ಮಂಗಳೂರು ನಗರಕ್ಕೂ ವಕ್ಕರಿಸಿದ ಕೋವಿಡ್ 19

ಸಾಮಾಜಿಕ ಅಂತರ ಕಾಪಾಡಿ ರೋಗ ಹರಡದಂತೆ ಎಚ್ಚರ ಅಗತ್ಯ

Team Udayavani, Apr 28, 2020, 5:15 AM IST

ಮಂಗಳೂರು ನಗರಕ್ಕೂ ವಕ್ಕರಿಸಿದ ಕೋವಿಡ್ 19

ಮಂಗಳೂರು: ಜಗತ್ತಿನಾದ್ಯಂತ ತಾಂಡವವಾಡುತ್ತಿರುವ ಮಹಾಮಾರಿ ಕೋವಿಡ್ 19 ಈಗ ಮಂಗಳೂರು ನಗರಕ್ಕೂ ವಕ್ಕರಿಸುವ ಮೂಲಕ, ನಗರ ವ್ಯಾಪ್ತಿಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸರಕಾರದ ಸೂಚನೆ ಧಿಕ್ಕರಿಸಿ ಲಾಕ್‌ಡೌನ್‌ ಉಲ್ಲಂಘಿಸಿ ಸುತ್ತಾಡುತ್ತಿದ್ದವರಲ್ಲಿ ಈಗ ಭಯದ ವಾತಾವರಣ ನಿರ್ಮಾಣವಾಗಿದೆ.

ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಲಶೇಖರ ನಿವಾಸಿ 80 ವರ್ಷದ ಮಹಿಳೆ ಹಾಗೂ ಅವರ 45 ವರ್ಷದ ಪುತ್ರನ ಗಂಟಲು ದ್ರವ ಪರೀಕ್ಷೆಯ ವರದಿ ಸೋಮವಾರ ಬಂದಿದ್ದು, ಇವರಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.

ಕೋವಿಡ್ 19 ದಲ್ಲಿ ಬಂಟ್ವಾಳ ಇತ್ತೀಚಿನವರೆಗೆ ಹಾಟ್‌ಸ್ಪಾಟ್‌ ಆಗಿತ್ತು. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕೋವಿಡ್ 19 ಸೋಂಕಿತರಿಬ್ಬರ ಸಾವು ಜಿಲ್ಲೆಯ ಪಾಲಿಗೆ ಸಾಕಷ್ಟು ಆತಂಕವನ್ನೇ ಸೃಷ್ಟಿಸಿತ್ತು. ಇದಕ್ಕೂ ಮೊದಲು ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲೂ ಒಂದು ಪ್ರಕರಣ ಕಾಣಿಸಿಕೊಂಡಿತ್ತು.

(ಸದ್ಯ ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆ ಸೇರಿದ್ದಾರೆ). ಆದರೆ ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಕ್ತಿನಗರ ನಿವಾಸಿಗಳಿಬ್ಬರಲ್ಲಿ ಸೋಂಕು ದೃಢಪಡುವುದರೊಂದಿಗೆ ಮಂಗಳೂರು ನಗರಕ್ಕೂ ಸೋಂಕು ವ್ಯಾಪಿಸಿದಂತಾಗಿದೆ. ಶಕ್ತಿನಗರದ ಕಕ್ಕೆಬೆಟ್ಟು ಪ್ರದೇಶವನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌ ಅವರು ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗಡಿ ಗುರುತು ಮಾಡಿದ್ದಾರೆ.

22 ಮನೆ ಪರಿಸರ ಸೀಲ್‌ಡೌನ್‌
ಶಕ್ತಿನಗರದ ಪದವು ಗ್ರಾಮದ ಕಕ್ಕೆಬೆಟ್ಟು ವ್ಯಾಪ್ತಿಯನ್ನು ಕಂಟೈನ್‌ಮೆಂಟ್‌ ಪ್ರದೇಶವಾಗಿ ಜಿಲ್ಲಾಡಳಿತ ಘೋಷಿಸಿದ್ದು, ಜನರ ಆಗಮನ-ನಿರ್ಗಮನವನ್ನು ನಿರ್ಬಂಧಿಸಿದೆ.

