ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸರಕಾರ
ಕೋವಿಡ್ 19 ಲಾಕ್ಡೌನ್: ಹೈಕೋರ್ಟ್ ಕಲಾಪ ಸ್ಥಗಿತ
Team Udayavani, Apr 7, 2020, 6:05 AM IST
ಬೆಂಗಳೂರು: ಕೋವಿಡ್ 19 ಸೋಂಕು ರಾಜ್ಯಕ್ಕೆ ಮಾರಕವಾಗಿ ಪರಿಣಮಿಸಿದ್ದರೆ ಹೈಕೋರ್ಟ್ನಲ್ಲಿ ಹಲವು ಪ್ರಕರಣಗಳಲ್ಲಿ ಸದ್ಯದ ಲಾಕ್ಡೌನ್ ಸರಕಾರದ ಪಾಲಿಗೆ “ವರ’ವಾಗಿದೆ.
ರಾಜ್ಯಾದ್ಯಂತ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು, ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು, ಘನತ್ಯಾಜ್ಯ ವಿಲೇವಾರಿ ಮತ್ತಿತರ ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ವಕೀಲರು, ಸಂಘ-ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿರುವ ಮತ್ತು ಹೈಕೋರ್ಟ್ ಖುದ್ದು ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಮಾರ್ಚ್ ಕೊನೆಯ ವಾರ ಮತ್ತು ಎಪ್ರಿಲ್ ಮೊದಲು ಹಾಗೂ ಎರಡನೇ ವಾರದಲ್ಲಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ಗೆ ಅನುಪಾಲನ ವರದಿಗಳನ್ನು ಸಲ್ಲಿಸಬೇಕಿತ್ತು. ಆದರೆ ಲಾಕ್ಡೌನ್ ಹಿನ್ನೆಲೆಯಲ್ಲಿ ಸದ್ಯ ಕೋರ್ಟ್ ಕಲಾಪಗಳು ಸ್ಥಗಿತಗೊಂಡಿರುವುದರಿಂದ ರಾಜ್ಯ ಸರಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದೆ.
ಹಲವಾರು ಪಿಐಎಲ್ಗಳಲ್ಲಿ ಹೈಕೋರ್ಟ್ ರಾಜ್ಯ ಸರಕಾರ, ಅದರ ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮುಖ್ಯವಾಗಿ ಬಿಬಿಎಂಪಿಯ ಬೆನ್ನಿಗೆ ಬಿದ್ದು ಕೆಲಸ ಮಾಡಿಸುತ್ತಿತ್ತು. ಆದೇಶಗಳ ಪಾಲನೆಗೆ ಗಡುವು ನೀಡಿತ್ತು. ಸರಕಾರದ ವೈಫಲ್ಯಗಳನ್ನು ಕಟು ಮಾತುಗಳಲ್ಲಿ ಟೀಕಿಸಿತ್ತು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಾಟಿ ಬೀಸಿತ್ತು. ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಎಚ್ಚರಿಕೆ ನೀಡಿತ್ತು. ನ್ಯಾಯಾಲಯದ ಆದೇಶ ಪಾಲಿಸದ ಕೆಲವು ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಇಲಾಖೆಗಳ ವಿರುದ್ಧ ನ್ಯಾಯಾಂಗ ನಿಂದನೆ ಎಚ್ಚರಿಕೆ ನೀಡಿತ್ತು. ಆನೇಕ ಪ್ರಕರಣಗಳಲ್ಲಿ ಸರಕಾರ ನ್ಯಾಯಾಲಯದ ಮುಂದೆ ಕಾನೂನು ಇಕ್ಕಟ್ಟಿಗೆ ಸಿಕ್ಕಿಕೊಂಡಿತ್ತು. ಇದೀಗ ಅವೆಲ್ಲವೂ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದೆ. ಸರಕಾರ, ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಹೈಕೋರ್ಟ್ ಸ್ವತಃ ದಾಖಲಿಸಿಕೊಂಡಿರುವ ಪಿಐಎಲ್ಗೆ ಸಂಬಂಧಿಸಿದಂತೆ ಆದೇಶ ಪಾಲನೆಯ ವರದಿಯನ್ನು ಸರಕಾರ ಹೈಕೋರ್ಟ್ನ ಮುಂದಿಡಬೇಕಿತ್ತು. ಅದೇ ರೀತಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಕ್ರಮ ಕಟ್ಟಡಗಳ ತೆರವು ವಿಚಾರ ಸಹ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ತಾತ್ಕಾಲಿಕ ರಿಲೀಫ್
ಘನತ್ಯಾಜ್ಯ ವಿಲೇವಾರಿ, ರಸ್ತೆ ಗುಂಡಿಗಳು ಮುಚ್ಚುವುದು, ಜೈಲುಗಳಲ್ಲಿ ಅಧಿಕ ಸಂಖ್ಯೆಯ ಕೈದಿಗಳಿರುವುದು ಮತ್ತು ಮೂಲಸೌಕರ್ಯಗಳ ಕೊರತೆ, ವಿಪತ್ತು ನಿರ್ವಹಣ ಕಾಯ್ದೆ ಅನುಷ್ಠಾನದಲ್ಲಿನ ಲೋಪಗಳು, ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ ಅನುಷ್ಠಾನಕ್ಕೆ ವಿಳಂಬ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ನೇಮಕಾತಿ ವಿವಾದ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ, ಖಾಲಿ ಪೊಲೀಸ್ ಹುದ್ದೆಗಳ ಭರ್ತಿ, ಸರಕು ವಾಹನಗಳಲ್ಲಿ ಪ್ರಯಾಣಿಕರ ಸಂಚಾರ, ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಬಾಲ ನ್ಯಾಯ ಕಾಯ್ದೆ ಅನುಷ್ಠಾನ, ಮಕ್ಕಳು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಟಿಕತೆ, ಕಲಬುರಗಿ ಕೋಟೆ ಒತ್ತುವರಿ, ಕೊಳೆಗೇರಿ ನಿವಾಸಿಗಳ ಎತ್ತಂಗಡಿ ಮೊದಲಾದ ಪಿಐಎಲ್ಗಳಲ್ಲಿ ಕೋರ್ಟ್ ಆದೇಶಗಳ ಪಾಲನೆ ವಿಚಾರದಲ್ಲಿ ಸರಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು