ಕೋವಿಡ್ ಪಾಸಿಟಿವ್‌: ಉಡುಪಿ: 148, ದಕ್ಷಿಣ ಕನ್ನಡ: 211; ಒಬ್ಬರು ಸಾವು


Team Udayavani, Jan 8, 2022, 7:35 AM IST

ಕೋವಿಡ್ ಪಾಸಿಟಿವ್‌: ಉಡುಪಿ: 148, ದಕ್ಷಿಣ ಕನ್ನಡ: 211; ಒಬ್ಬರು ಸಾವು

ಸಾಂದರ್ಭಿಕ ಚಿತ್ರ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಉಡುಪಿಯ 125, ಕುಂದಾಪುರದ 9 ಹಾಗೂ ಕಾರ್ಕಳದ 14 ಮಂದಿ ಸಹಿತ ಒಟ್ಟು 148 ಮಂದಿಗೆ ಸೋಂಕು ದೃಢಪಟ್ಟಿದೆ. 6,005 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 17 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 558 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.2.46ಕ್ಕೆ ಹೆಚ್ಚಳಗೊಂಡಿದೆ.

ವಾರದಲ್ಲಿ ಉಲ್ಬಣ
ಜಿಲ್ಲೆಯಲ್ಲಿ ಸರಿಸುಮಾರು 3 ತಿಂಗಳ ಅನಂತರ ಕೊರೊನಾ ಸೋಂಕು 100ರ ಗಡಿ ದಾಟಿದೆ. ಕಳೆದ ಸೆ. 16ರಂದು 113 ಮಂದಿಗೆ ಸೋಂಕು ಬಂದಿತ್ತು. ಆಬಳಿಕ ಸೋಂಕಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಜನವರಿ ತಿಂಗಳಿನಿಂದ ದಿನಂಪ್ರತಿ ಸೋಂಕು ಹೆಚ್ಚಳವಾಗುತ್ತಿದೆ. ಜ.1ರಂದು 28, 2ರಂದು 54, 3ರಂದು 43, 4ರಂದು 72, 5ರಂದು 88, 6ರಂದು 92 ಮಂದಿಗೆ ಸೋಂಕು ದೃಢಪಟ್ಟಿತ್ತು.

ದಕ್ಷಿಣ ಕನ್ನಡ ಜಿಲ್ಲೆ: ಒಬ್ಬರು ಸಾವು: ದಾಖಲೆಯ 211 ಮಂದಿಗೆ ಸೋಂಕು ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಏರಿಕೆ ಕಂಡಿದ್ದು, ಶುಕ್ರವಾರ ದಾಖಲೆಯ 211 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರು, ಮೈಸೂರು ಹೊರತುಪಡಿಸಿ ದ.ಕ. ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್‌ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಗುರುವಾರ 106 ಮಂದಿಗೆ ಸೋಂಕು ದೃಢಪಟ್ಟಿತ್ತು. ಒಬ್ಬರು ಸಾವನ್ನಪ್ಪಿದ್ದು, ಒಟ್ಟು 33 ಮಂದಿ ಗುಣಮುಖರಾಗಿದ್ದಾರೆ. 713 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂರು ಕ್ಲಸ್ಟರ್‌ ವಲಯ
ಮಂಗಳೂರಿನ ಎರಡು ಖಾಸಗಿ ಮೆಡಿಕಲ್‌ ಕಾಲೇಜು ವಸತಿ ನಿಲಯ ಮತ್ತು ಒಂದು ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ವಸತಿ ನಿಲಯ ಪ್ರದೇಶವನ್ನು ಕ್ಲಸ್ಟರ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮೂರೂ ವಸತಿ ನಿಲಯಗಳಲ್ಲಿ ಒಟ್ಟು 56 ಮಂದಿಗೆ ಕೊರೊನಾ ದೃಢಪಟ್ಟಿದ್ದು, 961 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಕೊರೊನಾ ದೃಢಪಟ್ಟವರು ಕೇರಳ ಮೂಲದ ಟ್ರಾವೆಲ್‌ ಹಿಸ್ಟರಿ ಹೊಂದಿದವರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯ 21ವಿದ್ಯಾರ್ಥಿಗಳು, ಓರ್ವ ಶಿಕ್ಷಕರಲ್ಲಿ ಕೋವಿಡ್ ದೃಢ : ಶಾಲೆಗೆ 7 ದಿನ ರಜೆ

ಕಾಸರಗೋಡು: 71 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 71 ಮಂದಿಗೆ ಕೊರೊನಾ ದೃಢಪಟ್ಟಿದೆ. 34 ಮಂದಿ ಗುಣಮುಖರಾಗಿದ್ದಾರೆ. 506 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇರಳದಲ್ಲಿ 5,296 ಪ್ರಕರಣ
ಕೇರಳದಲ್ಲಿ ಶುಕ್ರವಾರ 5,296 ಮಂದಿಗೆ ಕೊರೊನಾ ದೃಢಪಟ್ಟಿದೆ. 2,404 ಮಂದಿ ಗುಣಮುಖರಾಗಿದ್ದಾರೆ. 35 ಮಂದಿ ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 49,305ಕ್ಕೇರಿದೆ.

ಕೊಡಗು: ಮಂದಿಗೆ 15 ಕೊರೊನಾ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಂದಿಗೆ 15 ಕೊರೊನಾ ದೃಢಪಟ್ಟಿದೆ. ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 231 ಸಕ್ರಿಯ ಪ್ರಕರಣಗಳಿವೆ. 41 ಕಂಟೈನ್‌ಮೆಂಟ್‌ ವಲಯಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.47 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

25,462 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 25,462 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 20,219 ಮಂದಿಗೆ ಲಸಿಕೆ ನೀಡಲಾಗಿದ್ದು 15,784 ಮಂದಿಗೆ ಮೊದಲ ಮತ್ತು 4,435 ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನ ನಡೆಯುತ್ತಿದ್ದು, ಜ. 7ರಂದು 14,676 ಮಂದಿ ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಈವರೆಗೆ ಒಟ್ಟು 84,545 ಮಂದಿ ಮಕ್ಕಳು ಲಸಿಕೆ ಪಡೆದಿದ್ದಾರೆ.

ಉಡುಪಿ: 5,243 ಮಂದಿಗೆ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 5,243 ಮಂದಿಗೆ ಲಸಿಕೆ ಹಾಕಲಾಗಿದ್ದು 3,048 ಮಂದಿ ಮೊದಲ ಹಾಗೂ 2,195 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಜ. 3ರಿಂದ ಇಲ್ಲಿಯವರೆಗೆ ಶೇ. 59.5 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.