ಕೋವಿಡ್ ಪ್ರಭಾವದಿಂದ ಕೋಚಿಮುಲ್ಗೆ 20 ಕೋಟಿ ನಷ್ಟ: ಎನ್.ಸಿ.ವೆಂಕಟೇಶ್
Team Udayavani, Nov 15, 2020, 10:15 PM IST
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟಕ್ಕೆ ಸುಮಾರು 20 ಕೋಟಿ ರೂಗಳ ನಷ್ಟ ಉಂಟಾಗಿದೆ ಆದರೂ ಸಹ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ನಲ್ಲಕದ್ರೇನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಹಾಗೂ ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.
ತಾಲೂಕಿನ ನಲ್ಲಕದ್ರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಸದಸ್ಯರಿಗೆ ಬೋನಸ್ ಹಣವನ್ನು ವಿತರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಭಾವದಿಂದ ಕೋಚಿಮುಲ್ಗೆ ಸುಮಾರು 20 ಕೋಟಿ ರೂಗಳು ನಷ್ಟ ಸಂಭವಿಸಿದೆ ಕಳೆದ ಎರಡು ತಿಂಗಳಿಂದ ಮಾತ್ರ ಲಾಭ ಬರುತ್ತಿದ್ದು ಹಾಲು ಮಾರಾಟ ಹೆಚ್ಚಾದ ಬಳಿಕ ಹಾಲಿನ ದರವನ್ನು ಏರಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದೆಂದ ಅವರು ಈಗಾಗಲೇ 3 ಸಾವಿರ ಮೆಟ್ರಿಕ್ ಹಾಲಿನ ಪುಡಿ ದಾಸ್ತಾನುವಿದೆ ಆದರೂ ಸಹ ಹಾಲು ಉತ್ಪಾದಕರಿಗೆ ಪ್ರತಿ ವರ್ಷ ಬೋನಸ್ ನೀಡುತ್ತಾ ಬಂದಿದ್ದು ಪ್ರಸಕ್ತ ಸಾಲಿನಲ್ಲಿ ನಲ್ಲಕದ್ರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 4 ಲಕ್ಷ ರೂಗಳ ಲಾಭ ಬಂದಿದ್ದು ಅದರಲ್ಲಿ ಒಂದೂವರೆ ಲಕ್ಷ ರೂಗಳು ಬೋನಸ್ ಹಣವನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ನೀಡಿದ್ದೇವೆ ಎಂದರು.
ಇದನ್ನೂ ಓದಿ :ಭಾರತದ ವಿರುದ್ಧ ಸಾಕ್ಷ್ಯಗಳು ಪಾಕ್ನ ಕಟ್ಟುಕತೆ: ಅನುರಾಗ್ ಶ್ರೀವಾಸ್ತವ
ಕೇವಲ 20 ಲೀಟರ್ ಹಾಲಿನಿಂದ ಆರಂಭವಾದ ಡೇರಿ ಇದೀಗ ಪ್ರತಿನಿತ್ಯ ಸುಮಾರು 800 ಲೀಟರ್ ಹಾಲು ಸರಬರಾಜು ಮಾಡುತ್ತಿದ್ದು ಚಿಲ್ಲಿಂಗ್ ಸೇಂಟರ್ನಲ್ಲಿ 3 ಸಾವಿರ ಲೀಟರ್ ಹಾಲು ಚಿಲ್ಲಿಂಗ್ ಮಾಡಿ ಒಕ್ಕೂಟಕ್ಕೆ ಸರಬರಾಜು ಮಾಡಲಾಗುತ್ತದೆ ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