ಕಷ್ಟದಲ್ಲಿದ್ದಾಗ ಸಂತೈಸಿದವರಿಗೆ ಚಿರಋಣಿ: ಡಿಕೆಶಿ


Team Udayavani, Oct 27, 2019, 3:09 AM IST

kashtadalidada

ಬೆಂಗಳೂರು: “ಆಗಸ್ಟ್‌ 29ರಂದು ಇ.ಡಿ ಅಧಿಕಾರಿಗಳು ನೀಡಿದ ನೋಟಿಸ್‌ಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದೆ. ಏಳು ಬಾರಿ ಶಾಸಕನಾಗಿ ಆಯ್ಕೆಯಾದ ಜನಪ್ರತಿನಿಧಿ ನಾನು. ಅಂದು ಇಲ್ಲಿಂದ ಹೋದವನು ನೇರವಾಗಿ ಪಕ್ಷದ ಹಾಗೂ ಕಾರ್ಯಕರ್ತರ ದೇವಾಲಯಕ್ಕೆ ಇಂದು ಬಂದಿದ್ದೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಭಾವುಕರಾಗಿ ನುಡಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ 51 ದಿನ ಜೈಲು ವಾಸ ಅನುಭವಿಸಿ ಶನಿವಾರ ಬೆಂಗಳೂರಿಗೆ ಆಗಮಿಸಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿಗೆ ಮೆರವಣಿಗೆಯ ಮೂಲಕ ಆಗಮಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ವಿಶೇಷ ಸಂದರ್ಭ. ಭಕ್ತ ಹಾಗೂ ಭಗವಂತನಿಗೆ ನಡೆಯುವ ವ್ಯವಹಾರ. ಹಾಗಾಗಿಯೇ ಇಲ್ಲಿಗೆ ಮೊದಲು ಬಂದಿದ್ದೇನೆ. ಕಲ್ಲು ಪ್ರಕೃತಿ.

ಅದನ್ನು ಕಡಿದಾಗ ಆಕೃತಿ ಪಡೆಯುತ್ತದೆ. ಅಕೃತಿಯನ್ನು ಪೂಜಿಸಿದಾಗ ಸಂಸ್ಕೃತಿಯಾಗುತ್ತದೆ. ಮಾಧ್ಯಮ ಗಳು ನನ್ನನ್ನು ಪರ ಹಾಗೂ ವಿರುದ್ಧವಾಗಿ ವಿಮರ್ಶಿಸಿದ್ದಾರೆ. ನನಗೆ ಯಾಕೆ ಈ ಸ್ಥಿತಿ ಬಂತು ಅಂತ ಬಹಳ ಯೋಚಿಸಿದ್ದೇನೆ. ನನ್ನ ಮೇಲೆ ಪಕ್ಷ, ಕಾರ್ಯಕರ್ತರು, ಮುಖಂಡರು ಅಭಿಮಾನ, ಪ್ರೀತಿ ತೋರಿಸಿದರು. ಬಿಜೆಪಿ ಯವರೂ ಸಹಕರಿಸಿದರು. ಅವರೆಲ್ಲರ ಋಣ ತೀರಿಸಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ’ ಎಂದರು.

“ರಾಜಕಾರಣ ಬೇರೆ, ಆತ್ಮೀಯತೆ ಬೇರೆ. ಮನುಷ್ಯತ್ವ ಬೇಕು. ರಾಜಕಾರಣದಲ್ಲಿ ಯಾವ ಪಕ್ಷವೂ ಶಾಶ್ವತ ಅಲ್ಲ. ಇದನ್ನೆಲ್ಲ ಯೋಚಿಸಿ ನನ್ನ ಬದುಕು ನಡೆಸುತ್ತಿದ್ದೇನೆ. ನಾನು ಕಷ್ಟದಲ್ಲಿದ್ದಾಗ ಸ್ವಾಮೀಜಿಗಳು, ಎಲ್ಲಾ ಪಕ್ಷದ ನಾಯಕರು ನನ್ನನ್ನು, ಕುಟುಂಬದವರನ್ನು ಭೇಟಿ ಮಾಡಿ, ಸಮಾಧಾನ ಪಡಿಸಿದ್ದಾರೆ. ಅವರೆಲ್ಲರಿಗೂ ಋಣಿಯಾಗಿದ್ದೇನೆ’ ಎಂದರು.

