ಕೋವಿಡ್ 19 ಹೊಡೆತ: ಕರಾವಳಿ ಅಭಿವೃದ್ಧಿಗೆ ಕರಿಛಾಯೆ!

ಸಂಸದರ ಅನುದಾನಕ್ಕೆ ಕತ್ತರಿ ; ಹೊಸ ಹೂಡಿಕೆಗಳಿಗೂ ಕಂಪೆನಿಗಳ ಹಿಂದೇಟು

Team Udayavani, Apr 28, 2020, 6:35 AM IST

ಕೋವಿಡ್ 19 ಹೊಡೆತ: ಕರಾವಳಿ ಅಭಿವೃದ್ಧಿಗೆ ಕರಿಛಾಯೆ!

ಸಾಂದರ್ಭಿಕ ಚಿತ್ರ..

ಮಂಗಳೂರು: ಕೋವಿಡ್ 19 ಹಾವಳಿಯಿಂದಾಗಿ ದೇಶದ ಅಭಿವೃದ್ಧಿ ಪರ್ವಕ್ಕೆ ಬಹುದೊಡ್ಡ ಪೆಟ್ಟು ಬಿದ್ದಿದೆ. ಭವಿಷ್ಯದಲ್ಲಿ ಕರಾವಳಿಯ ಅಭಿವೃದ್ಧಿ ಕಾಮಗಾರಿಗಳಿಗೆ ಕರಿಛಾಯೆ ಎದುರಾಗುವ ಸಂಭವವಿದೆ.

ಸರಕಾರಿ ಕಾಮಗಾರಿಗಳಿಗೆ ಬಂಡವಾಳ ಹೂಡಲು ಸರಕಾರ ಹಿಂದೆ – ಮುಂದೆ ನೋಡುವ ಪರಿಸ್ಥಿತಿ ಇದ್ದರೆ ಖಾಸಗಿ ಕಂಪೆನಿ, ಕೈಗಾರಿಕೆಗಳು ಹೊಸ ಯೋಜನೆ ಕೈಗೆತ್ತಿಕೊಳ್ಳಲು ಹಿಂದೇಟು ಹಾಕುವ ಸಾಧ್ಯತೆ ಅಧಿಕ.

ಸಂಸದರ ನಿಧಿಯನ್ನು ಎರಡು ಆರ್ಥಿಕ ವರ್ಷಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಈ ಮೂಲಕ ಅಭಿವೃದ್ಧಿಗಾಗಿ ಸಿಗುವ 10 ಕೋ.ರೂ.ಗಳಿಗೂ ಕತ್ತರಿ ಬೀಳಲಿದೆ. ಈ ಅನುದಾನದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ. ಶಾಸಕರ ನಿಧಿಯೂ ಸ್ಥಗಿತಗೊಳ್ಳುವ ಸಾಧ್ಯತೆ ಇರುವುದರಿಂದ ಕರಾವಳಿಯ ಹೊಸ ಯೋಜನೆಗಳಿಗೆ ಅನುದಾನದ ಕೊರತೆ ಎದುರಾಗಲಿದೆ.

ಸ್ಥಳೀಯಾಡಳಿತಗಳ ಅನುದಾನದಲ್ಲಿಯೂ ಕಡಿತ ಸೂತ್ರ ಜಾರಿಯಾಗಬಹುದು. ಇದರಿಂದಲೂ ಯೋಜನೆಗಳಿಗೆ ಅನುದಾನ ಕೊರತೆ ಎದುರಾಗಬಹುದು.

