ಕೋವಿಡ್: ಸಂಪಾದನೆ ಹಾದಿಹಿಡಿದ ಶೇ.30 ಮಕ್ಕಳು!
Team Udayavani, Aug 7, 2021, 2:38 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ ಸಂದಿಗ್ಧತೆ ಲಾಕ್ಡೌನ್ ಹಾಗೂ ಇದರ ಪರಿಣಾಮವಾಗಿ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭವಾಗದೇ ಇದ್ದರೂ ಶೇ.70ರಷ್ಟು ಮಕ್ಕಳು ಒಂದಲ್ಲೊಂದು ರೀತಿಯಲ್ಲಿ ಕಲಿಕೆಯಲ್ಲಿ ತೊಡಗಿದ್ದರೆ, ಶೇ.30ರಷ್ಟು ಮಕ್ಕಳು ಸಂಪಾದನೆಯಲ್ಲಿ ತೊಡಗಿದ್ದರು
ಎಂಬ ಆತಂಕಕಾರಿ ಮಾಹಿತಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸಮೀಕ್ಷೆಯಲ್ಲಿ
ಬಹಿರಂಗಪಡಿಸಿದೆ.
ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಯಿಂದ ಒಟ್ಟು 3,672 ಶಾಲೆಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಡಿಎಸ್ಇಆರ್ಟಿ ಸಮೀಕ್ಷೆ
ನಡೆಸಿದೆ. ಶೇ.70ರಷ್ಟು ವಿದ್ಯಾರ್ಥಿಗಳು ಮೊಬೈಲ್, ಟಿವಿ, ಲ್ಯಾಪ್ ಟಾಪ್ ಮೊದಲಾದ ತಾಂತ್ರಿಕ ಉಪಕರಣಗಳನ್ನು ಬಳಸಿ ಒಂದಲ್ಲೊಂದು
ರೀತಿಯಲ್ಲಿ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೇಳಿದ ಖಾತೆ ಸಿಗದೆ ಇದ್ದರೆ ಶಾಸಕನಾಗಿಯೇ ಇರುತ್ತೇನೆ: ಆನಂದ್ ಸಿಂಗ್ ಅಸಮಾಧಾನ
ಈ ಪೈಕಿ ಶೇ 45ರಷ್ಟು ಮಕ್ಕಳು ಪಾಠದ ಜತೆಗೆ ಮೊಬೈಲ್ನಲ್ಲಿ ಆಟದಲ್ಲೂ ಸಕ್ರಿಯರಾಗಿದ್ದಾರೆ. ಶೇ. 50ರಷ್ಟು ಮಕ್ಕಳು ಇತರ
ಕಾರ್ಯಕ್ರಮಗಳನ್ನೂ ವೀಕ್ಷಿಸಿದ್ದಾರೆ. ಉಳಿದ ಶೇ.30ರಷ್ಟು ಮಕ್ಕಳು ಕಲಿಕೆಬಿಟ್ಟು ಕೆಲಸ, ಕೂಲಿ,ಪೋಷಕರಿಗೆ ನೆರವಾಗಲು ಸಂಪಾದನೆಯಲ್ಲಿ
ತೊಡಗಿದ್ದಾರೆ. ಇದು ಅತ್ಯಂತ ಅಪಾಯಕಾರಿ ಅಂಶ ಎಂದು ಡಿಎಸ್ಇಆರ್ಟಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕೋವಿಡ್ ಅವಧಿಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಕಲಿಕೆ, ಕೌಶಲ್ಯಗಳಿಕೆ, ಆಟೋಟ, ಸುತ್ತಾಟ, ಮಾತುಕತೆಗಳಲ್ಲಿ ಅತ್ಯಂತ ಹೆಚ್ಚು ತೊಡಗಿಸಿ ಕೊಂಡಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ಸ್ವ ಕಲಿಕೆಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಖಾಸಗಿ ಶಾಲೆಗಳ ಮಕ್ಕಳು ಶಿಕ್ಷಣ ಅಥವಾ ಕಲಿಕೆಗಾಗಿ ಮೊಬೈಲ್ ಸೇರಿದಂತೆ ಇತರೆ ಉಪಕರಣಗಳ ಮೂಲಕ ಶಿಕ್ಷಕರು ಮತ್ತು ಹಿರಿಯರನ್ನು ಆಶ್ರಯಿದ್ದಾರೆ ಎಂಬುದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