ಭಾರತದಿಂದ ಬಂದವರಲ್ಲೇ ಕೋವಿಡ್ ಸೋಂಕು: ನೇಪಾಲ
Team Udayavani, Jun 11, 2020, 2:05 PM IST
ಕಾಠ್ಮಂಡು: ನೇಪಾಲಕ್ಕೆ ಕೋವಿಡ್ ಸೋಂಕು ಹಬ್ಬಲು ಭಾರತವೇ ಕಾರಣ ಎಂದು ಈ ಮೊದಲು ದೂರಿದ್ದ ನೇಪಾಲದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರೀಗ ಮತ್ತೆ ಭಾರತವನ್ನು ದೂಷಿಸುವ ಮಾತುಗಳನ್ನಾಡಿದ್ದಾರೆ.
ಭಾರತದಿಂದ ಬಂದ ನೇಪಾಲಿಗರಲ್ಲಿ ಶೇ.85ರಷ್ಟು ಮಂದಿಗೆ ಸೋಂಕು ಇದೆ ಎಂದು ಹೇಳಿದ್ದಾರೆ. ಅಲ್ಲದೇ ಭಾರತದಿಂದ ಕಾರ್ಮಿಕರು ಬರುತ್ತಿದ್ದಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಜನರು ತಾಯ್ನಾಡಿಗೆ ಬಂದಿದ್ದು, ಅವರನ್ನು ಸೂಕ್ತ ರೀತಿಯಲ್ಲಿ ಪ್ರತ್ಯೇಕವಾಗಿರಿಸಲು, ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಇದರಿಂದ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದಿದ್ದಾರೆ.
ನೇಪಾಲದಲ್ಲಿ ಹೊಸ 279 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 4364ಕ್ಕೇರಿದೆ. ಈವರೆಗೆ 15 ಮಂದಿ ಮೃತಪಟ್ಟಿದ್ದಾರೆ. ಭಾರತದೊಂದಿಗೆ ಗಡಿ ಹಂಚಿಕೊಂಡ 2ನೇ ಪ್ರಾಂತ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ಇದೇ ವೇಳೆ ಕೋವಿಡ್ ನಿಯಂತ್ರಣಕ್ಕೆ ಒಲಿ ಅವರ ಸರಕಾರ ವಿಫಲವಾಗಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲೇ ಅವರು ಭಾರತದ ಮೇಲೆ ದೂರು ಹೇಳುತ್ತಿದ್ದಾರೆ ಎಂಬುದು ಅಲ್ಲಿನ ರಾಜಕೀಯ ವಲಯ ಹೇಳುತ್ತಿದೆ. ಎರಡು ತಿಂಗಳು ಕಾಲ ಲಾಕ್ಡೌನ್ ಮಾಡಿದರೂ ನೇಪಾಲದಲ್ಲಿ ಸೋಂಕು ಹರಡುವುದು ನಿಯಂತ್ರಣಕ್ಕೆ ಬಂದಿಲ್ಲ. ಆದರೆ ಕ್ವಾರಂಟೈನ್ ಕೇಂದ್ರಗಳೇ ಈಗ ಕೋವಿಡ್ ಹಾಟ್ಸ್ಪಾಟ್ಗಳಾಗಿದ್ದು ಅಲ್ಲಿ ಕೋವಿಡ್ ಇದ್ದವರಿಂದ ಇಲ್ಲದವರಿಗೆ ಅತಿ ಹೆಚ್ಚು ಸೋಂಕು ಹರಡಿರುವುದು ಸಾಬೀತಾಗಿದೆ. ನೇಪಾಲದ ಕ್ವಾರಂಟೈನ್ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಕರ್ಯವೂ ಇಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