ಕೋವಿಡ್ ನಿಯಂತ್ರಣ : ಜನತೆಯ ಸಹಕಾರ ಬಲುಮುಖ್ಯ


Team Udayavani, Aug 7, 2021, 7:15 AM IST

ಕೋವಿಡ್ ನಿಯಂತ್ರಣ : ಜನತೆಯ ಸಹಕಾರ ಬಲುಮುಖ್ಯ

ಕೊರೊನಾ ಮೂರನೇ ಅಲೆ ಭೀತಿ ಈಗಾಗಲೇ ಶುರುವಾಗಿದೆ. ನಮ್ಮ ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ

ಎರಡನೇ ಅಲೆಯ ಆತಂಕವೇ ಇನ್ನೂ ಅಂತ್ಯವಾಗಿಲ್ಲ. ಆಗಲೇ ನಮ್ಮಲ್ಲಿ ಮೂರನೇ ಅಲೆ ಬರುವ ಸಾಧ್ಯತೆಗಳ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆಯೇ, ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ.

ಶುಕ್ರವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ, ವಿಜಯಪುರ, ಬೆಳಗಾವಿ, ಕಲಬುರಗಿ, ಬೀದರ್‌, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿಯಾಗಿದೆ. ಇನ್ನು ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಜಾರಿಯಾಗಿದೆ. ಸದ್ಯ ರಾತ್ರಿ 10ರಿಂದ ನೈಟ್‌ ಕರ್ಫ್ಯೂ ಇದ್ದು, ಇದು ಒಂದು ಗಂಟೆ ವಿಸ್ತರಣೆಯಾಗಿದೆ. ಕೊರೊನಾ ಹರಡುವಿಕೆಯನ್ನು ತಡೆಯುವ ಸಲುವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾಗೆಯೇ ತಜ್ಞರ ಶಿಫಾರಸಿನ ಆಧಾರದ ಮೇಲೆಯೇ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಸದ್ಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನ ಪ್ರಮಾಣವನ್ನು ತಡೆಯಲು ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಮತ್ತು ವೀಕೆಂಡ್‌ ಕರ್ಫ್ಯೂ ಜಾರಿ ಮಾಡಿರುವುದು ಉತ್ತಮವೇ ಆಗಿದೆ. 2ನೇ ಅಲೆಯ ಆರಂಭದಲ್ಲಿ ಇಂಥ ಕಠಿನ ಕ್ರಮ ತೆಗೆದುಕೊಂಡಿದ್ದರೆ, ಅದರ ಪರಿಣಾಮವನ್ನು ತಡೆಯಬಹುದಾಗಿತ್ತು. ಆದರೆ ಆಗ ಒಂಚೂರು ಮೈಮರೆತ ಕಾರಣದಿಂದಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡಲು ಕಾರಣವಾಯಿತು. ಈಗ ಸರಕಾರ ಮುಂಚಿತವಾಗಿಯೇ ಎಚ್ಚೆತ್ತುಕೊಂಡಿದೆ. ಗಡಿಯಲ್ಲೇ ಕೊರೊನಾ ತಡೆದರೆ, ರಾಜ್ಯದೆಲ್ಲೆಡೆ ಹರಡುವ ಪ್ರಮಾಣವೂ ಕಡಿಮೆಯಾಗುತ್ತದೆ.

ಸರಕಾರವೇನೋ ಕರ್ಫ್ಯೂ ರೀತಿಯ ಕಠಿನ ಕ್ರಮ ತೆಗೆದುಕೊಂಡಿದೆ. ವೀಕೆಂಡ್‌ ಕರ್ಫ್ಯೂವನ್ನು ಕೆಲವು ಜಿಲ್ಲೆಗಳಿಗಷ್ಟೇ ಸೀಮಿತಗೊಳಿಸಿದೆ. ಆದರೆ ಇಲ್ಲಿ ಸಾರ್ವಜನಿಕರ ಪಾತ್ರವೂ ಜವಾಬ್ದಾರಿಯುತವಾಗಿರಬೇಕಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಜನತೆ
ಮೈಮರೆತು ಮಾಸ್ಕ್ ಹಾಕದೇ ಇರುವುದು, ಗುಂಪು ಗುಂಪಾಗಿ ಸೇರುವುದು, ಮದುವೆ ಸೇರಿದಂತೆ ಇತರ ಸಭೆ ಸಮಾರಂಭಗಳಲ್ಲಿ ಹೆಚ್ಚು ಹೆಚ್ಚಾಗಿ ಸೇರುವುದನ್ನು ಮಾಡಿದರೆ, ಅದರಿಂದ ಕೊರೊನಾ ಜಾಸ್ತಿಯಾಗುವ ಸಂಭವ ಹೆಚ್ಚು. ಜನ ತಮ್ಮ ಪಾತ್ರವನ್ನು ಅರಿತುಕೊಂಡು ಎಚ್ಚರಿಕೆಯಿಂದ ನಡೆದುಕೊಂಡರೆ, ರಾಜ್ಯಾದ್ಯಂತ ಲಾಕ್‌ ಡೌನ್‌ ರೀತಿಯ ಅಥವಾ ವೀಕೆಂಡ್‌ ಕರ್ಫ್ಯೂ ರೀತಿಯ ಕ್ರಮಗಳನ್ನು ತಪ್ಪಿಸಬಹುದು. ಅಷ್ಟೇ ಅಲ್ಲ, ಕೊರೊನಾ ಮೂರನೇ ಅಲೆಯಿಂದಲೂ ಬಜಾವ್‌ ಆಗಬಹುದು.
ಇನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆ ಹೊರತುಪಡಿಸಿ 9,10 ಮತ್ತು ಪಿಯುಸಿ ತರಗತಿಗಳನ್ನು ತೆರೆಯಲು ಅನುಮತಿ
ನೀಡಲಾಗಿದೆ. ಆ.23ರಿಂದಲೇ ಇವು ಬಾಗಿಲು ತೆರೆಯಲಿವೆ.

ಸಾಧ್ಯವಾದಷ್ಟು ಮಟ್ಟಿಗೆ ಈ ಶಾಲೆಗಳಲ್ಲಿ ಎಲ್ಲ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಈ ವಿಚಾರದಲ್ಲಿಯೂ ಎಲ್ಲರ ಜವಾಬ್ದಾರಿ ಅತ್ಯಂತ ಮುಖ್ಯವಾದದ್ದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.