ಕೋವಿಡ್ ಹೋರಾಟದ ಯಶಸ್ಸಿನ ಸೂತ್ರ: ತೈವಾನ್‌ ಸಚಿವ


Team Udayavani, Aug 27, 2020, 1:48 AM IST

ಕೋವಿಡ್ ಹೋರಾಟದ ಯಶಸ್ಸಿನ ಸೂತ್ರ: ತೈವಾನ್‌ ಸಚಿವ

ದಿಲ್ಲಿ: ಸರಕಾರಿ ಶಾಲೆಯಲ್ಲಿ "ನಿರ್ಮಾನ್‌ ಮಜ್ದೂರ್‌' ನೋಂದಣಿ ಅಭಿಯಾನದಲ್ಲಿ ನೋಂದಣಿ ಪಡೆಯಲು ಸರದಿಯಲ್ಲಿ ನಿಂತಿರುವ ನಿರ್ಮಾಣ ಕಾರ್ಮಿಕರು.

ಮಣಿಪಾಲ: ಕೋವಿಡ್‌ ವಿರುದ್ಧ ಹೋರಾಡಲಾಗದೇ ಹಲವು ದೇಶಗಳು ಸಂಕಷ್ಟ ಎದುರಿಸುತ್ತಿದೆ. ಆದರೆ ತೈವಾನ್‌ ಮಾತ್ರ ತನ್ನ ಚಾಕಚಕ್ಯತೆಯನ್ನು ತೋರಿಸಿದ್ದು, ಕೋವಿಡ್‌ನ‌ನ್ನು ಮಟ್ಟಹಾಕಿದೆ. ಕೋವಿಡ್‌ ಮಣಿಸುವಲ್ಲಿ ನಮ್ಮ ಜನರ ಪಾತ್ರ ಹಿರಿದಾಗಿದೆ. ನಮ್ಮ ನಾಗರಿಕರನ್ನು ನಂಬಿದ್ದೇವೆ, ಅದು ಅತ್ಯಂತ ಪ್ರಮುಖ ಭಾಗವಾಗಿದೆ. ಇದಕ್ಕೆ ತಂತ್ರಜ್ಞಾನಗಳು ಸಹಕಾರ ನೀಡಿದ್ದು ಈ ಎಲ್ಲವುದರ ಫ‌ಲವಾಗಿ ನಾವು ಕೋವಿಡ್‌ ನಿಗ್ರಹಿಸಿದ್ದೇವೆ ಎಂದು ತೈವಾನಿನ ಡಿಜಿಟಲ್‌ ಸಚಿವ ಆಡ್ರೆ ಟ್ಯಾಂಗ್‌ ಹೇಳಿದ್ದಾರೆ.

WION ಜತೆ ಮಾತನಾಡಿರುವ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ತೈವಾನ್‌ ಮಾದರಿಯನ್ನು ವಿವರವಾಗಿ ವಿವರಿಸಿದ ಸಚಿವರು ಚೀನದ ವೈದ್ಯ ಲಿ ವೆನ್ಲಿಯಾಂಗ್‌ ಅವರು ಡಿಸೆಂಬರ್‌ನಲ್ಲಿ ಕೋವಿಡ್‌ ವೈರಸ್‌ ಬಗ್ಗೆ ಮಾಹಿತಿ ನೀಡಿದಾಗ, ನಾವು ತತ್‌ಕ್ಷಣ ಅದನ್ನು ಎದುರಿಸಲು ಸನ್ನದ್ಧರಾಗಿದ್ದೆವು.  ಜನವರಿಯ ಆರಂಭದಿಂದ ನಾವು ಚೀನದಿಂದ ತೈವಾನ್‌ಗೆ ಬರುವ ವಿಮಾನಗಳ ಮೇಲೆ ಕಣ್ಣಿಡಲು ಪ್ರಾರಂಭಿಸಿದೆವು ಎಂದರು.

ತೈವಾನ್‌ ಮಾದರಿಯ ಮೂರನೇ ಅಂಕಣವನ್ನು “ತಮಾಷೆ’ಯಾಗಿ ವಿವರಿಸಿದ ಅವರು ಮಾಸ್ಕ್ಗಳನ್ನೂ ಧರಿಸಲು ಜನರನ್ನು ಪ್ರೋತ್ಸಾಹಿಸಲು ನಾವು ಬಹಳ ಆಸಕ್ತಿದಾಯಕ ಮಾರ್ಗಗಳನ್ನು ಅಳವಡಿಸಿಕೊಂಡಿದ್ದೇವೆ. ಇದಕ್ಕಾಗಿ ನಾವು ಮೇಮ್ಸ… ಮತ್ತು ಪೋಸ್ಟರ್‌ಗಳನ್ನು ಸಹಾಯವನ್ನು ಪಡೆದುಕೊಂಡಿದ್ದೇವೆ ಎಂದು ವಿವರಿಸಿದರು.

ಕೋವಿಡ್‌ ಜನವರಿ 25ರಂದು ಮಧ್ಯ ಚೀನದಿಂದ ವೇಗವಾಗಿ ಹರಡುವ ಅಪಾಯದ ಬಗ್ಗೆ ಜಗತ್ತು ಎಚ್ಚರಗೊಳ್ಳುತ್ತಿದ್ದಂತೆ, ತೈವಾನ್‌ ಮಾತ್ರ ತನ್ನ ಅದ್ಭುತ ಕೈಚಳಕವನ್ನು ತೋರಿತ್ತು. 2003ರಲ್ಲಿ ತೀವ್ರವಾದ ಉಸಿರಾಟದ ಸಿಂಡ್ರೋಮ್‌ (ಸಾರ್ಷ್‌) ಏಕಾಏಕಿ, ತೈವಾನ್‌, ಹಾಂಗ್‌ ಕಾಂಗ್‌ ಮತ್ತು ದಕ್ಷಿಣ ಚೀನಕ್ಕೆ ಬಡಿಯಿತು. ಜಗತ್ತಿನಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಇದೂ ಒಂದು. ಚೀನದ ಆಗ್ನೇಯ ಕರಾವಳಿಯಿಂದ 180 ಕಿ.ಮೀ. (110 ಮೈಲಿ) ದೂರದಲ್ಲಿರುವ ದ್ವೀಪದಲ್ಲಿ 150,000 ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

181 ಜನರು ಸಾವನ್ನಪ್ಪಿದರು. ಆಗ ಕಲಿತ ಪಾಠದಿಂದ ಈ ಬಾರಿ ಕೊರೊನಾ ವೈರಸ್‌ ನ ವೇಗಕ್ಕೆ ಕಡಿವಾಣ ಹಾಕಲು ಸಾಧ್ಯವಾಯಿತು. ಸರಕಾರದ ಕ್ರಮಗಳು, ಸಾಮಾಜಿಕ ಅಂತರ, ಗಡಿ ನಿಯಂತ್ರಣಗಳು ಮತ್ತು ಮಾಸ್ಕ್ ಗಳನ್ನು ಧರಿಸುವುದು ಮೊದಲಾದ ಕ್ರಮಗಳನ್ನು ತೈವಾನ್‌ ಬಹಳ ಬೇಗನೆ ಕೈಗೊಂಡಿತ್ತು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.