ಲಾಕ್‌ಡೌನ್‌ ಸಡಿಲಿಸಿದ ಬಳಿಕ ಮತ್ತೆ ಕೋವಿಡ್ ಕಾಟ


Team Udayavani, May 14, 2020, 6:25 PM IST

ಲಾಕ್‌ಡೌನ್‌ ಸಡಿಲಿಸಿದ ಬಳಿಕ ಮತ್ತೆ ಕೋವಿಡ್ ಕಾಟ

ಬರ್ಲಿನ್‌: ಹೆಚ್ಚಿನ ಸಂಖ್ಯೆಯ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದರೂ ಸಾವನ್ನಪ್ಪಿದವರ ಸಂಖ್ಯೆ ಫ್ರಾನ್ಸ್‌, ಇಟಲಿ ಮತ್ತು ಅಮೆರಿಕಕ್ಕಿಂತ ಕಡಿಮೆಯಾಗುವಂತೆ ನೋಡಿಕೊಂಡಿದ್ದ ಜರ್ಮನ್‌ನಲ್ಲಿ ಈಗ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಆತಂಕಕ್ಕೆಡೆಮಾಡಿಕೊಟ್ಟಿದೆ.

ಒಂದು ಹಂತದಲ್ಲಿ ಇಡೀ ಜಗತ್ತೇ ತನ್ನ ಕಡೆಗೆ ನೋಡುವಂತೆ ಮಾಡಿದ್ದ ಜರ್ಮನಿಯ ಪರಿಸ್ಥಿತಿ ಈಗ ಆತಂಕದಲ್ಲಿದೆ. ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಾಕ್‌ಡೌನ್‌ ಸಡಿಲಿಸಿದ್ದ ದೇಶಕ್ಕೆ ಈಗ ಅದೇ ಮುಳುವಾದಂತಿದೆ. ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಗೊಳಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆರ್ಥಿಕ ಹಿಂಜರಿತವು ವರ್ಷದ ಮಧ್ಯಭಾಗದವರೆಗೆ ಇರುತ್ತದೆ ಎಂದು ಜರ್ಮನಿಯ ಆರ್ಥಿಕ ಸಚಿವಾಲಯ ಹೇಳಿತ್ತು. ಹಾಗಾಗಿ ಲಾಕ್‌ಡೌನ್‌ ಸಡಿಲಿಸುವ ನಿರ್ಧಾರಕ್ಕೆ ಸರಕಾರ ಬಂದಿತ್ತು.

ಎಡವಿದ್ದೆಲ್ಲಿ?
ಆರ್ಥಿಕ ಸುಧಾರಣೆಗಾಗಿ ಜರ್ಮನ್‌ ಸರಕಾರವು ಈಗಾಗಲೇ 750 ಬಿಲಿಯನ್‌ ಯುರೊ ಮೌಲ್ಯದ ಆರ್ಥಿಕ ಪರಿಹಾರ ನಿಧಿಯನ್ನು ಘೋಷಿಸಿದೆ. ದೇಶದ ಆರ್ಥಿಕ ವ್ಯವಹಾರ ಚಟುವಟಿಕೆಗಳಿಗೆ ಸಾಲ ನೀಡುವುದರೊಂದಿಗೆ, ಷೇರು ವಹಿವಾಟು ಮತ್ತು ದಿನಗೂಲಿ ಕಾರ್ಮಿಕರ ಆದಾಯ ಮಟ್ಟವನ್ನು ಬೆಂಬಲಿಸುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ.

ಆರೋಗ್ಯ ರಕ್ಷಣಾ ಉತ್ಪನ್ನಗಳ ತಯಾರಿಕೆ ಘಟಕಗಳನ್ನು ಮತ್ತು ಕಂಪನಿಗಳನ್ನು ಶೀಘ್ರವೇ ಪುನಃ ತೆರೆಯಲು ಸರಕಾರ ನಿರ್ಧರಿಸಿತ್ತು. ಸಾಮಾಜಿಕ ಅಂತರವನ್ನು ಪಾಲಿಸುವ ಅನಿವಾರ್ಯತೆ ಇರುವ ಕಾರಣ ಹೋಟೆಲ್‌ಗ‌ಳು ಮತ್ತು ರೆಸ್ಟೋರೆಂಟ್‌ಗಳಿಗೆ ಎಚ್ಚರಿಕೆಯಿಂದ ನಿಯಂತ್ರಿತ ರೀತಿಯಲ್ಲಿ ಕಾರ್ಯಾಚರಿಸಲು ಅನುಮತಿ ನೀಡಲಾಗಿತ್ತು. ಉಳಿದಂತೆ ಪಬ್‌-ಕ್ಲಬ್‌ಗಳನ್ನು, ಚಿತ್ರ ಮಂದಿರಗಳನ್ನು ಹಾಗೂ ಮಾಲ್‌ಗ‌ಳನ್ನು ಸದ್ಯಕ್ಕೆ ಮುಚ್ಚಿರಬೇಕು ಎಂದಿತ್ತು.

ಏನು ಮಾಡಿತ್ತು?
ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಯೋಜನೆ ಜತೆಗೆ 800 ಚದರ ಮೀಟರ್‌ ವಿಸ್ತೀರ್ಣದ ವರೆಗಿನ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿತ್ತು. ಶಾಪಿಂಗ್‌ ಮಾಡುವಾಗ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಪಾಲಿಸಲೇಬೇಕಾದ ಕೆಲವು ಅಗತ್ಯ ನಿಯಮಗಳನ್ನು ರೂಪಿಸಿದ್ದು, ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಲು ಸೂಚಿಸಲಾಗಿತ್ತು. ಆದರೆ ಆಗಸ್ಟ್‌ 31 ರವರೆಗೆ ಯಾವುದೇ ದೊಡ್ಡ ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಲಾಕ್‌ಡೌನ್‌ ಅನ್ನು ತೆರವುಗೊಳಿಸಲಾಗುವುದಾದರೂ ಜನರು ಬಹಳ ಎಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿತ್ತು. ಇಷ್ಟೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಜರ್ಮನ್‌ನಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕಿತರ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಇತರ ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.