ಭಾವುಕರಾದ ಮಾಜಿ ಸಚಿವ: ಜನರ ಮನಸ್ಸಲ್ಲಿ ಶಿವಕುಮಾರ್‌ ಮೋಸ ಮಾಡಿಲ್ಲ, ತಪ್ಪು ಮಾಡಿಲ್ಲ ಎಂಬುದಿದೆ. ತಪ್ಪೆಸಗಿದ್ದರೆ ದೇವರು, ನ್ಯಾಯಾಂಗ ವ್ಯವಸ್ಥೆ ನನ್ನನ್ನು ಶಿಕ್ಷಿಸುತ್ತದೆ. ನಾನು ನನ್ನ ತಾಯಿಗೆ ಕೇಳದೆ, ಅವರನ್ನು ನಂಬದೇ ಹೇಗೆ ಬಾಳಲಿ. ನಾನು ನನ್ನ ತಾಯಿಗೆ ಬೇನಾಮಿದಾರ. ನಾನು ಕಾನೂನನ್ನು ಪ್ರಶ್ನಿಸಲ್ಲ. ನ್ಯಾಯಾಲಯದಿಂದ ಅನ್ಯಾಯದ ತೀರ್ಪು ಬರಬಾರದು ಎಂದು ಹೇಳುತ್ತಾ ಬಂದವನು. ನನ್ನ ವಿರುದ್ಧ ಆದಾಯ ತೆರಿಗೆ ಇಲಾಖೆ ದೂರು ದಾಖಲಿಸಿದೆ. ನನ್ನ ವಿರುದ್ಧ ಅಕ್ರಮ ಹಣ ಸಾಗಾಟ ಪ್ರಕರಣ ದಾಖಲಾಗಿದೆ. ಅದೆಲ್ಲಕ್ಕೂ ಮುಂದೆ ಉತ್ತರ ನೀಡುತ್ತೇನೆ ಎಂದರು.

ಕ್ಷಮೆ ಕೋರಿದ ಡಿಕೆಶಿ: ತಾವು ದೆಹಲಿಯಿಂದ ಬೆಂಗಳೂರಿಗೆ ಬಂದಾಗ ತಮ್ಮನ್ನು ಸ್ವಾಗತಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬಂದಿ ದ್ದರು. ಆ ಸಮಯದಲ್ಲಿ ಟ್ರಾಫಿಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಯಾಗಿದೆ. ಈ ಸಂದರ್ಭದಲ್ಲಿ ಜನರು ಸ್ವಯಂ ಪ್ರೇರಿತರಾಗಿ ಬಂದಿದ್ದರು. ಇಂತಹ ಸಂದರ್ಭ ದಲ್ಲಿ ಹಣ ಕೊಟ್ಟು ಕರೆಸಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಸಾಕಷ್ಟು ಕಾಯಕರ್ತರು ನನಗೆ ಬೆಂಬಲ ವ್ಯಕ್ತಪಡಿ ಸಿದ್ದಾರೆ. ಟ್ರಾಫಿಕ್‌ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಿದ್ದರೆ, ಅವರ ಕ್ಷಮೆ ಕೋರು ತ್ತೇನೆ ಎಂದು ಹೇಳಿದರು.

ಕೈ ಕೊಯ್ದುಕೊಂಡ ಡಿಕೆಶಿ ಅಭಿಮಾನಿ
ಕುಣಿಗಲ್‌ (ತುಮಕೂರು): ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಬರುತ್ತಿರುವ ಸುದ್ದಿ ತಿಳಿದ ಸಂತಸದಲ್ಲಿ ಡಿಕೆಶಿ ಅಭಿಮಾನಿ, ಜೋಡಿಹೊಸಹಳ್ಳಿ ಗ್ರಾಮದ ಬೋರೇಗೌಡ ಅವರು, ಶುಕ್ರವಾರ ರಾತ್ರಿ ಬ್ಲೇಡಿನಿಂದ ತಮ್ಮ ಕೈಯನ್ನು ಕೊಯ್ದುಕೊಂಡಿದ್ದಾರೆ. “ನನಗೆ ದೆಹಲಿಗೆ ಬರಲು ಆಗಲಿಲ್ಲ. ಬೆಂಗಳೂರಿಗೆ ಶನಿವಾರ ಬಂದು ನಿಮ್ಮನ್ನು ನೋಡುತ್ತೇನೆ.

ನಿಮಗೋಸ್ಕರ ಪ್ರಾಣ ಕೊಡಲು ಸಿದ್ಧನಿದ್ದೇನೆ. ಇಷ್ಟೇ ಅಣ್ಣ, ನನ್ನ ಕೈಯಲ್ಲಿ ಆಗುವುದು. ನನಗೆ ಡಿಕೆಶಿಯೇ ಬಾಸ್‌. ನನ್ನಿಂದ ನಿಮಗೆ ಅಭಿಮಾನ ಕೊಡುವುದು ಇಷ್ಟೇ. ನಾನು ಡಿಕೆಶಿಯ ಅಪ್ಪಟ ಅಭಿಮಾನಿ. ಸಾಯುವವರೆಗೂ ನಿಮ್ಮ ಜೊತೆಯಲ್ಲೇ ಅಭಿಮಾನಿಯಾಗಿ ಇರುತ್ತೇನೆ. ಇದು ನನ್ನ ಸಣ್ಣ ಕಾಣಿಕೆ’ ಎನ್ನುತ್ತಾ ಬ್ಲೇಡಿನಿಂದ ತಮ್ಮ ಕೈ ಮೇಲೆ “ನನ್ನ ನಾಯಕ ಡಿಕೆಎಸ್‌’ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.