ಶಕ್ತಿಸೌಧದಲ್ಲಿ ಕೋವಿಡ್‌ 19 ಕಾಟ: ಆತಂಕ


Team Udayavani, Jul 2, 2020, 5:57 AM IST

anxity

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ನಂತರ ರಾಜ್ಯದಲ್ಲಿ ಸೋಂಕು ವೇಗವಾಗಿ ಹೆಚ್ಚುತ್ತಿದ್ದು, ವಿಧಾನಸೌಧ, ವಿಕಾಸಸೌಧ, ಶಾಸಕರ ಭವನಗಳಲ್ಲಿ ಸೋಂಕು ಪ್ರಕರಣ ಕಂಡು ಬಂದಿರುವುದರಿಂದ ಶಕ್ತಿ ಕೇಂದ್ರದಲ್ಲಿ ಕಾರ್ಯ  ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಆತಂಕಕ್ಕೆ ಒಳಗಾಗಿದ್ದಾರೆ. ವರ್ಕ್‌ ಫ್ರಂ ಹೋಂ ಅವಕಾಶದ ಬಯಕೆಯಲ್ಲಿದ್ದಾರೆ.

ಮಾರ್ಚ್‌ ತಿಂಗಳಲ್ಲಿ ಲಾಕ್‌ಡೌನ್‌ ಆರಂಭವಾದಾಗ ತುರ್ತು ಸೇವೆ ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಶೇ.  33 ರಷ್ಟು ಮಾತ್ರ ಸಿಬ್ಬಂದಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಮೇ 18 ಲಾಕ್‌ಡೌನ್‌ ಸಡಿಲಿಕೆ ಬಳಿಕ ಎಲ್ಲ ಇಲಾಖೆಗಳ ಶೇ. 100 ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಿರುವಂತೆ ಸೂಚಿಸಲಾಯಿತು.

ಹೆಚ್ಚಿದ ಆತಂಕ: ಜೂ. 1ರಿಂದ ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಸೋಂಕಿನ ಪ್ರಮಾಣದಲ್ಲೂ ಗಣನೀಯ ಏರಿಯಾಗಿದೆ. ಇದರ ಪರಿಣಾಮ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಶಾಸಕರ ಭವನ, ವಿಶ್ವೇಶ್ವರಯ್ಯ  ಟವರ್‌, ಸಿಎಂ ಗೃಹ ಕಚೇರಿ ಕೃಷ್ಣಾ, ಕನ್ನಡ ಭವನದಲ್ಲಿ ಕೋವಿಡ್‌ 19 ಪ್ರಕರಣಗಳು ದೃಢಪಟ್ಟಿವೆ. ಇಲ್ಲಿ ಕಾರ್ಯನಿರ್ವಹಿಸುವ ಐವತ್ತು ವರ್ಷ ಮೀರಿದವರು, ಗರ್ಭಿಣಿ ಹೆಣ್ಣುಮಕ್ಕಳು ಆತಂಕಗೊಂಡಿದ್ದಾರೆ.

ಅಲ್ಲದೆ ಬಸ್‌ಗಳಲ್ಲಿ  ಸಂಚರಿಸುವ ಸಿಬ್ಬಂದಿ ಸೋಂಕು ಪ್ರಕರಣಗಳಿಂದ ಭಯಭೀತರಾಗಿದ್ದಾರೆ. ಸಮೂಹ ವಾಹನದಲ್ಲಿ ಎಷ್ಟೇ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸಿದರೂ ಸೋಂಕು ಹೇಗೆ ಬರುತ್ತದೆ ಎಂಬ ಆತಂಕ ಹೆಚ್ಚಿರುವ ಕಾರಣ ಮನೆ  ಬಿಟ್ಟು ಕಚೇರಿಗೆ ಬರಲು ಭಯ ಆವರಿಸಿದೆ. ಅಲ್ಲದೆ ಹೊರಗಡೆ ಹೋಗಿ ಬರುವ ಸಿಬ್ಬಂದಿಗೆ ಮನೆಯಲ್ಲಿ, ನೆರೆಹೊರೆಯಲ್ಲಿ ಆತಂಕದಿಂದಲೇ ನೋಡುವ ಸ್ಥಿತಿಯಿದೆ.

