ಕೋವಿಡ್ ಸೋಂಕು “ಇನ್ನೂ ತೀವ್ರ ಸ್ವರೂಪ ಪಡೆದಿಲ್ಲ’ : ವಿಶ್ವಸಂಸ್ಥೆ ಎಚ್ಚರಿಕೆ
Team Udayavani, Jul 12, 2020, 3:55 PM IST
ಜಿನೀವಾ: ಕೋವಿಡ್-19 ಸೋಂಕಿನ ಬಗ್ಗೆ ಮಹತ್ವದ ಸಂದೇಶ ಕಳುಹಿಸಿರುವ ವಿಶ್ವಸಂಸ್ಥೆ ಕೋವಿಡ್ ಇನ್ನು ತೀವ್ರ ಸ್ವರೂಪವನ್ನು ಪಡೆದುಕೊಂಡಿಲ್ಲ ಇನ್ನಾದರೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಎಚ್ಚೆತ್ತುಕೊಳ್ಳಿ ಎಂದು ಹೇಳಿದೆ.
ಮಹಾ ನಿರ್ದೇಶಕರಾದ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ವಿಶ್ವದ ಬಹುತೇಕ ಭಾಗಗಳಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ಸೋಂಕಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ದಿನದಿಂದ ದಿನಕ್ಕೆ ವೈರಸ್ ಕೆಟ್ಟ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕಳೆದ ಆರು ವಾರಗಳಲ್ಲಿ ಜಾಗತಿಕವಾಗಿ ಕೋವಿಡ್ ವೈರಸ್ ಪ್ರಕರಣಗಳು ದ್ವಿಗುಣವಾಗಿದೆ ಎಂದಿದ್ದಾರೆ.
ಕೆಲವು ದೇಶಗಳಿಂದ ಯುಕೆಗೆ ಮರಳುವ ಅಥವಾ ಭೇಟಿ ನೀಡುವ ಜನರಿಗೆ ಕ್ವಾರಂಟೈನ್ ನಿಯಮಗಳಲ್ಲಿ ಇಂದಿನಿಂದ ಸಡಿಲಗೊಳಿಸಿದ ಬೆನ್ನಲ್ಲೇ ಘೆಬ್ರೆಯೆಸಸ್ ಅವರು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಕೋವಿಡ್ ವೈರಸ್ ವಿಶ್ವದ ಕೆಲ ಶ್ರೀಮಂತ ರಾಷ್ಟ್ರಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ.
ಕೋವಿಡ್ ಕಟ್ಟಿಹಾಕಲು ಸೋಂಕಿತ ಜನರನ್ನು ಪ್ರತ್ಯೇಕವಾಗಿರಿಸುವುದು, ಶೀಘ್ರ ಪತ್ತೆ ಪರೀಕ್ಷೆಗಳನ್ನು ನಡೆಸುವುದು, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಸೋಂಕಿತರ ಸಂಪರ್ಕ ಮತ್ತು ಕ್ವಾರೈಂಟೈನ್ ಮುಂತಾದವುಗಳನ್ನು ಯಶಸ್ವಿಯಾಗಿ ನಡೆಸಿದಾಗಲೇ ಸೋಂಕನ್ನು ನಿಯಂತ್ರಣಕ್ಕೆ ತರಬಹುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