಮಂದಿಗೆ  ಸೋಂಕು ಹರಡಿದೆ. ಮಹಾರಾಷ್ಟ್ರ ಹಿನ್ನೆಲೆಯವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತಿದೆ. ಆದರೂ, ಅವರಿಂದ ಸ್ಥಳೀಯ ಮಟ್ಟದಲ್ಲಿ ಸೋಂಕು ಹರಡಿರುವುದು ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆಯಿಂದ ಕ್ವಾರಂಟೈನ್‌  ಲೋಪವಾಗಿರುವುದು ಮತ್ತು ಸೋಂಕಿತರು ಮನೆಗೆ ತೆರಳಿದ ನಂತರ ಸೋಂಕು ಪರೀಕ್ಷೆ ವರದಿ ಬಂದಿರುವುದು ಸ್ಥಳೀಯರಲ್ಲಿ ಸೋಂಕು ಹೆಚ್ಚಳಕ್ಕೆ ಕಾರಣ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.