ಕೋವಿಡ್‌ ಕರಿನೆರಳಲ್ಲೇ ಬಲಗೊಂಡ ಆಸ್ಪತ್ರೆಗಳು


Team Udayavani, Aug 26, 2021, 5:48 PM IST

ಕೋವಿಡ್‌ ಕರಿನೆರಳಲ್ಲೇ ಬಲಗೊಂಡ ಆಸ್ಪತ್ರೆಗಳು

ಧಾರವಾಡ: ಕೋವಿಡ್‌ 1 ಮತ್ತು 2ನೇ ಅಲೆ ಹೊಡೆತಕ್ಕೆ ನಗರ-ಹಳ್ಳಿ ಎರಡೂ ನಡುಗಿ ಹೋಗಿದ್ದು ಗೊತ್ತಿರುವ ಸಂಗತಿ. ಆದರೆ ಕೋವಿಡ್‌ ಎದುರಿಸುವ ಅನಿವಾರ್ಯತೆ ನಡುವೆಯೇ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಸಾಕಷ್ಟು ಹೊಸತನ ರೂಢಿಸಿಕೊಂಡು ಸದ್ದಿಲ್ಲದೇ ಇನ್ನಷ್ಟು ಬಲಶಾಲಿಯಾಗಿದೆ.

ಕೋವಿಡ್‌ 1ನೇ ಅಲೆ ಅಪ್ಪಳಿಸಿದಾಗ ಆತಂಕ ಮತ್ತು ಸಂಕಷ್ಟದ ನಡುವೆಯೇ ಕೋವಿಡ್‌ ರೋಗಿಗಳನ್ನು ಉಪಚರಿಸಿದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು 2ನೇ ಅಲೆಯನ್ನು ನಿರಾತಂಕವಾಗಿ ಎದುರಿಸಿ ಸೈ ಎನಿಸಿಕೊಂಡಿವೆ. ಕೋವಿಡ್‌ನ‌ ದುಷ್ಪರಿಣಾಮಗಳಿಂದ ಮುಂಬರುವ ಅನಾರೋಗ್ಯದ ಪರಿಕಲ್ಪನೆಗಳಡಿ ಇನ್ನಷ್ಟು ವೈದ್ಯಕೀಯ ಸಲಕರಣೆಗಳು, ವೈದ್ಯಕೀಯ ವ್ಯವಸ್ಥೆಯನ್ನು ರೂಢಿಸಿಕೊಂಡಿವೆ. ಜಿಲ್ಲೆಯಲ್ಲಿ 1ನೇ ಮತ್ತು 2ನೇ ಅಲೆಯಲ್ಲಿ ಈ ವರೆಗೆ (ಆ.18ರ ವರೆಗೆ ) 60,657 ಜನರಲ್ಲಿ ಸೋಂಕು ಪತ್ತೆ ಆಗಿದ್ದು, ಈ ಪೈಕಿ 1291 ಜನ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣ 124 ಇದ್ದು, ಸೋಂಕಿನ ಪ್ರಮಾಣ ತಗ್ಗಿದೆ. ಈವರೆಗೆ 59,240 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಈಗ ನಿತ್ಯ ಹೊಸ ಸೋಂಕಿತರ ಸಂಖ್ಯೆ ಒಂದಂಕಿಯಲ್ಲಿಯೇ ಇದೆ.

