ದ.ಕ.: ಶನಿವಾರದ ಎಲ್ಲ ವರದಿ ನೆಗೆಟಿವ್‌


Team Udayavani, Apr 19, 2020, 11:02 AM IST

ದ.ಕ.: ಶನಿವಾರದ ಎಲ್ಲ ವರದಿ ನೆಗೆಟಿವ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಯಾವುದೇ ಕೋವಿಡ್ ಪಾಸಿಟಿವ್‌ ಪ್ರಕರಣ ದಾಖ ಲಾಗಿಲ್ಲ. ಜಿಲ್ಲೆಯಲ್ಲಿ ಶನಿವಾರ 7 ಮಂದಿಯ ಗಂಟಲ ದ್ರವ ಮಾದರಿಯ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ.

ಒಟ್ಟು 151 ಮಂದಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸ ಲಾಗಿದೆ. 260 ಮಂದಿ ಗೃಹ ನಿಗಾ ದಲ್ಲಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 15 ಮಂದಿಯ ಪೈಕಿ ಶನಿವಾರ 5 ಮಂದಿ ಬಿಡುಗಡೆಗೊಂಡಿದ್ದಾರೆ. ಫೀವರ್‌ ಕ್ಲಿನಿಕ್‌ನಲ್ಲಿ ಶನಿವಾರ 67 ಮಂದಿಯ ತಪಾಸಣೆ ನಡೆಸಿದ್ದು, ಒಟ್ಟು 498 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 13 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಎ. 17ರಂದು ಸೋಂಕು ದೃಢಪಟ್ಟ ಉಪ್ಪಿನಂಗಡಿಯ ವ್ಯಕ್ತಿ ವೆನಾÉಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಶಾ ಕಾರ್ಯಕರ್ತರು ಹಾಗೂ ಎಂಪಿಡಬುÉ é ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 90,963 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ.

ಉಪ್ಪಿನಂಗಡಿ ವ್ಯಕ್ತಿಯ ಟ್ರಾವೆಲ್‌ ಹಿಸ್ಟರಿ
ಎ. 17ರಂದು ಸೋಂಕು ದೃಢ ಪಟ್ಟ ಉಪ್ಪಿನಂಗಡಿಯ 39 ವರ್ಷದ ವ್ಯಕ್ತಿಯು ಮಾ. 20ರಂದು ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಿಂದ ಮಂಗಳೂರಿಗೆ ಭಾರತಿ ಟ್ರಾವೆಲ್ಸ್‌ ಎಂಬ ಹೆಸರಿನ (ಬಸ್‌ ನಂ: ಕೆಎ 51 ಎಡಿ 5832) ಬಸ್‌ನಲ್ಲಿ ಪ್ರಯಾಣಿಸಿರು
ತ್ತಾರೆ. ಆದ್ದರಿಂದ ಆ ಬಸ್ಸಿನಲ್ಲಿ ಪ್ರಯಾಣಿಸಿದ 32 ಮಂದಿ ಕೂಡಲೇ ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು  ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಲಕ್ಷ್ಮೀನಗರ ಸೀಲ್‌ಡೌನ್‌
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ 13ನೇ ಕೋವಿಡ್ ಪ್ರಕರಣವಾಗಿ ದಾಖಲಾಗಿರುವ ಉಪ್ಪಿನಂಗಡಿಯ ವ್ಯಕ್ತಿಯ ಮನೆ ಇರುವ ಲಕ್ಷ್ಮೀನಗರವನ್ನು ಸೀಲ್‌ಡೌನ್‌ ಮಾಡಲು ಪುತ್ತೂರು ಸಹಾಯಕ ಕಮಿಷನರ್‌ ನಿರ್ದೇಶನ ನೀಡಿದ್ದಾರೆ.
ಸೋಂಕು ಪೀಡಿತ ವ್ಯಕ್ತಿಯ ನಿಕಟ ಸಂಪರ್ಕದಲ್ಲಿದ್ದ ಮನೆಯವ ರನ್ನು ಹಾಗೂ ಸಹೋದರರನ್ನು ಹೊರ ಜಗತ್ತಿನೊಂದಿಗೆ ಬೆರೆಯ ದಂತೆ ಮಾಡಲು ಅವರ ಮನೆಗೆ ದಿಗ್ಬಂಧನ ವಿಧಿಸಲಾಗಿದೆ ಎಂದು ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ತಿಳಿಸಿದ್ದಾರೆ.

