ಕ್ಯಾಲಿಫೋರ್ನಿಯಾ : ಲಾಕ್‌ಡೌನ್‌ ಉಲ್ಲಂಘಿಸಿ ಕಡಲ ತೀರ ವಿಹಾರ


Team Udayavani, Apr 29, 2020, 3:28 PM IST

ಕ್ಯಾಲಿಫೋರ್ನಿಯಾ : ಲಾಕ್‌ಡೌನ್‌ ಉಲ್ಲಂಘಿಸಿ ಕಡಲ ತೀರ ವಿಹಾರ

ಕ್ಯಾಲಿಫೋರ್ನಿಯ: ಅಮೆರಿಕದ ವಿವಿಧ ರಾಜ್ಯಗಳಲ್ಲಿ ಕೋವಿಡ್‌ 19 ಅಬ್ಬರ ಜೋರಾಗಿದ್ದಾರೆ, ಕ್ಯಾಲಿಫೋರ್ನಿಯಾದಲ್ಲಿ ಸೋಂಕು ಹರಡುವಿಕೆಯ ಭೀತಿಯ ಮಧ್ಯೆಯೂ ಜನರು ಕಡಲ ತೀರದಲ್ಲಿ ವಿಹರಿಸತೊಡಗಿದ್ದಾರೆ.

ಇವೆಲ್ಲಾ ಮಾಮೂಲು. ಎಷ್ಟು ದಿನ ಮನೆಯೊಳಗೇ ಇರೋದು ಯಾರಿಗೋ ಹೆದರಿಕೊಂಡು ಎನ್ನುವಂತಿದೆ ಜನರ ವರ್ತನೆ. ಇದಕ್ಕೆ ಪೂರಕವಾಗಿ ಮನೆಯಲ್ಲೇ ಇರಿ ಎಂಬ ಸರಕಾರಗಳ ಆದೇಶವನ್ನು ಧಿಕ್ಕರಿಸಿ, ಶನಿವಾರ ಆರೆಂಜ್‌ ಕೌಂಟಿಯ ನ್ಯೂಪೋರ್ಟ್‌ ಕಡಲತೀರದಲ್ಲಿ ಸಾವಿರಾರು ಜನರು ಸೇರಿದ್ದರು. ಆರೆಂಜ್‌ ಕೌಂಟಿ ರಿಜಿಸ್ಟರ್‌ ವರದಿ ಮಾಡಿರುವಂತೆ ಶುಕ್ರವಾರ ಶುಕ್ರವಾರ 40 ಸಾವಿರ ಜನರು ಕಡಲ ತೀರದಲ್ಲಿದ್ದರು. ಕೇವಲ ಈ ಒಂದು ಪ್ರದೇಶವಲ್ಲದೇ ಲಾಸ್‌ ಏಂಜಲೀಸ್‌ ಮತ್ತಿತರ ಕಡೆಯೂ ಇಂಥ ಬೆಳವಣಿಗೆಗಳು ನಡೆದಿವೆ.

ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ, ಯಾವುದೇ ಸುರಕ್ಷಾ ಕ್ರಮಗಳನ್ನು ಅನುಸರಿಸಿಲ್ಲ. ಇದರಿಂದ ಕೋವಿಡ್‌-19 ನಿಯಂತ್ರಣಕ್ಕೆ ಅಡ್ಡಿಯಾಗಬಹುದು ಎನ್ನುತ್ತಾರೆ ಅಧಿಕಾರಿಗಳು.

ಕೆಂಡಮಂಡಲವಾದ ಗವರ್ನರ್‌‌
ಈ ಕುರಿತು ಕ್ಯಾಲಿಫೋರ್ನಿಯಾದ ಗವರ್ನರ್‌ ಗೈವಿನ್‌ ನ್ಯೂಸಮ್‌ ಕಡಲತೀರಗಳಲ್ಲಿ ಕಿಕ್ಕಿರಿದ್ದು ಸೇರಿದ ಜನರ ವಿರುದ್ಧ ಕೆಂಡಾಮಂಡಲವಾಗಿದ್ದು, “ಸೋಂಕಿಗೆ ಯಾವುದೇ ವಾರಾಂತ್ಯ ಇರುವುದಿಲ್ಲ ಅಥವಾ ಅದು ವಾರಾಂತ್ಯದಲ್ಲಿ ರಜೆ ತೆಗೆದುಕೊಂಡು ಮನೆಗೆ ತೆರಳುವುದಿಲ್ಲ’ ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜತೆಗೆ ಬೀಚ್‌ ನಲ್ಲಿ ವಿಹರಿಸಿದ್ದವರ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿದ್ದಾರೆ.

ಕ್ಷಣಿಕದಲ್ಲಿ ವ್ಯರ್ಥ
ಈ ಕುರಿತು ಲಾಸ್‌ ಏಂಜಲೀಸ್‌ನ ಮೇಯರ್‌ಎರಿಕ್‌ ಗಾರ್ಸೆಟ್ಟಿ ಟ್ವೀಟ್‌ ಮಾಡಿದ್ದು, “ಒಂದು ತಿಂಗಳಿನಿಂದ ಪಟ್ಟ ಶ್ರಮವನ್ನು ಕ್ಷಣಿಕದಲ್ಲಿ ವ್ಯರ್ಥವಾಗಲು ಬಿಡುವುದಿಲ್ಲ’ ಎಂದಿದ್ದಾರೆ. ಲಾಸ್‌ ಏಂಜಲೀಸ್‌ ಕೌಂಟಿಯಲ್ಲಿ, ಎಲ್ಲಾ ಕಡಲತೀರಗಳ ಪ್ರದೇಶವನ್ನು ಮುಚ್ಚಲು ಆದೇಶಿಸಲಾಗಿದೆ.

ಪಕ್ಕದ ರಾಜ್ಯದವರು ಕಾರಣವೇ?
ಈ ಹಿಂದೆ ಟೆಕ್ಸಾಸ್‌, ಜಾರ್ಜಿಯಾ, ಮಿಸ್ಸಿಸ್ಸಿಪ್ಪಿ, ದಕ್ಷಿಣ ಕೆರೊಲಿನಾ ಮತ್ತು ಇತರ ಪ್ರದೇಶಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸಡಿಲುಗೊಳಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಮುಕ್ತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಜತೆಗೆ ಇಲ್ಲಿನ ಪ್ರದೇಶಗಳ ಬೀಚ್‌ ಮತ್ತು ಪಾರ್ಕ್‌ ಗಳ ಭೇಟಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ರಾಜ್ಯ ಸರಕಾರಗಳ ನಡೆ ಬಗ್ಗೆಯೂ ಟೀಕೆ ವ್ಯಕ್ತವಾಗುತ್ತಿದ್ದು, ಸೋಂಕು ಹರಡುವಿಕೆ ನಡುವೆಯೂ ಈ ನಿರ್ಧಾರ ಕೈಗೊಂಡಿರುವುದಕ್ಕೆ ನಾಗರಿಕರ ಆಕ್ರೋಶ ಕೇಳಿಬರುತ್ತಿದೆ.
ವಾರಾಂತ್ಯದಲ್ಲಿ ಉಷ್ಣಾಂಶ ಪ್ರಮಾಣ ಏರಿಕೆಯಾಗಿದೆ. ಈ ತಾಪಮಾನವನ್ನು ಸಹಿಸಲಾಗದೇ ಜನರು ಮನೆಯಿಂದ ಹೊರಬೀಳುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.