ಪ್ರಮುಖ ಬದಲಾವಣೆಗಳು: ಜಿಲ್ಲೆಯಲ್ಲಿ ಕಿಮ್ಸ್‌ ಮತ್ತು ಜಿಲ್ಲಾಸ್ಪತ್ರೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಸೇವೆಗೆ ಬೆನ್ನೆಲುಬಾಗಿ ನಿಂತಿವೆ. ಇನ್ನುಳಿದಂತೆ ಎಸ್‌ಡಿಎಂ ಆಸ್ಪತ್ರೆ, ಡಾ| ರಾಮನಗೌಡರ ಆಸ್ಪತ್ರೆ, ತತ್ವದರ್ಶ ಆಸ್ಪತ್ರೆ ಸೇರಿದಂತೆ 17ಕ್ಕೂ ಹೆಚ್ಚು ಆಸ್ಪತ್ರೆಗಳು ಕೋವಿಡ್‌ ಸಂದರ್ಭದಲ್ಲಿ ಸೇವಾ ಕಾರ್ಯಕ್ಕೆ ಕೈ ಜೋಡಿಸಿ ಸತತ ಹೋರಾಟ ಮಾಡಿದ್ದು ಸ್ಮರಣೀಯ. ಸರ್ಕಾರಿ ಆಸ್ಪತ್ರೆಗಳ ಪೈಕಿ ಜಿಲ್ಲೆಯಲ್ಲಿ ಒಟ್ಟು 50 ಆಕ್ಸಿಜನ್‌ ಬೆಡ್‌ಗಳು ರೂಪುಗೊಂಡವು. ಮೊದಲನೇ ಅಲೆಯಲ್ಲಿ 150ರಷ್ಟಿದ್ದ ಆಕ್ಸಿಜನ್‌ ಬೆಡ್‌ಗಳ ಸಂಖ್ಯೆ ಎರಡನೇ ಅಲೆ ಹೊತ್ತಿಗೆ ದ್ವಿಗುಣ ಗೊಂಡಿತ್ತು. ಆದರೂ 2ನೇ ಅಲೆಯಲ್ಲಿ ಸಾಕಷ್ಟು ತೊಂದರೆಗಳು ಆಗಿದ್ದರಿಂದ ಮತ್ತಷ್ಟು ವೆಂಟಿಲೇಟರ್‌ಗೂ ಹೊಸ್‌ ಬೆಡ್‌ಗಳು ಬಂದವು. ವೈದ್ಯರ ನೇಮಕಾತಿ ತೀವ್ರತೆ ಪಡೆದುಕೊಂಡಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇದ್ದ 150ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಭರ್ತಿಯಾಗಿವೆ.

ಇದನ್ನೂ ಓದಿ:ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ

ಐಸಿಯುಗಾಗಿಯೇ ಎಂಬಿಬಿಎಸ್‌ ಮುಗಿಸಿದ ಆಗಲೇ ತರಬೇತಿ ಪಡೆದುಕೊಂಡ ಯುವ ವೈದ್ಯರನ್ನು ಪ್ರತಿ ತಾಲೂಕಿಗೆ ಮೂವರಂತೆ ನೇಮಕ ಮಾಡಲಾಗಿದೆ. ಅಗತ್ಯ ವೈದ್ಯಕೀಯ ಉಪಕರಣಗಳು, ಗ್ಲೌಸ್‌, ಮಾಸ್ಕ್, ವೈದ್ಯಕೀಯ ಕಿಟ್‌ಗಳು ಸೇರಿದಂತೆ ಎಲ್ಲ ಸೌಕರ್ಯಗಳನ್ನು ಸರ್ಕಾರ ಸಮಯಕ್ಕೆ ಸರಿಯಾಗಿ ಪೂರೈಸಿದೆ. ತಾಲೂಕಾಸ್ಪತ್ರೆಗಳಿಗೂ ಶಕ್ತಿ: ಜಿಲ್ಲೆಯಲ್ಲಿ 32 ಪ್ರಾಥಮಿಕ ಆರೋಗ್ಯ ಕೇಂದ್ರ, 20 ನಗರ ಆರೋಗ್ಯ ಕೇಂದ್ರ ಗಳು ಹಾಗೂ 3 ಸಾರ್ವಜನಿಕ ಆಸ್ಪತ್ರೆ, ಒಂದು ಜಿಲ್ಲಾಸ್ಪತ್ರೆ ಇದ್ದು, ಪ್ರತಿದಿನ

10 ಸಾವಿರಕ್ಕೂ ಅಧಿಕ ಜನರು ಆರೋಗ್ಯ ಸೇವೆ ಪಡೆದುಕೊಳ್ಳುತ್ತಿದ್ದಾರೆ. ಕಿಮ್ಸ್‌ನಲ್ಲಿ ಎರಡು ಮತ್ತು ಜಿಲ್ಲಾಸ್ಪತ್ರೆಯಲ್ಲಿ ಎರಡು ಹೊಸ ಆಕ್ಸಿಜನ್‌ ಉತ್ಪಾದಕ ಘಟಕಗಳು ಸ್ಥಾಪನೆಯಾದವು. ಕಲಘಟಗಿ ಮತ್ತು ಕುಂದಗೋಳ ತಾಲೂಕಾಸ್ಪತ್ರೆಗಳಲ್ಲಿ ತಲಾ ಒಂದೊಂದು (500 ಲೀಟರ್‌ ಪ್ರತಿ ನಿಮಿಷ) ಆಕ್ಸಿಜನ್‌ ಘಟಕಗಳು ಸ್ಥಾಪನೆಯಾಗಿವೆ. ನವಲಗುಂದದಲ್ಲಿ ಕೂಡ ಒಂದು ಆಕ್ಸಿಜನ್‌ ಘಟಕ ಸಿದ್ಧಗೊಂಡಿದೆ.