ಚಿತ್ತರಂಜನ್‌ ಮನೆಯಿಂದ ನೀಲಾಕ್ಷ ಮನೆ ವ್ಯಾಪ್ತಿಯವರೆಗೆ ಹಾಗೂ ತಿಪ್ಪೇಸಪ್ಪ ಮನೆಯಿಂದ ಗ್ರೌಂಡ್‌ವರೆಗಿನ ವ್ಯಾಪ್ತಿ ಕಂಟೈನ್‌ಮೆಂಟ್‌ ವ್ಯಾಪ್ತಿಯಾಗಿದ್ದು, ಇಲ್ಲಿ ಎಲ್ಲ ಚಟು ವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಈ ವ್ಯಾಪ್ತಿಯಲ್ಲಿ 22 ಮನೆಗಳಿದ್ದು, 5 ಅಂಗಡಿ, 1 ಕಚೇರಿ ಇದೆ. ಹಾಲು, ದಿನಸಿ ಸಹಿತ ಎಲ್ಲ ವಸ್ತುಗಳ ಮಾರಾಟ, ವಾಹನ, ಜನ ಸಂಚಾರಕ್ಕೆ ಇಲ್ಲಿ ನಿರ್ಬಂಧವಿದೆ. 120 ಜನರು ಈ ಪ್ರದೇಶದಲ್ಲಿ ವಾಸವಾಗಿದ್ದಾರೆ. ಇಲ್ಲಿಂದ 5 ಕಿ.ಮೀ. ದೂರ (ವಾಮಂಜೂರು ಜಂಕ್ಷನ್‌, ಉರ್ವ ಮಾರ್ಕೆಟ್‌, ಪದವಿನಂಗಡಿ, ಬಂಟ್ಸ್‌ ಹಾಸ್ಟೆಲ್‌ ಜಂಕ್ಷನ್‌) ಬಫರ್‌ ಝೋನ್‌ ವ್ಯಾಪ್ತಿಯಾಗಿದೆ. ಮಂಗಳೂರು ಪಾಲಿಕೆ ಆಯುಕ್ತರನ್ನು ಇನ್ಸಿಡೆಂಟ್‌ ಕಮಾಂಡರ್‌ ಆಗಿ ಜಿಲ್ಲಾಧಿಕಾರಿ ನೇಮಿಸಿದ್ದು, ಕಂಟೈನ್‌ಮೆಂಟ್‌ ಪ್ರದೇಶದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಪಾಲಿಕೆಯಿಂದ ವ್ಯವಸ್ಥೆ
ಶಕ್ತಿನಗರದ ಪದವು ಗ್ರಾಮದ ಕಕ್ಕೆಬೆಟ್ಟು ವ್ಯಾಪ್ತಿಯನ್ನು ಕಂಟೈನ್‌ಮೆಂಟ್‌ ಪ್ರದೇಶವಾಗಿ ಘೋಷಿಸಲಾಗಿದೆ. ಇಲ್ಲಿನ ಸುಮಾರು 22 ಮನೆ ವ್ಯಾಪ್ತಿ ಪ್ರದೇಶಗಳಿಗೆ ನಿರ್ಬಂಧ ಅನ್ವಯವಾಗಲಿದೆ. ಅಲ್ಲಿನವರಿಗೆ ಹಾಲು, ದಿನಸಿ ಸಹಿತ ಅಗತ್ಯ ವಸ್ತುಗಳ ಪೂರೈಕೆಗೆ ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗುವುದು ಎಂದು ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಹೇಳಿದರು.

ಪುರಭವನದ ಆವರಣದಲ್ಲಿ ವಲಸೆ ಕಾರ್ಮಿಕರ ಉಚಿತ ಆರೋಗ್ಯ ಶಿಬಿರದಲ್ಲಿ ತಪಾಸಣೆಗೊಂಡ ಬಳಿಕ ಸೈಕಲ್‌ನಲ್ಲಿ ಸಂಬಂಧಿಯ ಸಹಾಯದಿಂದ ವಾಪಾಸಾಗುತ್ತಿರುವ ಹಿರಿಯ ಮಹಿಳೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.