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬರುವ ವಿಶೇಷ ಅನುದಾನಗಳೂ ಕಡಿತವಾಗುವ ಸಾಧ್ಯತೆ ಯಿದ್ದು, ಕರಾವಳಿಯ ಹೆದ್ದಾರಿ, ರೈಲ್ವೇ ಯೋಜನೆಗಳ ವೇಗಕ್ಕೆ ಅಡ್ಡಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಎಂಆರ್‌ಪಿಎಲ್‌ ಸಹಿತ ಪ್ರತಿಷ್ಠಿತ ಕೈಗಾರಿಕೆಗಳು ಹೊಸ ಹೂಡಿಕೆಗೆ ಮನಸ್ಸು ಮಾಡುವ ಕಾಲದಲ್ಲಿ ಮತ್ತು ರಿಯಲ್‌ ಎಸ್ಟೇಟ್‌ ಚೇತರಿಕೆ ಕಾಣಬಹುದಾದ ಸಂದರ್ಭದಲ್ಲಿ ಕೋವಿಡ್ 19 ಹೊಡೆತ ಕರಾವಳಿಯ ಆರ್ಥಿಕ ರಂಗಕ್ಕೆ ಹಿನ್ನಡೆ ಎಂದೇ ಹೇಳಬೇಕು. ಕರಾವಳಿಯ ಸಾವಿರಾರು ಸಣ್ಣ ಕೈಗಾರಿಕೆ, ಕಂಪೆನಿ, ಸಂಸ್ಥೆಗಳ ಮುಂದಿನ ಹೆಜ್ಜೆ ಮತ್ತು ಅಲ್ಲಿರುವ ಕಾರ್ಮಿಕರ ಉದ್ಯೋಗವೂ ಪ್ರಶ್ನಾರ್ಥಕ ಚಿಹ್ನೆಯಡಿ ಇವೆ.

ಇಲಾಖೆ ಅನುದಾನಕ್ಕೆ ಕತ್ತರಿ
ಸರಕಾರಿ ಇಲಾಖೆಗಳಿಗೆ ವಾರ್ಷಿಕ ನಿಗದಿತ ಅನುದಾನಕ್ಕೂ ಕತ್ತರಿ ಪ್ರಯೋಗ ನಡೆಯುವ ಸಾಧ್ಯತೆ ದಟ್ಟವಾಗಿದೆ. ಕೆಲವು ಇಲಾಖೆಗಳ ಅನುದಾನವನ್ನು ಕೋವಿಡ್ 19 ನಿಭಾವಣೆಗಾಗಿ ಬಳಕೆ ಮಾಡಲಾಗುವುದು ಎಂದು ಉಲ್ಲೇಖೀಸಲಾಗಿದೆ. ಕಳೆದ ಮಳೆಗಾಲ ಕರಾವಳಿಯ ವಿವಿಧೆಡೆ ಸಂಭವಿಸಿದ ಅನಾಹುತಗಳ ಕಹಿ ನೆನಪು ಮಾಸುವ ಮುನ್ನವೇ ಕೋವಿಡ್ 19 ಎದುರಾಗಿದೆ. ಇನ್ನೊಂದು ಮಳೆಗಾಲವೂ ಸನಿಹದಲ್ಲಿದೆ. ಈ ಬಾರಿ ಮಳೆ ಪರಿಸ್ಥಿತಿ ಹೇಗಿರಬಹುದು ಎಂಬ ಆತಂಕವೂ ಸಹಜ.

ಕೋವಿಡ್ 19 ದಿಂದ ಕರಾವಳಿ ಅಭಿವೃದ್ಧಿಯ ಎಲ್ಲ ವಿಭಾಗಗಳಿಗೆ ಹೊಡೆತ ಬಿದ್ದಿದೆ. ಆರ್ಥಿಕತೆ ಮತ್ತೆ ಚೇತರಿಕೆ ಕಾಣಲು ಸಾಕಷ್ಟು ಸಮಯ ಬೇಕಾಗಬಹುದು. ಸರಕಾರ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ಬಹುಮುಖ್ಯ ಹೆಜ್ಜೆಗಳ ಮೇಲೆ ನಿರೀಕ್ಷೆಯಿದೆ.
– ಐಸಾಕ್‌ ವಾಝ್,
ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.