ಎರಡೂ ಬಾರಿ ಎಡವಟ್ಟು: ಆರೋಗ್ಯ ಇಲಾಖೆ ಎಡವಟ್ಟುಗಳು ಸಾಕಷ್ಟು ಜನರು ಪ್ರಾಣ ತೆರುವುದಕ್ಕೂ ಕಾರಣವಾಯಿತು. ಮೊದಲ ಅಲೆಯಲ್ಲಿ ಅತ್ಯಂತ ಕಠೊರ ನಿಯಮಗಳನ್ನು ಏಕಾಏಕಿ ಜಾರಿಗೊಳಿಸಿದ್ದರಿಂದ ನಿತ್ಯ ದುಡಿದು ತಿನ್ನುವವರು ಪರದಾಡಿದರು. ಇದರಿಂದ ಬುದ್ಧಿ ಕಲಿಯದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ 2ನೇ ಅಲೆ ತೀವ್ರವಾಗಿ ವ್ಯಾಪಿಸಿದ್ದರಿಂದ ಜನರು ಸಂಕಷ್ಟಗಳ ಸರಮಾಲೆಯನ್ನೇ ಹೊದ್ದುಕೊಳ್ಳುವ ಸ್ಥಿತಿಗೆ ಕಾರಣವಾದವು. ಮೇ ತಿಂಗಳು ಸೂತಕದ ತಿಂಗಳಾಗಿ ಪರಿವರ್ತನೆಯಾಯಿತು. ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಜನರು ಸಾವನ್ನ ಪ್ಪಿದ್ದು, ಜಿಲ್ಲಾಡಳಿತ ಲೆಕ್ಕ ಕೂಡ ಇಟ್ಟಿಲ್ಲ. ಇನ್ನು ಆಕ್ಸಿಜನ್‌ ಘಟಕಗಳು ಇಲ್ಲದೇ ಮತ್ತು ಪೂರೈಕೆ ಸರಿಯಾಗಿ ಆಗದೇ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದರು. ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಕೊರತೆಯೂ ಮತ್ತಷ್ಟು ಆತಂಕ ಸೃಷ್ಟಿಸಿತ್ತು.

3ನೇ ಅಲೆ ತಡೆಗೂ ಸಿದ್ಧತೆ
3ನೇ ಅಲೆ ತಡೆಯಲು ಈಗಾಗಲೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಗಳಿಗೆ ಸಜ್ಜಾಗಿರುವಂತೆ ಮಾಹಿತಿ ನೀಡಿವೆ. ಖಾಸಗಿ ಸಂಘ-ಸಂಸ್ಥೆಗಳಲ್ಲಿ ನೂರಾರು ಆಕ್ಸಿಜನ್‌ ಉತ್ಪಾದಕ ಕಿರು ಯಂತ್ರೋಪಕರಣ ಗಳನ್ನು ದಾನವಾಗಿ ಪಡೆದುಕೊಂಡು ಇರಿಸಲಾಗಿದೆ. ಇನ್ನೊಂದೆಡೆ ಕೋವಿಡ್‌ ತಡೆಗೆ ಲಸಿಕಾಕರಣವನ್ನು ತೀವ್ರಗೊಳಿಸಲಾಗಿದ್ದು, 9,41,061 ಜನರಿಗೆ ಲಸಿಕೆ ನೀಡಲಾಗಿದೆ.

ಕೋವಿಡ್‌ ಸಂಭಾವ್ಯ ಮೂರನೇ ಅಲೆ ನಿರ್ವಹಣೆಗಾಗಿ ಜಿಲ್ಲೆಯ ಖಾಸಗಿ-ಸರ್ಕಾರಿ ಆಸ್ಪತ್ರೆಗಳಲ್ಲಿ ವಯಸ್ಕರಿಗೆ ಮೂರುಸಾವಿರ ಹಾಗೂ ಮಕ್ಕಳಿಗಾಗಿ ಪ್ರತ್ಯೇಕ 750 ಹಾಸಿಗೆಗಳನ್ನು ಗುರುತಿಸಲಾಗಿದೆ. ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಎಲ್ಲ ಕ್ರಮ ಜರುಗಿಸುತ್ತೇವೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
-ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಕೋವಿಡ್‌ ಕಾಲಘಟ್ಟದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಕ್ಷಿಪ್ರ ಅಭಿವೃದ್ಧಿಯಾಗಿದೆ. ಈ ಅವಧಿಯಲ್ಲಿನ ಕೆಲಸಗಳು ಆಗಲು ಇನ್ನೂ 10 ವರ್ಷ ಗಳಾದರೂ ಬೇಕಾಗುತ್ತಿತ್ತು. ಆಕ್ಸಿಜನ್‌ ಘಟಕಗಳ ಸ್ಥಾಪನೆ, ಸಿಬ್ಬಂದಿ ನೇಮಕ, ಕೋವಿಡ್‌ ಲಸಿಕಾಕರಣ ಎಲ್ಲವೂ ಜನ ಮೆಚ್ಚಿಕೊಳ್ಳುವ ಹಾಗೆ ಆಗಿದೆ. ಮೊದಲು ಖಾಸಗಿ ಆಸ್ಪತ್ರೆಗಳಿಗೆ ಪ್ರಾಧಾನ್ಯತೆ ನೀಡುತ್ತಿದ್ದ ಜನ ಈಗ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದಾರೆ.
-ನಿತೇಶ ಪಾಟೀಲ್‌, ಜಿಲ್ಲಾಧಿಕಾರಿ