ಚಾನೆಲ್‌ ವಿರುದ್ಧ ದೂರು
ಪುತ್ತೂರಿನ ಚಾನೆಲ್‌ ಒಂದು ವ್ಯಕ್ತಿಗೆ ಕೋವಿಡ್ ಪಾಸಿಟಿವ್‌ ಎಂಬ ವರದಿ ಬಿತ್ತರಿಸುವಾಗ ದಿಲ್ಲಿಯ ಸಮಾವೇಶವನ್ನು ಪ್ರಕರಣಕ್ಕೆ ಜೋಡಿಸಿ ಸಮಾಜದಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿದೆ. ಇದರಿಂದ ನಮ್ಮ ಕುಟುಂಬದ ಘನತೆಗೆ ಧಕ್ಕೆಯಾಗಿದೆ ಎಂದು ಮನೆಯವರು ಆರೋಪಿಸಿ ಕ್ರಮ ಕೈಗೊಳ್ಳುವಂತೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರು: 80 ಕೈದಿಗಳ ಸ್ಥಳಾಂತರ
ಮಂಗಳೂರು: ಕೋವಿಡ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಜೈಲಿನಲ್ಲಿರುವ ಕೈದಿಗಳ ನಡುವೆ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಮಂಗಳೂರಿನ ಸಬ್‌ ಜೈಲಿನಿಂದ 80 ಮಂದಿ ವಿಚಾರಣಾಧೀನ ಕೈದಿಗಳನ್ನು ಶನಿವಾರ ಬೇರೆ ಅಕ್ಕಪಕ್ಕದ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಯಿತು.

40 ವಿಚಾರಣಾಧೀನ ಕೈದಿಗಳನ್ನು ಚಿಕ್ಕಮಗಳೂರು ಜೈಲಿಗೆ ಹಾಗೂ 40 ಮಂದಿಯನ್ನು ಕಾರವಾರ ಜೈಲಿಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪೊಲೀಸ್‌ ಬೆಂಗಾವಲಿನಲ್ಲಿ ಸಾಗಿಸಲಾಯಿತು.

ಮಂಗಳೂರು ಸಬ್‌ ಜೈಲಿನಲ್ಲಿ 210 ಮಂದಿ ವಿಚಾರಣಾಧೀನ ಕೈದಿಗಳನ್ನು ಮಾತ್ರ ಇರಿಸುವ ಸಾಮರ್ಥ್ಯ ಇದೆ. ಆದರೆ ಶನಿವಾರ ಈ ಜೈಲಿನಲ್ಲಿ 6 ಮಹಿಳಾ ಕೈದಿಗಳ ಸಹಿತ ಒಟ್ಟು 311 ಮಂದಿ ಇದ್ದರು. ಇದೀಗ 231 ಮಂದಿ ಕೈದಿಗಳು ಇಲ್ಲಿದ್ದಾರೆ. ಕೋವಿಡ್ ಹರಡದಂತೆ ನೋಡಿಕೊಳ್ಳಲು ಹೊಸದಾಗಿ ಬರುವ ಹಾಗೂ ಆಸ್ಪತ್ರೆಗೆ ದಾಖಲಾಗಿ ಬರುವ ಕೈದಿಗಳಿಗೆ ಪ್ರತ್ಯೇಕ ಸೆಲ್‌ ಮಾಡಲಾಗಿದೆ. ಇತರ ಸೆಲ್‌ಗ‌ಳಲ್ಲಿ ಕೈದಿಗಳು ಹೆಚ್ಚಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜೈಲಿನ ಅಧೀಕ್ಷಕ ಚಂದನ್‌ ಪಟೇಲ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.