ಕರ್ನಾಟಕ ಪೊಲೀಸ್ ವ್ಯವಸ್ಥೆ ಸುಭದ್ರವಾಗಿದೆ : ಸಿಪಿಐ ಜೆ.ಕರುಣೇಶ ಗೌಡ
Team Udayavani, Jan 25, 2022, 8:15 PM IST
ರಬಕವಿ ಬನಹಟ್ಟಿ: ದೇಶದಲ್ಲಿ ಕರ್ನಾಟಕ ಪೊಲೀಸ್ ಅತ್ಯಂತ ದಕ್ಷತೆಯಿಂದ ಕೂಡಿದ ಸುಭದ್ರವಾದ ವ್ಯವಸ್ಥೆಯಾಗಿದೆ. ಪೊಲೀಸ್ ಇಲಾಖೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಬನಹಟ್ಟಿಯ ಸಿಪಿಐ ಜೆ.ಕರುಣೇಶಗೌಡ ತಿಳಿಸಿದರು.
ಅವರು ಭಾನುವಾರ ಸ್ಥಳೀಯ ಡಾ.ಸ.ಜ.ನಾಗಲೋಟಿಮಠ ಸಾಂಸ್ಕೃತಿಕ ಭವನದಲ್ಲಿ ಪಿಎಸ್ಐ ಆಗಿ ಆಯ್ಕೆಯಾದ ಸ್ಥಳೀಯ ಸಾಧರನ್ನು ಸನ್ಮಾನಿಸಿ ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧರಕನ್ನು ಸನ್ಮಾನಿಸುವ ಅಗತ್ಯವಿದೆ. ಇದು ಮುಂಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಯಾವುದೆ ವೃತ್ತಿಯಲ್ಲಿ ಸತತ ಪ್ರಯತ್ನ ಮತ್ತು ಕಾರ್ಯದಲ್ಲಿ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದರೆ ಸಾಧನೆ ಸಾಧ್ಯ ಎಂದು ಜಿ.ಕರುಣೇಶಗೌಡ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಜಯವಂತ ಕಾಡದೇವರ ಮಾತನಾಡಿ, ಸಾಧನೆಗೆ ಕೊನೆ ಎಂಬುದು ಇಲ್ಲ. ಪಿಎಸ್ಐ ಹುದ್ದೆ ಕೊನೆಯದಲ್ಲ. ಇದಕ್ಕಿಂತ ಹೆಚ್ಚಿನ ಹುದ್ದೆಗಳು ಇವೆ. ಅವುಗಳಿಗಾಗಿ ಇನ್ನಷ್ಟು ಪ್ರಯತ್ನಿಸಿ ಎಂದರು.
ಕಾರ್ಯಕ್ರಮದಲ್ಲಿ ಪಿಎಸ್ಐ ಆಗಿ ನೇಮಕೊಂಡ ದೀಪಾ ಹಿರೇಮಠ, ಸಾಗರ ಕಮಲದಿನ್ನಿ, ಅಕ್ಷಯ ದೇವಾಡಿಗ, ಸಾಧಿಯಾ ಗುರ್ಲಹೊಸೂರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಮ.ಕ. ಮೇಗಾಡಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯ ಮೇಲೆ ರಜನಿ ಶೇಠೆ, ಪ್ರಕಾಶ ಹೋಳಗಿ, ಮನೋಹರ ಸುಟ್ಟಟ್ಟಿ, ಪ್ರಾಚಾರ್ಯ ಬಿ.ಆರ್.ಗೊಡ್ಡಾಳೆ, ವಿನಾಯಕ ತಾಂಬಟ ಇದ್ದರು.
ಗೋಪಾಲ ಭಟ್ಟಡ ಸ್ವಾಗತಿಸಿದರು. ಕನ್ಯಾಕುಮಾರಿ ಹೂಗಾರ ನಿರೂಪಿಸಿದರು. ಕಿರಣ ಆಳಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಈರಣ್ಣ ಜಿಗಜಿನ್ನಿ, ಸೋಮು ಹಿರೇಮಠ, ಪ್ರೊ.ಗೀತಾ ಸಜ್ಜನ, ಜ್ಯೋತಿ ಸಜ್ಜಿ, ಲಕ್ಷ್ಮಿ ಕರಿಗಾರ, ಶಿರೋಳ, ವಿಶ್ವಜ ಕಾಡದೇವರ ಸೇರಿದಂತೆ ಅನೇಕರು ಇದ್ದರು.
ಇದನ್ನೂ ಓದಿ : ಕಳ್ಳತನ ಮಾಡದಂತೆ ಬುದ್ಧಿ ಮಾತು ಹೇಳಿದ ತಂದೆಯನ್ನೇ ಕೊಂದ ಮಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