ಜಿಲ್ಲೆಯ ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಒಂದುವರೆ ವರ್ಷದಿಂದ ಸಾಕಷ್ಟು ಪರಿವರ್ತನೆಗಳು ಬಂದಿವೆ. ವೈದ್ಯರ ನೇಮಕ, ಅಗತ್ಯ ಸಲಕರಣೆ ಗಳು ಸೇರಿದಂತೆ ಮೂರನೇ ಅಲೆ ತಡೆಗೂ ಅಗತ್ಯ ಸಿದ್ಧತೆಗಳನ್ನು ಜಿಲ್ಲಾ ಆರೋಗ್ಯ ಇಲಾಖೆ ಮಾಡಿಕೊಂಡಿದೆ.
-ಡಾ|ಯಶವಂತ ಮದೀನಕರ್‌, ಡಿಎಚ್‌ಒ

ಕೋವಿಡ್‌ 1ನೇ ಅಲೆಯಲ್ಲಿ ಸಿಬ್ಬಂದಿಗೆ ಮೊದಲು ಭಯ ಹೋಗಲಾಡಿಸಿ ತರಬೇತಿ ನೀಡಬೇಕಾಯಿತು. ಸರ್ಕಾರದ ಮಾರ್ಗಸೂಚಿ ಮಾಹಿತಿ ನೀಡಿದೆವು. ಕೋವಿಡ್‌ ತಡೆ ನಿಯಮಗಳ ಜಾರಿ, ಅಗತ್ಯ ಉಪಕರಣಗಳು, ಆಕ್ಸಿಜನ್‌ ಕಿಟ್‌ಗಳ ಖರೀದಿ, ಪೂರೈಕೆ ಕೊರತೆ ನಿರ್ವಹಣೆ, ಗ್ಲೌಸ್‌, ಮಾಸ್ಕ್ನಿಂದ ಹಿಡಿದು ಎಲ್ಲ ವ್ಯವಸ್ಥೆ ಮಾಡಬೇಕಾಯಿತು. ಕೋವಿಡ್‌ನಿಂದ ಆಸ್ಪತ್ರೆಗಳಲ್ಲಿ ಹೊಸ ವ್ಯವಸ್ಥೆಯೇ ಜಾರಿಯಾಗಿದೆ. ಒಟ್ಟಾರೆಯಾಗಿ
ಆರೋಗ್ಯ ತುರ್ತು ಪರಿಸ್ಥಿತಿಯನ್ನು ಖಾಸಗಿ ಆಸ್ಪತ್ರೆಗಳು ಜವಾಬ್ದಾರಿಯಿಂದ ನಿರ್ವಹಿಸಿವೆ.
-ಡಾ| ಪ್ರಶಾಂತ ರಾಮನಗೌಡರ, ಆಡಳಿತಾಧಿಕಾರಿ, ಡಾ|ರಾಮನಗೌಡರ ಆಸ್ಪತ್ರೆ

ಕೋವಿಡ್‌ನಿಂದ ಹಳ್ಳಿಗರು ಸಾಕಷ್ಟು ಪಾಠ ಕಲಿತಿದ್ದು, ಆರೋಗ್ಯ ಕಾಳಜಿ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಕೋವಿಡ್‌ಗೂ ಮುನ್ನ ಇದ್ದ ನಿರ್ಲಕ್ಷ್ಯ ಭಾವ ಈಗ ಉಳಿದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಸರ್ಕಾರ ಇದೀಗ ಅಗತ್ಯ ಸೌಕರ್ಯಗಳಿಗೆ ಒತ್ತು ಕೊಟ್ಟಿರುವುದು ಗೋಚರಿಸುತ್ತಿದೆ.
-ಎನ್‌.ಎಫ್‌. ಮಡಿವಾಳರ, ಆರೋಗ್ಯ ಕಾರ್ಯಕರ್ತ, ಎಫ್‌ಪಿಎಐ

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.