ಲಾಕ್‌ಡೌನ್‌ಗೆ ಆಗ್ರಹ: ಈಗ ಸೋಂಕು ಹೆಚ್ಚುತ್ತಿರುವುದರಿಂದ ಇಲಾಖೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲರ ಆರೋಗ್ಯದ ದೃಷ್ಟಿಯಿಂದ ಲಾಕ್‌ ಡೌನ್‌ ಆರಂಭದಲ್ಲಿ ಜಾರಿಗೊಳಿಸಿದಂತೆ ಶೇ 33 ರಷ್ಟು ಸಿಬ್ಬಂದಿ ಮಾತ್ರ  ಕೆಲಸ ಮಾಡಲು ಅವಕಾಶ ಕಲ್ಪಿಸಿ ಉಪ ಕಾರ್ಯದರ್ಶಿ ಮೇಲಿನ ಶ್ರೇಣಿಯ ಸಿಬ್ಬಂದಿ ಮಾತ್ರ ಕಡ್ಡಾಯ ಹಾಜರಿಗೆ ಅವಕಾಶ ನೀಡಿ ಉಳಿದ ಸಿಬ್ಬಂದಿಗೆ ಅಗತ್ಯಬಿದ್ದಾಗ ಕಚೇರಿಗೆ ಬರುವಂತೆ ಸೂಚನೆ ನೀಡಬೇಕು ಎಂಬ ಮಾತುಗಳು ಶಕ್ತಿ  ಸೌಧದಲ್ಲಿ ಕೇಳಿ ಬರುತ್ತಿವೆ.

ಮನವಿಗೆ ಮುಂದಾದ ನೌಕರರ ಸಂಘ; ಸಿಎಂ ಯಡಿಯೂರಪ್ಪ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ಭೇಟಿ ಮಾಡಿ ಅಧಿಕೃತ ಮನವಿ ಸಲ್ಲಿಸಲು ರಾಜ್ಯ ಸರ್ಕಾರಿ  ನೌಕರರ ಸಂಘ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಹಣಕಾಸು ಇಲಾಖೆ ಈ ವ್ಯವಸ್ಥೆ ಜಾರಿಗೊಳಿಸಿರುವು ದರಿಂದ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತುರ್ತು ಸೇವೆ ಒದಗಿಸುವ ಇಲಾಖೆಗಳ ನ್ನು ಹೊರತು ಪಡೆಸಿ  ಉಳಿದ ಇಲಾಖೆಗಳ ಶೇ. 33 ಸಿಬ್ಬಂದಿ ಮಾತ್ರ ಕೆಲಸ ಮಾಡಲು ಅವಕಾಶಕ್ಕಾಗಿ ಮನವಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸೌಧ, ವಿಕಾಸಸೌಧದಲ್ಲಿಯೇ ಕೋವಿಡ್‌ 19 ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ನೌಕರರಲ್ಲಿ ಆತಂಕ  ಚ್ಚಾಗಿದೆ. ಹೀಗಾಗಿ ಮೊದಲಿನಂತೆ ಶೇ. 33 ಸಿಬ್ಬಂದಿ ಮಾತ್ರ ಕೆಲಸಕ್ಕೆ ಹಾಜರಿಗೆ ಅವಕಾಶ ನೀಡಿ, ಉಳಿದವರನ್ನು  ಅಗತ್ಯಬಿದ್ದಾಗ ಕರೆಯಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸುವಂತೆ ಸಿಎಂ ಮತ್ತು ಮುಖ್ಯಕಾರ್ಯದರ್ಶಿಯನ್ನು ಮನವಿ ಮಾಡಲು ನಿರ್ಧರಿಸಿದ್ದೇವೆ.
-ಷಡಕ್ಷರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.