ಚಹಾ ಬೆಳೆಗೂ ಕೋವಿಡ್ ಸಂಕಷ್ಟ
Team Udayavani, May 9, 2020, 3:20 PM IST
ಮಣಿಪಾಲ: ಕೋವಿಡ್ ವೈರಸ್ ಕೃಷಿ ಕ್ಷೇತ್ರದ ಬೆಳವಣಿಗೆಯನ್ನು ಕುಂಠಿತಗೊಳಿಸಿದೆ. ಲಾಕ್ಡೌನ್ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಕಟಾವಿಗೆ ಬಂದಿದ್ದ ಚಹಾ ಬೆಳೆಯನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದಂತಾಗಿದೆ. ಲಾಕ್ಡೌನ್ ಕಾರಣ ಚಹಾದ ಬೇಡಿಕೆಯೂ ಹೆಚ್ಚಾಗಿದೆ.
ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಬೇಡಿಕೆಯನ್ನು ಸರಿದೂಗಿಸಲು ಚಹಾ ಬೆಳೆಗಾರರಿಗೆ ಲಾಕ್ಡೌನ್ ಸಮಸ್ಯೆಯಾಗುತ್ತಿದೆ. ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಬರುತ್ತಿಲ್ಲ. ಇದು ಚಹಾ ಉತ್ಪಾದನೆ ಮತ್ತು ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದ್ದು 2020ರಲ್ಲಿ ದೇಶೀಯ ಉತ್ಪಾದನೆ ಶೇ. 9ರಷ್ಟು ಇಳಿಕೆಯಾಗಬಹುದು.
ಈಶಾನ್ಯ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಅಸ್ಸಾಂನಲ್ಲಿ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಚಹಾ ತೋಟಗಳಲ್ಲಿನ ಕಾರ್ಮಿಕರ ಕೊರತೆ ಈ ವರ್ಷದ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಈ ಕೋವಿಡ್ ಬರೀ ಜಗತ್ತಿಗಲ್ಲ ; ಭಾರತೀಯ ಚಹಾ ಉತ್ಪಾದಕರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ.
ಈಶಾನ್ಯ ಭಾಗದಲ್ಲಿ ಬೆಳೆಯಲಾಗುವ ಚಹಾವನ್ನು ಅತ್ಯುತ್ಕೃಷ್ಟವಾದುದು. ಸಾಮಾನ್ಯವಾಗಿ ಮಾರ್ಚ್ ಮತ್ತು ಎಪ್ರಿಲ್ ತಿಂಗಳಿನಲ್ಲಿ ಚಹಾ ಸೊಪ್ಪಿನ ಕಟಾವು. ಭಾರತ ಮಾತ್ರವಲ್ಲದೇ ಚೀನ, ಶ್ರಿಲಂಕಾ, ವಿಯೆಟ್ನಾಂ ಸೇರಿದಂತೆ ಇತರ ಚಹಾ ರಫ್ತು ಮಾಡುವ ದೇಶಗಳು ಈ ಸಮಸ್ಯೆಗೆ ಸಿಲುಕಿವೆ. ಕೀನ್ಯಾದಲ್ಲಿನ ಹವಾಮಾನದ ಕಾರಣಕ್ಕೆ ವರ್ಷಪೂರ್ತಿ ಚಹಾ ಬೆಳೆಯಬಹುದು.
ಶ್ರೀಲಂಕಾದಲ್ಲಿ ಮೊದಲ ತ್ತೈಮಾಸಿಕದಲ್ಲೇ ಚಹಾ ಉತ್ಪಾದನೆಯು ದಶಕಗಳಲ್ಲೇ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಫ್ತು ಕೂಡ ನಷ್ಟ ಅನುಭವಿಸಿದ್ದು, 59.5 ದಶಲಕ್ಷ ಕಿ.ಗ್ರಾಂ.ನಿಂದ 14.1 ದಶಲಕ್ಷ ಕಿ.ಗ್ರಾಂ.ಗೆ ಇಳಿಕೆಯಾಗಿದೆ.
ಸಾಂಕ್ರಾಮಿಕ ಕಾಯಿಲೆಯೊಂದು ಚಹಾ ಉತ್ಪಾದನೆಯ ಮೇಲೆ ಪರಿಣಾಮ ಬೀರುವುದು ಇದೇ ಮೊದಲು ಎನ್ನುತ್ತಾರೆ ಬೆಳೆಗಾರರು. ಕಾಫಿ ಬೆಳೆಗಾರರೂ ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ಕೃಷಿ ಚಟುವಟಿಕೆಗಳು ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